AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬನ್ಸಾಲಿ ರೀತಿಯ ನಿರ್ದೇಶಕರು ನನಗೆ ಚಾನ್ಸ್ ಕೊಡಲ್ಲ’; ಮನೋಜ್ ಬಾಜ್​ಪಾಯಿ ನೇರಮಾತು

‘ದೇವದಾಸ್’ ಸಿನಿಮಾದಲ್ಲಿ ನಟಿಸಲು ಮನೋಜ್​ಗೆ ಬನ್ಸಾಲಿ ಅವರು ಆಫರ್ ನೀಡಿದ್ದರು. ಚುನ್ನಿಲಾಲ್ ಪಾತ್ರವನ್ನು ಮನೋಜ್ ಮಾಡಬೇಕಿತ್ತು. ‘ದೇವದಾಸ್’ ಚಿತ್ರದಲ್ಲಿ ಕಥಾ ನಾಯಕನ ಗೆಳೆಯನ  ಪಾತ್ರದಲ್ಲಿ ಚುನ್ನಿಲಾಲ್ ಕಾಣಿಸಿಕೊಳ್ಳುತ್ತಾನೆ. ಈ ಪಾತ್ರವನ್ನು ಮನೋಜ್ ಮಾಡಬೇಕಿತ್ತು.

‘ಬನ್ಸಾಲಿ ರೀತಿಯ ನಿರ್ದೇಶಕರು ನನಗೆ ಚಾನ್ಸ್ ಕೊಡಲ್ಲ’; ಮನೋಜ್ ಬಾಜ್​ಪಾಯಿ ನೇರಮಾತು
ಬನ್ಸಾಲಿ-ಮನೋಜ್
ರಾಜೇಶ್ ದುಗ್ಗುಮನೆ
|

Updated on: Aug 01, 2024 | 10:46 AM

Share

ಮನೋಜ್ ಬಾಜ್​ಪಾಯಿ ಅವರ ನಟನೆಯ 100ನೇ ಸಿನಿಮಾ ‘ಭಯ್ಯಾ ಜಿ’ ಇತ್ತೀಚೆಗೆ ರಿಲೀಸ್ ಆಗಿದೆ. ಅವರು ತಮ್ಮ ಕರಿಯರ್​ನಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕೆಲವು ಸಿನಿಮಾಗಳು ಫ್ಲಾಪ್ ಎನಿಸಿಕೊಂಡರೆ ಕೆಲವು ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿದೆ. ಅವರಿಗೆ ಕೆಲವು ಖ್ಯಾತ ನಿರ್ದೇಶಕರ ಜೊತೆ ಕೆಲಸ ಮಾಡಬೇಕು ಎನ್ನುವ ಆಸೆ ಇತ್ತು. ಆದರೆ, ಅವರು ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವಾಗಲೇ ಅವರಿಗೆಲ್ಲ ವಯಸ್ಸಾಗಿತ್ತು. ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆ ಕೆಲಸ ಮಾಡಬೇಕು ಎಂಬುದು ಅವರ ಆಸೆ ಆಗಿತ್ತು. ಆದರೆ, ಆ ಆಸೆ ಈಡೇರಲೇ ಇಲ್ಲ.

ರೇಡಿಯೋ ನಶಾ ಜೊತೆ ಮನೋಜ್ ಮಾತನಾಡಿದ್ದಾರೆ. ‘ನಾನು ಗುಲ್ಜರ್ ಅವರ ಜೊತೆ ಕೆಲಸ ಮಾಡೋಕೆ ಸಾಧ್ಯವಾಗಿಲ್ಲ. ನನಗೆ ಗೋವಿಂದ್ ನಿಹಲಾನಿ ಜೊತೆ ಕೆಲಸ ಮಾಡಬೇಕಿತ್ತು. ನಾನು ಚಿತ್ರರಂಗಕ್ಕೆ ಕಾಲಿಡುವಾಗ ಇವರೆಲ್ಲ ತಮ್ಮ ವೃತ್ತಿ ಜೀವನದ ಕೊನೆಯ ಹಂತದಲ್ಲಿ ಇದ್ದರು. ನನಗೆ ಶ್ಯಾಮ್ ಬೆಂಗಾಲಿ ಜೊತೆ ಕೆಲಸ ಮಾಡೋ ಅವಕಾಶ ಸಿಕ್ಕಿತು ಎಂದಿದ್ದಾರೆ’ ಮನೋಜ್.

