AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಗದರ್​ 2’ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆ ಬಗ್ಗೆ ಮನೋಜ್​ ದೇಸಾಯಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಈ ರೀತಿ ಮಾಸ್​ ಆಗಿದ್ದರೆ ಚಿತ್ರಮಂದಿರದಲ್ಲಿ ಜನರು ಎಂಜಾಯ್​ ಮಾಡುತ್ತಾರೆ ಎಂಬುದು ಅವರ ಅಭಿಪ್ರಾಯ. ‘ಜವಾನ್​’ ಸಿನಿಮಾ ಕೂಡ ಮಾಸ್​ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದು ಮನೋಜ್​ ದೇಸಾಯಿ ಊಹಿಸಿದ್ದಾರೆ.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ
ಶಾರುಖ್​ ಖಾನ್​, ಮನೋಜ್​ ದೇಸಾಯಿ
ಮದನ್​ ಕುಮಾರ್​
|

Updated on:Aug 23, 2023 | 7:18 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರ ಬಹುನಿರೀಕ್ಷಿತ ‘ಜವಾನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಲಿದೆ ಎಂದು ಪ್ರದರ್ಶಕ ಮನೋಜ್​ ದೇಸಾಯಿ ಭವಿಷ್ಯ ನುಡಿದಿದ್ದಾರೆ. ಮುಂಬೈನಲ್ಲಿ ಮನೋಜ್​ ದೇಸಾಯಿ ಅವರು ಪ್ರಮುಖ ಪ್ರದರ್ಶಕರಾಗಿ ಗುರುತಿಸಿಕೊಂಡಿದ್ದಾರೆ. ಪ್ರಸಿದ್ಧ ‘ಮರಾಠಾ ಮಂದಿರ್​’ ಚಿತ್ರಮಂದಿರವನ್ನು ಅವರು ನಡೆಸುತ್ತಿದ್ದಾರೆ. ಸಾವಿರಾರು ಸಿನಿಮಾಗಳು ಈ ಚಿತ್ರಮಂದಿರದಲ್ಲಿ ಸೂಪರ್​ ಹಿಟ್​ ಆಗಿದೆ. ಬಾಲಿವುಡ್​ನ ಎಲ್ಲ ಸ್ಟಾರ್​ ನಟರು ಮತ್ತು ನಿರ್ಮಾಪಕರು ಮನೋಜ್​ ದೇಸಾಯಿ (Manoj Desai) ಜೊತೆ ನಂಟು ಹೊಂದಿದ್ದಾರೆ. ನಿರ್ಮಾಪಕರೂ ಆಗಿರುವ ಅವರಿಗೆ ಚಿತ್ರರಂಗದ ಬಗ್ಗೆ ತುಂಬ ಸ್ಪಷ್ಟವಾದ ಅಭಿಪ್ರಾಯ ಇದೆ. ಸಾಕಷ್ಟು ವರ್ಷಗಳ ಅನುಭವ ಅವರಿಗೆ ಇದೆ. ಆ ಅನುಭವದ ಆಧಾರದಲ್ಲಿ ಅವರು ಅನೇಕ ಸಿನಿಮಾಗಳ ಭವಿಷ್ಯ ನುಡಿದಿದ್ದುಂಟು. ಈಗ ಮನೋಜ್​ ದೇಸಾಯಿ ಅವರು ಜವಾನ್​’ (Jawan Movie) ಸಿನಿಮಾದ ಬಾಕ್ಸ್​ ಆಫೀಸ್​ ಗಳಿಕೆ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಸಿನಿಮಾ 500 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ಇದೆ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ.

‘ಜವಾನ್​ ಸಿನಿಮಾ ಖಂಡಿತವಾಗಿಯೂ 500 ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ. ಪ್ರೇಕ್ಷಕರಿಗೆ ಇಷ್ಟವಾದರೆ ಮಾತ್ರ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಫ್ಲೇವರ್​ ಇದೆ. ಹಾಗಾಗಿ ಜನರಿಗೆ ಈ ಚಿತ್ರ ಇಷ್ಟ ಆಗಲಿದೆ’ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ. ‘ಬಾಲಿವುಡ್​ ಹಂಗಾಮಾ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್​ 7ರಂದು ‘ಜವಾನ್​’ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ದಿನ ವಿದೇಶದಲ್ಲಿ 50 ಕೋಟಿ ರೂ. ಕಲೆಕ್ಷನ್​ ಮಾಡುತ್ತಾ ‘ಜವಾನ್​’? ಜೋರಾಗಿದೆ ಲೆಕ್ಕಾಚಾರ

ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ, ನಯನತಾರಾ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದ ಕಲಾವಿದರು ‘ಜವಾನ್​’ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಹಾಲಿವುಡ್​ನ ಸಾಹಸ ನಿರ್ದೇಶಕರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಈ ಚಿತ್ರದಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇರಲಿವೆ. ಚಿತ್ರಮಂದಿರದಲ್ಲಿ ‘ಜವಾನ್​’ ದೊಡ್ಡ ಧಮಾಕಾ ಸೃಷ್ಟಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ವರ್ಷ ಆರಂಭದಲ್ಲಿ ಬಿಡುಗಡೆ ಆದ ‘ಪಠಾಣ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅದೇ ರೀತಿ ‘ಜವಾನ್​’ ಕೂಡ ಸದ್ದು ಮಾಡುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ‘ಜವಾನ್​’ ಚಿತ್ರಕ್ಕಾಗಿ ತಮ್ಮದೇ ಹಳೇ ನಿಯಮ ಮುರಿದುಕೊಂಡ್ರಾ ನಯನತಾರಾ?

‘ಗದರ್​ 2’ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆ ಬಗ್ಗೆ ಮನೋಜ್​ ದೇಸಾಯಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಈ ರೀತಿ ಮಾಸ್​ ಆಗಿದ್ದರೆ ಚಿತ್ರಮಂದಿರದಲ್ಲಿ ಜನರು ಎಂಜಾಯ್​ ಮಾಡುತ್ತಾರೆ ಎಂಬುದು ಅವರ ಅಭಿಪ್ರಾಯ. ‘ಜವಾನ್​’ ಸಿನಿಮಾ ಕೂಡ ಮಾಸ್​ ಪ್ರೇಕ್ಷಕರಿಗೆ ಇಷ್ಟವಾಗಲಿ ಎಂದು ಮನೋಜ್​ ದೇಸಾಯಿ ಊಹಿಸಿದ್ದಾರೆ. ಶಾರುಖ್​ ಖಾನ್​ ಒಡೆತನದ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಿವ್ಯೂ ವಿಡಿಯೋ ಧೂಳೆಬ್ಬಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Wed, 23 August 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?