AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊದಲು ಮುದ್ದು ಮಾಡೋದು, ಆಮೇಲೆ ಅಳೋದು’: ಕರಣ್ ಜೋಹರ್​ಗೆ ಬಿಸಿಮುಟ್ಟಿಸಿದ ಮನೋಜ್ ಬಾಜ್​ಪೇಯಿ

Manoj Bajpayee: ಬಾಲಿವುಡ್​ನ ಪ್ರತಿಭಾವಂತ ನಟ ಮನೋಜ್ ಬಾಜ್​ಪೇಯಿ, ಬಾಲಿವುಡ್​ನ ಸ್ಟಾರ್ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ಅವರ ಇತ್ತೀಚೆಗಿನ ಸ್ಟಾರ್ ನಟರ ಸಂಭಾವನೆ ಕುರಿತ ಹೇಳಿಕೆಯನ್ನು ಕಟುವಾಗಿ ಟೀಕೆ ಮಾಡಿದ್ದಾರೆ.

‘ಮೊದಲು ಮುದ್ದು ಮಾಡೋದು, ಆಮೇಲೆ ಅಳೋದು’: ಕರಣ್ ಜೋಹರ್​ಗೆ ಬಿಸಿಮುಟ್ಟಿಸಿದ ಮನೋಜ್ ಬಾಜ್​ಪೇಯಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 03, 2024 | 8:04 PM

Share

ಹಿಂದಿ ಸಿನಿಮಾಗಳ ಸೋಲಿಗೆ ಒಬ್ಬೊಬ್ಬರು ಒಂದೊಂದು ರೀತಿಯ ಕಾರಣಗಳನ್ನು ಹುಡುಕುತ್ತಿದ್ದಾರೆ. ಕೆಲವರು ನಿರ್ದೇಶಕರನ್ನು ದೂರಿದರೆ ಇನ್ನೂ ಕೆಲವರು ನಟರು ತೆಗೆದುಕೊಳ್ಳುವ ಸಂಭಾವನೆ ಬಗ್ಗೆ ಕಂಪ್ಲೇಂಟ್ ಮಾಡುತ್ತಿದ್ದಾರೆ. ಈ ಮಧ್ಯೆ ನಟ ಮನೋಜ್ ಬಾಜ್​ಪೇಯಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಸ್ಟಾರ್ಗಳನ್ನು ಮೊದಲು ಮೆಚ್ಚಿ ಹೊಗಳಿದ್ದು ನಿರ್ಮಾಪಕರೇ, ಈಗ ಅವರನ್ನು ದೂರುತ್ತಿರುವವರು ನಿರ್ಮಾಪಕರೇ ಎಂದು ಆರೋಪ ಮಾಡಿದ್ದಾರೆ. ಅವರ ಹೇಳಿಕೆಯನ್ನು ಅನೇಕರು ಒಪ್ಪಿದ್ದಾರೆ.

ಇತ್ತೀಚೆಗೆ ಕರಣ್ ಜೋಹರ್ ಅವರು ಸ್ಟಾರ್ ಹೀರೋಗಳ ಸಂಭಾವನೆ ಬಗ್ಗೆ ಮಾತನಾಡಿದ್ದರು. ಅಷ್ಟೇ ಅಲ್ಲ ಅವರು ಕಲಾವಿದರು ದೊಡ್ಡ ಸಂಬಾವನೆ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಸಿನಿಮಾದ ಮೇಕಿಂಗ್ ಚಾರ್ಜ್ ಹೆಚ್ಚುತ್ತಿದ್ದು, ಇದಕ್ಕೆ ಕೆಲ ಹೀರೋಗಳ ಕಾರಣ ಎಂದು ವಾದ ಮುಂದಿಟ್ಟಿದ್ದರು. ಈ ಎಲ್ಲಾ ವಿಚಾರಗಳ ಬಗ್ಗೆ ಮನೋಜ್ ಬಾಜ್​ಪೇಯಿ ಮಾತನಾಡಿದ್ದಾರೆ.

‘ಹಾಗಾದರೆ ಸ್ಟಾರ್​ಗಳಿಗೆ ಸಂಭಾವನೆ ನೀಡುತ್ತಿರುವವರು ಯಾರು? ಈ ಮೊದಲು ಸಂಭಾವನೆ ನಿಡಿದವರು ಯಾರು’ ಎಂದು ಮನೋಜ್ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಸ್ಟಾರ್ಗಳು ದೊಡ್ಡ ಮಟ್ಟದ ಸಂಭಾವನೆ ಕೇಳಿದಾಗ ಕೊಡುವುದಿಲ್ಲ ಎಂದು ನೇರವಾಗಿ ಹೇಳಬೇಕು ಎಂದು ಪರೋಕ್ಷವಾಗಿ ಮಾತನಾಡಿದ್ದಾರೆ. ಮನೋಜ್ ಮಾತನಾಡಿದ್ದು ಕರಣ್ ಜೋಹರ್ ಬಗ್ಗೆ ಎನ್ನಲಾಗುತ್ತಿದೆ.

