AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ

Emergency Movie: ಒಂದೇ ಕಥಾಹಂದರ ಇಟ್ಟುಕೊಂಡು ಎರಡು ಸಿನಿಮಾ ಬಂದರೆ ಸಮಸ್ಯೆ ಎದುರಾಗುತ್ತದೆ. ಮೊದಲು ರಿಲೀಸ್​ ಆದ ಚಿತ್ರಕ್ಕೆ ಹೆಚ್ಚು ಮೈಲೇಜ್​ ಸಿಗುತ್ತದೆ.

Kangana Ranaut: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 26, 2023 | 7:14 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರ ಸಂಪೂರ್ಣ ಗಮನ ಈಗ ‘ಎಮರ್ಜೆನ್ಸಿ’ ಸಿನಿಮಾದ ಮೇಲಿದೆ. ಈ ಚಿತ್ರದಲ್ಲಿ ತುರ್ತು ಪರಿಸ್ಥಿತಿ ಕುರಿತ ಕಥೆ ಇದೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮತ್ತು ಪೋಸ್ಟರ್​ನಿಂದ ಹೈಪ್​ ಹೆಚ್ಚಾಗಿದೆ. ಹಲವು ಕಾರಣಗಳಿಂದಾಗಿ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಸುದ್ದಿ ಆಗುತ್ತಿದೆ. ಈ ಚಿತ್ರದಲ್ಲಿ ಕಂಗನಾ ರಣಾವತ್​ ಅವರು ಇಂದಿರಾ ಗಾಂಧಿಯ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಅಚ್ಚರಿ ಏನೆಂದರೆ, ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನವೇ ತುರ್ತು ಪರಿಸ್ಥಿತಿ (Emergency) ಕುರಿತು ಇನ್ನೊಂದು ಸಿನಿಮಾ ರಿಲೀಸ್​ ಆಗುತ್ತಿದೆ!

ಒಂದೇ ಕಥಾಹಂದರ ಇಟ್ಟುಕೊಂಡು ಎರಡು ಸಿನಿಮಾ ಬಂದರೆ ಸಮಸ್ಯೆ ಎದುರಾಗುತ್ತದೆ. ಮೊದಲು ರಿಲೀಸ್​ ಆದ ಚಿತ್ರಕ್ಕೆ ಹೆಚ್ಚು ಮೈಲೇಜ್​ ಸಿಗುತ್ತದೆ. ನಂತರ ಬಿಡುಗಡೆ ಆದ ಸಿನಿಮಾ ಎಷ್ಟೇ ಚೆನ್ನಾಗಿದ್ದರೂ ಕೂಡ ಅದು ಕಾಪಿ ಎನಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಅದೇ ಟೆನ್ಷನ್​ ಈಗ ‘ಎಮರ್ಜೆನ್ಸಿ’ ಚಿತ್ರಕ್ಕೆ ಎದುರಾಗುತ್ತಿದೆ. ಯಾಕೆಂದರೆ, ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯ ವಿಷಯವನ್ನೇ ಕೇಂದ್ರವಾಗಿ ಇಟ್ಟುಕೊಂಡು ಮರಾಠಿಯಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತಿದೆ. ‘ಆಣಿ ಬಾಣಿ’ ಎಂಬುದು ಈ ಚಿತ್ರದ ಶೀರ್ಷಿಕೆ.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್​ ನಿರ್ಮಾಣದ ಸಿನಿಮಾಗೆ ನೆಗೆಟಿವ್​ ವಿಮರ್ಶೆ; ಮೂವೀ ಮಾಫಿಯಾ ಮೇಲೆ ಆರೋಪ ಹೊರಿಸಿದ ನಟಿ

ಮರಾಠಿ ಭಾಷೆಯಲ್ಲಿ ತುರ್ತು ಪರಿಸ್ಥಿತಿಯನ್ನು ‘ಆಣಿ ಬಾಣಿ’ ಎನ್ನುತ್ತಾರೆ. ಹಾಗಾಗಿ ಈ ಶೀರ್ಷಿಕೆಯಲ್ಲಿ ಸಿನಿಮಾ ಮಾಡಲಾಗಿದೆ. ಜೂನ್​ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಕಂಗನಾ ರಣಾವತ್​ ಅವರು ಇತ್ತೀಚೆಗಷ್ಟೇ ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​ ದಿನಾಂಕವನ್ನು ಘೋಷಿಸಿದರು. ನವೆಂಬರ್​ 24ರಂದು ತಮ್ಮ ಸಿನಿಮಾವನ್ನು ತೆರೆ ಕಾಣಿಸುವುದಾಗಿ ಅವರು ಹೇಳಿದರು. ಅದರ ಬೆನ್ನಲ್ಲೇ ‘ಆಣಿ ಬಾಣಿ’ ಸಿನಿಮಾದ ರಿಲೀಸ್​ ಡೇಟ್​ ಬಹಿರಂಗ ಆಗಿದೆ. ಇದೇ ವಾರ (ಜೂನ್​ 28) ಈ ಚಿತ್ರ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Kangana Ranaut: ಚಿಕ್ಕ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬಂದ ಹುಡುಗಿಗೆ ಕಂಗನಾ ರಣಾವತ್​ ಕ್ಲಾಸ್​; ವೈರಲ್​ ಆಯ್ತು ಫೋಟೋ

ಕಂಗನಾ ರಣಾವತ್ ಅವರು ಈಗ ಕೇವಲ ನಟಿಯಾಗಿ ಮಾತ್ರ ಉಳಿದುಕೊಂಡಿಲ್ಲ. ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಕೂಡ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಟೀಕು ವೆಡ್ಸ್​ ಶೇರು’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ಬಿಡುಗಡೆ ಆಯಿತು. ‘ಎಮರ್ಜೆನ್ಸಿ’ ಸಿನಿಮಾಗೂ ಕಂಗನಾ ಅವರು ಬಂಡವಾಳ ಹೂಡುವ ಮೂಲಕ ಸಹ-ನಿರ್ಮಾಪಕಿ ಆಗಿದ್ದಾರೆ. ಈ ಚಿತ್ರದ ಮೇಲೆ ಅವರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್