AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಗದರ್​ 2’ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆ ಬಗ್ಗೆ ಮನೋಜ್​ ದೇಸಾಯಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಈ ರೀತಿ ಮಾಸ್​ ಆಗಿದ್ದರೆ ಚಿತ್ರಮಂದಿರದಲ್ಲಿ ಜನರು ಎಂಜಾಯ್​ ಮಾಡುತ್ತಾರೆ ಎಂಬುದು ಅವರ ಅಭಿಪ್ರಾಯ. ‘ಜವಾನ್​’ ಸಿನಿಮಾ ಕೂಡ ಮಾಸ್​ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದು ಮನೋಜ್​ ದೇಸಾಯಿ ಊಹಿಸಿದ್ದಾರೆ.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ
ಶಾರುಖ್​ ಖಾನ್​, ಮನೋಜ್​ ದೇಸಾಯಿ
ಮದನ್​ ಕುಮಾರ್​
|

Updated on:Aug 23, 2023 | 7:18 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರ ಬಹುನಿರೀಕ್ಷಿತ ‘ಜವಾನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಲಿದೆ ಎಂದು ಪ್ರದರ್ಶಕ ಮನೋಜ್​ ದೇಸಾಯಿ ಭವಿಷ್ಯ ನುಡಿದಿದ್ದಾರೆ. ಮುಂಬೈನಲ್ಲಿ ಮನೋಜ್​ ದೇಸಾಯಿ ಅವರು ಪ್ರಮುಖ ಪ್ರದರ್ಶಕರಾಗಿ ಗುರುತಿಸಿಕೊಂಡಿದ್ದಾರೆ. ಪ್ರಸಿದ್ಧ ‘ಮರಾಠಾ ಮಂದಿರ್​’ ಚಿತ್ರಮಂದಿರವನ್ನು ಅವರು ನಡೆಸುತ್ತಿದ್ದಾರೆ. ಸಾವಿರಾರು ಸಿನಿಮಾಗಳು ಈ ಚಿತ್ರಮಂದಿರದಲ್ಲಿ ಸೂಪರ್​ ಹಿಟ್​ ಆಗಿದೆ. ಬಾಲಿವುಡ್​ನ ಎಲ್ಲ ಸ್ಟಾರ್​ ನಟರು ಮತ್ತು ನಿರ್ಮಾಪಕರು ಮನೋಜ್​ ದೇಸಾಯಿ (Manoj Desai) ಜೊತೆ ನಂಟು ಹೊಂದಿದ್ದಾರೆ. ನಿರ್ಮಾಪಕರೂ ಆಗಿರುವ ಅವರಿಗೆ ಚಿತ್ರರಂಗದ ಬಗ್ಗೆ ತುಂಬ ಸ್ಪಷ್ಟವಾದ ಅಭಿಪ್ರಾಯ ಇದೆ. ಸಾಕಷ್ಟು ವರ್ಷಗಳ ಅನುಭವ ಅವರಿಗೆ ಇದೆ. ಆ ಅನುಭವದ ಆಧಾರದಲ್ಲಿ ಅವರು ಅನೇಕ ಸಿನಿಮಾಗಳ ಭವಿಷ್ಯ ನುಡಿದಿದ್ದುಂಟು. ಈಗ ಮನೋಜ್​ ದೇಸಾಯಿ ಅವರು ಜವಾನ್​’ (Jawan Movie) ಸಿನಿಮಾದ ಬಾಕ್ಸ್​ ಆಫೀಸ್​ ಗಳಿಕೆ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಸಿನಿಮಾ 500 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ಇದೆ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ.

‘ಜವಾನ್​ ಸಿನಿಮಾ ಖಂಡಿತವಾಗಿಯೂ 500 ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ. ಪ್ರೇಕ್ಷಕರಿಗೆ ಇಷ್ಟವಾದರೆ ಮಾತ್ರ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಫ್ಲೇವರ್​ ಇದೆ. ಹಾಗಾಗಿ ಜನರಿಗೆ ಈ ಚಿತ್ರ ಇಷ್ಟ ಆಗಲಿದೆ’ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ. ‘ಬಾಲಿವುಡ್​ ಹಂಗಾಮಾ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್​ 7ರಂದು ‘ಜವಾನ್​’ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ದಿನ ವಿದೇಶದಲ್ಲಿ 50 ಕೋಟಿ ರೂ. ಕಲೆಕ್ಷನ್​ ಮಾಡುತ್ತಾ ‘ಜವಾನ್​’? ಜೋರಾಗಿದೆ ಲೆಕ್ಕಾಚಾರ

ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ, ನಯನತಾರಾ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದ ಕಲಾವಿದರು ‘ಜವಾನ್​’ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಹಾಲಿವುಡ್​ನ ಸಾಹಸ ನಿರ್ದೇಶಕರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಈ ಚಿತ್ರದಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇರಲಿವೆ. ಚಿತ್ರಮಂದಿರದಲ್ಲಿ ‘ಜವಾನ್​’ ದೊಡ್ಡ ಧಮಾಕಾ ಸೃಷ್ಟಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ವರ್ಷ ಆರಂಭದಲ್ಲಿ ಬಿಡುಗಡೆ ಆದ ‘ಪಠಾಣ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅದೇ ರೀತಿ ‘ಜವಾನ್​’ ಕೂಡ ಸದ್ದು ಮಾಡುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ‘ಜವಾನ್​’ ಚಿತ್ರಕ್ಕಾಗಿ ತಮ್ಮದೇ ಹಳೇ ನಿಯಮ ಮುರಿದುಕೊಂಡ್ರಾ ನಯನತಾರಾ?

‘ಗದರ್​ 2’ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆ ಬಗ್ಗೆ ಮನೋಜ್​ ದೇಸಾಯಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಈ ರೀತಿ ಮಾಸ್​ ಆಗಿದ್ದರೆ ಚಿತ್ರಮಂದಿರದಲ್ಲಿ ಜನರು ಎಂಜಾಯ್​ ಮಾಡುತ್ತಾರೆ ಎಂಬುದು ಅವರ ಅಭಿಪ್ರಾಯ. ‘ಜವಾನ್​’ ಸಿನಿಮಾ ಕೂಡ ಮಾಸ್​ ಪ್ರೇಕ್ಷಕರಿಗೆ ಇಷ್ಟವಾಗಲಿ ಎಂದು ಮನೋಜ್​ ದೇಸಾಯಿ ಊಹಿಸಿದ್ದಾರೆ. ಶಾರುಖ್​ ಖಾನ್​ ಒಡೆತನದ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಿವ್ಯೂ ವಿಡಿಯೋ ಧೂಳೆಬ್ಬಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Wed, 23 August 23

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!