AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡ್ ಫಾದರ್ ಇಲ್ಲ, ಆದರೆ ಒಟಿಟಿ ಮೂಲಕ ಬದಲಾಯಿತು ಈ ಕಲಾವಿದರ ಬದುಕು

‘ಫ್ಯಾಮಿಲಿ ಮ್ಯಾನ್’ ಸೀರಿಸ್ ಮೂಲಕ ಗಮನ ಸೆಳೆದವರು ಮನೋಜ್ ಬಾಜ್​ಪಾಯಿ. ಅವರ ನಟನೆ ಸಾಕಷ್ಟು ಗಮನ ಸೆಳೆಯಿತು. ಅವರಿಗೆ ಇಷ್ಟು ವರ್ಷ ಚಿತ್ರರಂಗ ತಂದುಕೊಟ್ಟ ಖ್ಯಾತಿಗಿಂತ ಹೆಚ್ಚಿನ ಖ್ಯಾತಿಯನ್ನು ‘ಫ್ಯಾಮಿಲಿ ಮ್ಯಾನ್’ ನೀಡಿತ್ತು. ಅವರ ನಟನೆ ಸಾಕಷ್ಟು ಗಮನ ಸೆಳೆದಿತ್ತು. ಅವರ ಮ್ಯಾನರಿಸಂ ಸಖತ್ ಇಷ್ಟ ಆಗಿತ್ತು.

ಗಾಡ್ ಫಾದರ್ ಇಲ್ಲ, ಆದರೆ ಒಟಿಟಿ ಮೂಲಕ ಬದಲಾಯಿತು ಈ ಕಲಾವಿದರ ಬದುಕು
ಮನೋಜ್ ಹಾಗೂ ಇತರರು
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 22, 2024 | 9:20 AM

Share

ಬಾಲಿವುಡ್​ನಲ್ಲಿ ಮಿಂಚಬೇಕು ಎಂದರೆ ಗಾಡ್ ಫಾದರ್ ಬೇಕು ಅಥವಾ ದೊಡ್ಡ ನಿರ್ಮಾಪಕರ ಬೆಂಬಲ ಬೇಕು ಎಂಬುದು ಅನೇಕರ ನಂಬಿಕೆ. ಒಂದೊಮ್ಮೆ ಗಾಡ್ ಫಾದರೆ ಇಲ್ಲದೆ ಬಾಲಿವುಡ್​ನಲ್ಲಿ ನುಗ್ಗಲು ಪ್ರಯತ್ನಿಸಿ ವಿಫಲವಾದವರು ಅನೇಕರು ಇದ್ದಾರೆ. ಆದರೆ, ಕೆಲವು ಕಲಾವಿದರು ಯಾವುದೇ ಹಿನ್ನೆಲೆ ಇಲ್ಲದೆ ಒಟಿಟಿ ಮೂಲಕ ಬಣ್ಣದ ಲೋಕದಲ್ಲಿ ಮಿಂಚಿದರು. ಈ ಸಾಲಿನಲ್ಲಿ ಮನೋಜ್ ಬಾಜ್​ಪಾಯಿ (Manoj Bajpayee), ಜಿತೇಂದ್ರ ಕುಮಾರ್ ಸೇರಿ ಅನೇಕ ಸ್ಟಾರ್​ಗಳಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ.

ಪಂಕಜ್ ತ್ರಿಪಾಠಿ

ಪಂಕಜ್ ತ್ರಿಪಾಠಿ ಅವರು ‘ಮಿರ್ಜಾಪುರ್’ ಸರಣಿ ಮೂಲಕ ದೊಡ್ಡ ಮೊತ್ತದ ಖ್ಯಾತಿ ಪಡೆದರು. ಅವರಿಗೆ ಯಾವುದೇ ಹಿನ್ನೆಲೆ ಇಲ್ಲ. ಅವರು ಬಾಲಿವುಡ್​ ಸಿನಿಮಾಗಳ ಮೂಲಕವೂ ಗುರುತಿಸಿಕೊಳ್ಳುತ್ತಿದ್ದಾರೆ.  ‘ಮಿರ್ಜಾಪುರ್ 3’ ಸೀರಿಸ್​ನಲ್ಲಿ ಅವರು ನಟಿಸಿದ್ದಾರೆ.

ಅಲಿ ಫಜಲ್

ಅಲಿ ಫಜಲ್​ ಅವರಿಗೂ ‘ಮಿರ್ಜಾಪುರ್’ ಸೀರಿಸ್ ಮೂಲಕ ಸಖತ್ ಫೇಮಸ್ ಆದರು. ಅವರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳೋಕೆ ಸಾಕಷ್ಟು ಕಷ್ಟಪಟ್ಟರು. ಈಗ ಅವರಿಗೆ ವೆಬ್ ಸೀರಿಸ್ ಖ್ಯಾತಿ ತಂದುಕೊಟ್ಟಿದೆ. ಅವರು ಗುಡ್ಡು ಪಂಡಿತ್ ಆಗಿ ಗುರುತಿಸಿಕೊಂಡಿದ್ದಾರೆ.

