AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manoj Bajpayee: ಶೂ ಇಲ್ಲದೇ ಬಡವನಂತೆ ನಿಂತಿದ್ದ ಮನೋಜ್​ ಬಾಜಪಾಯಿ ಜೊತೆ ಶಾರುಖ್​ ನಡೆದುಕೊಂಡಿದ್ದು ಹೇಗೆ?​

Discotheque | Shah Rukh Khan: ಮನೋಜ್​ ಬಾಜಪಾಯಿ ಅವರಿಗೆ ಈಗ ಸಖತ್ ಬೇಡಿಕೆ ಇದೆ. ಅದಕ್ಕೆ ತಕ್ಕಂತೆ ಶ್ರೀಮಂತಿಕೆಯೂ ಬಂದಿದೆ. ಆದರೆ ಒಂದು ಕಾಲದಲ್ಲಿ ಪರಿಸ್ಥಿತಿ ಹೀಗಿರಲಿಲ್ಲ. ಅವರ ಬಳಿ ಶೂ ಕೂಡ ಇರಲಿಲ್ಲ.

Manoj Bajpayee: ಶೂ ಇಲ್ಲದೇ ಬಡವನಂತೆ ನಿಂತಿದ್ದ ಮನೋಜ್​ ಬಾಜಪಾಯಿ ಜೊತೆ ಶಾರುಖ್​ ನಡೆದುಕೊಂಡಿದ್ದು ಹೇಗೆ?​
ಮನೋಜ್ ಬಾಜಪಾಯಿ, ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on:Feb 28, 2023 | 3:32 PM

ನಟ ಶಾರುಖ್​ ಖಾನ್​ (Shah Rukh Khan) ಅವರನ್ನು ಸಿನಿಮಾಗಳಲ್ಲಿ ನೋಡಿ ಅಭಿಮಾನಿಗಳು ಎಂಜಾಯ್​ ಮಾಡುತ್ತಾರೆ. ಆದರೆ ಅವರ ರಿಯಲ್​ ಲೈಫ್​ ವ್ಯಕ್ತಿತ್ವ ಯಾವ ರೀತಿ ಇದೆ ಎಂಬುದು ಗೊತ್ತಿರುವುದು ಕೆಲವೇ ಮಂದಿಗೆ ಮಾತ್ರ. ಕಿಂಗ್​ ಖಾನ್​ ಜೊತೆ ಒಡನಾಡಿದ ಎಲ್ಲರಿಗೂ ಅವರ ನಿಜವಾದ ವ್ಯಕ್ತಿತ್ವದ ಪರಿಚಯ ಆಗಿರುತ್ತದೆ. ಆ ಬಗ್ಗೆ ಅನೇಕ ಸೆಲೆಬ್ರಿಟಿಗಳು ಹೇಳಿಕೊಂಡಿದ್ದುಂಟು. ಈಗ ನಟ ಮನೋಜ್​ ಬಾಜಪಾಯಿ (Manoj Bajpayee) ಕೂಡ ಶಾರುಖ್​ ಖಾನ್​ ಬಗ್ಗೆ ಮಾತನಾಡಿದ್ದಾರೆ. ಮೊದಲ ಬಾರಿಗೆ ಮನೋಜ್​ ಅವರನ್ನು ಡಿಸ್ಕೋಟೆಕ್​ಗೆ (Discotheque) ಕರೆದುಕೊಂಡು ಹೋಗಿದ್ದೇ ಶಾರುಖ್​ ಖಾನ್​. ಆ ನೆನಪುಗಳನ್ನು ಅವರೀಗ ಮೆಲುಕು ಹಾಕಿದ್ದಾರೆ.

ಬಿಹಾರದ ಹಳ್ಳಿಯಿಂದ ಬಂದವರು ಮನೋಜ್​ ಬಾಜಪಾಯಿ. ರಂಗಭೂಮಿಯಲ್ಲಿ ಅನುಭವ ಹೊಂದಿದ್ದ ಅವರು ನಂತರ ಚಿತ್ರರಂಗಕ್ಕೆ ಕಾಲಿಟ್ಟು ಅತ್ಯುತ್ತಮ ನಟ ಎನಿಸಿಕೊಂಡರು. ಈಗ ಅವರಿಗೆ ಸಖತ್ ಬೇಡಿಕೆ ಇದೆ. ಅದಕ್ಕೆ ತಕ್ಕಂತೆ ಶ್ರೀಮಂತಿಕೆಯೂ ಬಂದಿದೆ. ಆದರೆ ಒಂದು ಕಾಲದಲ್ಲಿ ಪರಿಸ್ಥಿತಿ ಹೀಗಿರಲಿಲ್ಲ. ಅವರ ಬಳಿ ಶೂ ಕೂಡ ಇರಲಿಲ್ಲ.