‘ಸಂಜಯ್ ಲೀಲಾ ಬನ್ಸಾಲಿ ಅವರ ಜೊತೆ ಕೆಲಸ ಮಾಡಬೇಕು. ಆದರೆ, ಅವರು ಮಾಡುವ ಸಿನಿಮಾಗಳಲ್ಲಿ ನನ್ನಂಥ ಕಲಾವಿದರ ಅಗತ್ಯವೇ ಇರುವುದಿಲ್ಲ. ನನ್ನಲ್ಲಿ ಯಾವ ಸುಂದರ ಅಂಶವಿದೆ ಎಂದು ಅವರು ತೋರಿಸುತ್ತಾರೆ? ಅವರು ನಿಜಕ್ಕೂ ಭಿನ್ನ’ ಎಂದಿದ್ದಾರೆ ಮನೋಜ್. ಅವರು ಇದನ್ನು ಹಾಸ್ಯದ ರೀತಿಯಲ್ಲಿ ಹೇಳಿದ್ದಾರೆ. ಮುಂದೊಂದು ದಿನ ಮನೋಜ್​ ಅವರಿಗೆ ಬನ್ಸಾಲಿ ಜೊತೆ ಕೆಲಸ ಮಾಡೋ ಅವಕಾಶ ಸಿಗಲಿ ಎಂದು ಫ್ಯಾನ್ಸ್ ಕೋರಿದ್ದಾರೆ.

ಇದನ್ನೂ ಓದಿ: ಮನೋಜ್​ ಬಾಜ್​ಪಾಯಿಗೆ ಬಂದಿತ್ತು ಆತ್ಮಹತ್ಯೆಯ ಆಲೋಚನೆ; ಗೆಳೆಯರ ಸಹಾಯದಿಂದ ಬದುಕಿದ ನಟ

ಈ ಮೊದಲು ‘ದೇವದಾಸ್’ ಸಿನಿಮಾದಲ್ಲಿ ನಟಿಸಲು ಮನೋಜ್​ಗೆ ಬನ್ಸಾಲಿ ಅವರು ಆಫರ್ ನೀಡಿದ್ದರು. ಚುನ್ನಿಲಾಲ್ ಪಾತ್ರವನ್ನು ಮನೋಜ್ ಮಾಡಬೇಕಿತ್ತು. ‘ದೇವದಾಸ್’ ಚಿತ್ರದಲ್ಲಿ ಕಥಾ ನಾಯಕನ ಗೆಳೆಯನ  ಪಾತ್ರದಲ್ಲಿ ಚುನ್ನಿಲಾಲ್ ಕಾಣಿಸಿಕೊಳ್ಳುತ್ತಾನೆ. ಈ ಪಾತ್ರವನ್ನು ಮನೋಜ್ ಮಾಡಬೇಕಿತ್ತು. ಆದರೆ, ಈ ಚಿತ್ರದಲ್ಲಿ ಹೀರೋ ಆಗಬೇಕು ಎನ್ನುವ ಕನಸು ಮನೋಜ್​ಗೆ ಇತ್ತು. ಈ ಕಾರಣಕ್ಕೆ ಅವರು ಆಫರ್ ತಿರಸ್ಕರಿಸಿದರು. ಆ ಬಳಿಕ ಜಾಕಿ ಶ್ರಾಫ್ ಈ ಪಾತ್ರವನ್ನು ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!