‘ಸ್ಟಾರ್ಗಳೇ ಸಿನಿಮಾಗೆ ಮುಖ್ಯವಾಗುತ್ತಾರೆ. ಯಾರಾದರೂ ನಿರ್ಮಾಪಕರು ಸ್ಟಾರ್ ಹೀರೋ ಜೊತೆ ಕೈ ಜೋಡಿಸಿದರು ಎಂದರೆ ಅವರ ಭುಜದ ಮೇಲೆ ಹತ್ತಿ ಕೂರುತ್ತಾರೆ. ಯಾವುದಾದರೂ ಸ್ಟಾರ್ ಹೀರೋ ಸೌಕರ್ಯ ಕೇಳಿದ ಎಂದರೆ ಅದರಲ್ಲಿ ತಪ್ಪಿಲ್ಲ. ಅದು ಹುಚ್ಚುತನದ್ದಾಗದಿದ್ದರೆ ಆಯಿತು. ಅನೇಕ ಸ್ಟಾರ್​ಗಳು ಸಿನಿಮಾದ ಸಂಭಾವನೆ ಕಡಿಮೆ ಪಡೆದು, ಲಾಭದ ಹಣದಲ್ಲಿ ಪಾಲು ಪಡೆಯುತ್ತಿದ್ದಾರೆ’ ಎಂದಿದ್ದಾರೆ ಮನೋಜ್.

ಇದನ್ನೂ ಓದಿ:‘ಸ್ಟಾರ್ ನಟರು ಸೂರ್ಯ, ಚಂದ್ರರನ್ನೇ ಕೇಳುತ್ತಾರೆ’; ಕರಣ್ ಜೋಹರ್ ಅಸಮಾಧಾನ

ಮನೋಜ್ ಅವರು ಕರಣ್ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ‘ಕೆಲವು ನಿರ್ಮಾಪಕರು ಸ್ಟಾರ್ ಹೀರೋಗಳನ್ನು ಮುದ್ದಿನಿಂದ ನೋಡಿಕೊಳ್ಳುತ್ತಾರೆ. ಅವರ ಭುಜದ ಮೇಲೆ ಹತ್ತಿ ಕೂರುತ್ತಾರೆ. ಈಗ ಅವರೇ ಹೀರೋಗಳು ಸಂಭಾವನೆ ಕಡಿಮೆ ಮಾಡಿಕೊಳ್ಳಬೇಕು ಎನ್ನುತ್ತಾರೆ. ನೀವು ಮೊದಲು ನನಗೆ ರಸಗುಲ್ಲಾ ಹಾಗೂ ಪ್ರೋಟೀನ್ ಶೇಕ್ ನೀಡಿ. ಹಾಗಾದಾಗ ನಾನು ಮ್ಯಾರಾಥನ್ ಓಡಬಹುದು. ನಾನು ಮಾತ್ರ ಈ ರೇಸ್​ ಅನ್ನು ಗೆಲ್ಲಬಹುದು ಎಂದು ನೀವು ಅಂದುಕೊಂಡಿರುತ್ತೀರಿ. ಆ ಬಳಿಕ ನಾನೆಷ್ಟು ರಸಗುಲ್ಲಾ ತಿಂದೆ, ಎಷ್ಟು ಪ್ರೋಟಿನ್ ಶೇಕ್ ಕುಡಿದೆ ಎಂಬ ಲೆಕ್ಕ ಹೇಳಿ ಕಣ್ಣೀರು ಹಾಕುತ್ತೀರಿ’ ಎಂದು ಅವರು ಹೇಳಿದ್ದಾರೆ. ಇದು ಕರಣ್ ಜೋಹರ್ ಅವರಿಗೆ ಹೇಳಿದ ಮಾತು ಎಂದು ಅನೇಕರು ಭಾವಿಸಿದ್ದಾರೆ.

‘ನನಗೆ ಯಾರೂ ಇಷ್ಟೊಂದು ಹಣ ನೀಡಿಲ್ಲ. ನಾನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಸ್ಟಾಫ್​ಗಳ ಜೊತೆ ಹೋಗುತ್ತೇನೆ. ನಾನು ಕೆಲವೊಮ್ಮೆ ಕೆಲ ಮೂಲಭೂತ ಸೌಕರ್ಯಗಳನ್ನು ತ್ಯಾಗ ಮಾಡಿದ್ದು ಇದೆ. ಆದಾಗ್ಯೂ ನನಗೆ ಆಫರ್ ನೀಡಿಲ್ಲ. ಈಗಲೂ ನಿಮಗೆ ಸ್ಟಾರ್​ಗಳೇ ಬೇಕು. ಅವರಿಂದ ಹೆಚ್ಚು ಲಾಭ ಆಗಬಹುದು ಎನ್ನುವ ಭ್ರಮೆ ನಿಮಗೆ. ಕೊನೆಯಲ್ಲಿ ಎಲ್ಲರೂ ಆಡೋದು ಜೂಜನ್ನೇ’ ಎಂದು ಮನೋಜ್ ಕೋಪ ಹೊರಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Sat, 3 August 24

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