ಇದನ್ನೂ ಓದಿ: Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

‘ತುಂಬ ವರ್ಷಗಳ ಹಿಂದೆ ದೆಹಲಿಯಲ್ಲಿ ಗುಂಗ್ರೂ ಎಂಬ ನೈಟ್​ ಕ್ಲಬ್​ ಇತ್ತು. ಆ ಸಮಯದಲ್ಲಿ ನಾನು ಚಪ್ಪಲಿ ಧರಿಸಿ ನಿಂತಿದ್ದೆ. ನಂತರ ನನಗೋಸ್ಕರ ಶೂಗಳ ವ್ಯವಸ್ಥೆ ಮಾಡಿಸಲಾಯಿತು. ಶಾರುಖ್​ ಖಾನ್ ಅವರು ನನ್ನನ್ನು ಡಿಸ್ಕೋಟೆಕ್​ ಒಳಗೆ ಕರೆದುಕೊಂಡು ಹೋದರು. ಅದೇ ಮೊದಲ ಬಾರಿಗೆ ನಾನು ಅದನ್ನು ನೋಡಿದ್ದು’ ಎಂದು ಮನೋಜ್​ ಬಾಜಪಾಯಿ ಹೇಳಿದ್ದಾರೆ.

ಮನೆಗೆ ಬಂದ ಅತಿಥಿಗಳಿಗೆ ಶಾರುಖ್​ ಸತ್ಕಾರ:

ಮುಂಬೈನಲ್ಲಿ ಶಾರುಖ್​ ಖಾನ್ ಅವರ ಐಷಾರಾಮಿ ಬಂಗಲೆ ಇದೆ. ಇದಕ್ಕೆ ‘ಮನ್ನತ್​’ ಎಂದು ಹೆಸರು. ‘ಮನ್ನತ್​’ಗೆ ಬರುವ ಎಲ್ಲ ಅತಿಥಿಗಳನ್ನು ಶಾರುಖ್ ಖಾನ್​ ಅವರು ತುಂಬ ಆತ್ಮೀಯವಾಗಿ ಉಪಚರಿಸುತ್ತಾರೆ. ಅದರ ಅನುಭವ ಹಲವರಿಗೆ ಆಗಿದೆ. ಇತ್ತೀಚೆಗೆ ‘ದಿ ರೊಮ್ಯಾಂಟಿಕ್ಸ್​’ ನಿರ್ದೇಶಕಿ ಸ್ಮೃತಿ ಮುಂದ್ರಾ ಕೂಡ ಆ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ನೋಡಲು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಶಾರುಖ್​ ಖಾನ್​ ಅಭಿಮಾನಿಗಳು

‘ಶಾರುಖ್​ ಖಾನ್​ ಅವರು ಎಂತಹ ವ್ಯಕ್ತಿ ಎಂಬುದನ್ನು ಈ ಘಟನೆ ವಿವರಿಸುತ್ತದೆ. ಅವರು ನೀಡಿದ ಆತಿಥ್ಯ ಅತ್ಯುನ್ನತವಾಗಿತ್ತು. ತಮ್ಮ ತಂಡದಲ್ಲಿ ತುಂಬ ಜನರು ಇದ್ದೆವು. ಎಲ್ಲರಿಗೂ ಶಾರುಖ್​ ಖಾನ್​ ಮನೆಯಲ್ಲಿ ಚಹ ಮತ್ತು ತಿಂಡಿಯ ವ್ಯವಸ್ಥೆ ಮಾಡಲಾಗಿತ್ತು. ನಾವು ಇರುವ ರೂಮಿನ ಒಳಗೆ ಅವರು ಬಂದರು. ಆಗ ನನಗೆ ಅಚ್ಚರಿ ಕಾದಿತ್ತು. ನಮ್ಮ ತಂಡದ ಪ್ರತಿಯೊಬ್ಬರ ಹೆಸರನ್ನೂ ಶಾರುಖ್​ ಖಾನ್​ ತಿಳಿದುಕೊಂಡಿದ್ದರು. ಎಲ್ಲರ ಹೆಸರು ಕರೆದು ಮಾತನಾಡಿಸಿದರು. ಪ್ರತಿಯೊಬ್ಬರ ಕೆಲಸ ಮತ್ತು ಸಮಯಕ್ಕೆ ಗೌರವ ನೀಡಿದರು’ ಎಂದು ಸ್ಮೃತಿ ಮುಂದ್ರಾ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:32 pm, Tue, 28 February 23

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್