ಮನೋಜ್ ಬಾಜ್​ಪಾಯಿ

‘ಫ್ಯಾಮಿಲಿ ಮ್ಯಾನ್’ ಸೀರಿಸ್ ಮೂಲಕ ಗಮನ ಸೆಳೆದವರು ಮನೋಜ್ ಬಾಜ್​ಪಾಯಿ. ಅವರ ನಟನೆ ಸಾಕಷ್ಟು ಗಮನ ಸೆಳೆಯಿತು. ಅವರಿಗೆ ಇಷ್ಟು ವರ್ಷ ಚಿತ್ರರಂಗ ತಂದುಕೊಟ್ಟ ಖ್ಯಾತಿಗಿಂತ ಹೆಚ್ಚಿನ ಖ್ಯಾತಿಯನ್ನು ‘ಫ್ಯಾಮಿಲಿ ಮ್ಯಾನ್’ ನೀಡಿತ್ತು. ಅವರ ನಟನೆ ಸಾಕಷ್ಟು ಗಮನ ಸೆಳೆದಿತ್ತು. ಅವರ ಮ್ಯಾನರಿಸಂ ಸಖತ್ ಇಷ್ಟ ಆಗಿತ್ತು. ಅವರು ‘ದಿ ಫ್ಯಾಮಿಲಿ ಮ್ಯಾನ್ 3’ ಸೀರಿಸ್​ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಇದರ ಶೂಟಿಂಗ್ ಇನ್ನೂ ಆರಂಭ ಆಗಿಲ್ಲ ಎನ್ನಲಾಗಿದೆ.

ವಿಕ್ರಾಂತ್ ಮಾಸ್ಸಿ

ವಿಕ್ರಾಂತ್ ಮಾಸ್ಸಿ ಅವರು ಸಿನಿಮಾಗಿಂತ ಒಟಿಟಿ ಸೀರೀಸ್​ಗಳ ಮೂಲಕ ಹೆಚ್ಚು ಗಮನ ಸೆಳೆದಿದ್ದಾರೆ. ಅವರಿಗೆ ಯಾವುದೇ ಇಂಡಸ್ಟ್ರಿ ಕನೆಕ್ಷನ್ ಇಲ್ಲ. ಅವರ ಸಕಸ್ಸ್ ಅನೇಕರಿಗೆ ಮಾದರಿ. ಅವರ ನಟನೆಯ ‘12th ಫೇಲ್’ ಸಿನಿಮಾ ಸೂಪರ್ ಹಿಟ್ ಆಯಿತು.

ಜಿತೇಂದ್ರ ಕುಮಾರ್

‘ಪಂಚಾಯತ್’ ಸೀರಿಸ್ ಮೂಲಕ ಜಿತೇಂದ್ರ ಕುಮಾರ್ ಭರ್ಜರಿ ಗಮನ ಸೆಳೆದರು. ಅವರು ಪಂಚಾಯತ್ ಕಾರ್ಯದರ್ಶಿ ಆಗಿ ಭರ್ಜರಿ ಫೇಮಸ್ ಆಗಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ಯಾವುದೇ ಗಾಡ್ ಫಾದರ್ ಇಲ್ಲ.  ಅವರ ನಟನೆಯ ‘ಪಂಚಾಯತ್ 3’ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಾಣಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಅಮಿತ್ ಸಾಧ್

ಅಮಿತ್ ಸಾಧ್ ಅವರಿಗೆ ಒಟಿಟಿ ಜಗತ್ತಲ್ಲಿ ಸಖತ್ ಬೇಡಿಕೆ ಇದೆ. ಹಲವು ಸೂಪರ್ ಹಿಟ್ ಸೀರಿಸ್​ಗಳಲ್ಲಿ ಅವರು ನಟಿಸಿದ್ದಾರೆ. ಅವರಿಗೆ ಇಂಡಸ್ಟ್ರಿಯಲ್ಲಿ ಯಾವುದೇ ಗಾಡ್ ಫಾದರ್ ಇಲ್ಲ. ಅವರು ದೊಡ್ಡ ಮಟ್ಟದಲ್ಲಿ ನೆಲೆ ಕಂಡುಕೊಂಡಿದ್ದಾರೆ.

ಜೈದೀಪ್ ಅಹ್ಲಾವತ್

‘ಪಾತಾಳ್ ಲೋಕ್’ ಸೀರಿಸ್ ಮೂಲಕ ಜೈದೀಪ್ ಅಹ್ಲಾವತ್ ಅವರ ಖ್ಯಾತಿ ಸಖತ್ ಹೆಚ್ಚಿದೆ. ಈ ಸೀರಿಸ್​ನಲ್ಲಿ ಅವರು ಪೊಲೀಸ್ ಅಧಿಕಾರಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಅವರು ಯಾವುದೇ ಗಾಡ್ ಫಾದರ್ ಇಲ್ಲದೆ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡಿದ್ದಾರೆ.

ಇದನ್ನೂ ಓದಿ: ಜೀ5ನಲ್ಲಿ ರಿಲೀಸ್ ಆದ ‘ಹಡ್ಡಿ’ ಚಿತ್ರ; ಮಂಗಳಮುಖಿ ಪಾತ್ರದಲ್ಲಿ ಪವರ್​ಫುಲ್ ನಟನೆ ತೋರಿದ ನವಾಜುದ್ದೀನ್ ಸಿದ್ಧಿಕಿ

ನವಾಜುದ್ದೀನ್ ಸಿದ್ದಿಕಿ

‘ಸೇಕ್ರೆಡ್ ಗೇಮ್ಸ್’ ಮೂಲಕ ನವಾಜುದ್ದೀನ್ ಸಿದ್ದಿಕಿ ಅವರ ಖ್ಯಾತಿ ಸಾಕಷ್ಟು ಹೆಚ್ಚಾಯಿತು. ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಕಂಡ ಈ ಸೀರಿಸ್ ಮೂಲಕ ಅವರಿಗೆ ಜನಪ್ರಿಯತೆ ಸಿಕ್ಕಿದೆ. ಭಿನ್ನ ನಟನೆಯ ಮೂಲಕ ಅವರು ಗಮನ ಸೆಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!