AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಗದರ್​ 2’ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆ ಬಗ್ಗೆ ಮನೋಜ್​ ದೇಸಾಯಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಈ ರೀತಿ ಮಾಸ್​ ಆಗಿದ್ದರೆ ಚಿತ್ರಮಂದಿರದಲ್ಲಿ ಜನರು ಎಂಜಾಯ್​ ಮಾಡುತ್ತಾರೆ ಎಂಬುದು ಅವರ ಅಭಿಪ್ರಾಯ. ‘ಜವಾನ್​’ ಸಿನಿಮಾ ಕೂಡ ಮಾಸ್​ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದು ಮನೋಜ್​ ದೇಸಾಯಿ ಊಹಿಸಿದ್ದಾರೆ.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ
ಶಾರುಖ್​ ಖಾನ್​, ಮನೋಜ್​ ದೇಸಾಯಿ
ಮದನ್​ ಕುಮಾರ್​
|

Updated on:Aug 23, 2023 | 7:18 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರ ಬಹುನಿರೀಕ್ಷಿತ ‘ಜವಾನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಲಿದೆ ಎಂದು ಪ್ರದರ್ಶಕ ಮನೋಜ್​ ದೇಸಾಯಿ ಭವಿಷ್ಯ ನುಡಿದಿದ್ದಾರೆ. ಮುಂಬೈನಲ್ಲಿ ಮನೋಜ್​ ದೇಸಾಯಿ ಅವರು ಪ್ರಮುಖ ಪ್ರದರ್ಶಕರಾಗಿ ಗುರುತಿಸಿಕೊಂಡಿದ್ದಾರೆ. ಪ್ರಸಿದ್ಧ ‘ಮರಾಠಾ ಮಂದಿರ್​’ ಚಿತ್ರಮಂದಿರವನ್ನು ಅವರು ನಡೆಸುತ್ತಿದ್ದಾರೆ. ಸಾವಿರಾರು ಸಿನಿಮಾಗಳು ಈ ಚಿತ್ರಮಂದಿರದಲ್ಲಿ ಸೂಪರ್​ ಹಿಟ್​ ಆಗಿದೆ. ಬಾಲಿವುಡ್​ನ ಎಲ್ಲ ಸ್ಟಾರ್​ ನಟರು ಮತ್ತು ನಿರ್ಮಾಪಕರು ಮನೋಜ್​ ದೇಸಾಯಿ (Manoj Desai) ಜೊತೆ ನಂಟು ಹೊಂದಿದ್ದಾರೆ. ನಿರ್ಮಾಪಕರೂ ಆಗಿರುವ ಅವರಿಗೆ ಚಿತ್ರರಂಗದ ಬಗ್ಗೆ ತುಂಬ ಸ್ಪಷ್ಟವಾದ ಅಭಿಪ್ರಾಯ ಇದೆ. ಸಾಕಷ್ಟು ವರ್ಷಗಳ ಅನುಭವ ಅವರಿಗೆ ಇದೆ. ಆ ಅನುಭವದ ಆಧಾರದಲ್ಲಿ ಅವರು ಅನೇಕ ಸಿನಿಮಾಗಳ ಭವಿಷ್ಯ ನುಡಿದಿದ್ದುಂಟು. ಈಗ ಮನೋಜ್​ ದೇಸಾಯಿ ಅವರು ಜವಾನ್​’ (Jawan Movie) ಸಿನಿಮಾದ ಬಾಕ್ಸ್​ ಆಫೀಸ್​ ಗಳಿಕೆ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಸಿನಿಮಾ 500 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ಇದೆ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ.

‘ಜವಾನ್​ ಸಿನಿಮಾ ಖಂಡಿತವಾಗಿಯೂ 500 ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ. ಪ್ರೇಕ್ಷಕರಿಗೆ ಇಷ್ಟವಾದರೆ ಮಾತ್ರ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಫ್ಲೇವರ್​ ಇದೆ. ಹಾಗಾಗಿ ಜನರಿಗೆ ಈ ಚಿತ್ರ ಇಷ್ಟ ಆಗಲಿದೆ’ ಎಂದು ಮನೋಜ್​ ದೇಸಾಯಿ ಹೇಳಿದ್ದಾರೆ. ‘ಬಾಲಿವುಡ್​ ಹಂಗಾಮಾ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸೆಪ್ಟೆಂಬರ್​ 7ರಂದು ‘ಜವಾನ್​’ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ದಿನ ವಿದೇಶದಲ್ಲಿ 50 ಕೋಟಿ ರೂ. ಕಲೆಕ್ಷನ್​ ಮಾಡುತ್ತಾ ‘ಜವಾನ್​’? ಜೋರಾಗಿದೆ ಲೆಕ್ಕಾಚಾರ

ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ, ನಯನತಾರಾ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದ ಕಲಾವಿದರು ‘ಜವಾನ್​’ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಹಾಲಿವುಡ್​ನ ಸಾಹಸ ನಿರ್ದೇಶಕರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಈ ಚಿತ್ರದಲ್ಲಿ ಭರ್ಜರಿ ಸಾಹಸ ದೃಶ್ಯಗಳು ಇರಲಿವೆ. ಚಿತ್ರಮಂದಿರದಲ್ಲಿ ‘ಜವಾನ್​’ ದೊಡ್ಡ ಧಮಾಕಾ ಸೃಷ್ಟಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ವರ್ಷ ಆರಂಭದಲ್ಲಿ ಬಿಡುಗಡೆ ಆದ ‘ಪಠಾಣ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಅದೇ ರೀತಿ ‘ಜವಾನ್​’ ಕೂಡ ಸದ್ದು ಮಾಡುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ‘ಜವಾನ್​’ ಚಿತ್ರಕ್ಕಾಗಿ ತಮ್ಮದೇ ಹಳೇ ನಿಯಮ ಮುರಿದುಕೊಂಡ್ರಾ ನಯನತಾರಾ?

‘ಗದರ್​ 2’ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆ ಬಗ್ಗೆ ಮನೋಜ್​ ದೇಸಾಯಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗಳು ಈ ರೀತಿ ಮಾಸ್​ ಆಗಿದ್ದರೆ ಚಿತ್ರಮಂದಿರದಲ್ಲಿ ಜನರು ಎಂಜಾಯ್​ ಮಾಡುತ್ತಾರೆ ಎಂಬುದು ಅವರ ಅಭಿಪ್ರಾಯ. ‘ಜವಾನ್​’ ಸಿನಿಮಾ ಕೂಡ ಮಾಸ್​ ಪ್ರೇಕ್ಷಕರಿಗೆ ಇಷ್ಟವಾಗಲಿ ಎಂದು ಮನೋಜ್​ ದೇಸಾಯಿ ಊಹಿಸಿದ್ದಾರೆ. ಶಾರುಖ್​ ಖಾನ್​ ಒಡೆತನದ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಿವ್ಯೂ ವಿಡಿಯೋ ಧೂಳೆಬ್ಬಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Wed, 23 August 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