Kangana Ranaut: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ

Emergency Movie: ಒಂದೇ ಕಥಾಹಂದರ ಇಟ್ಟುಕೊಂಡು ಎರಡು ಸಿನಿಮಾ ಬಂದರೆ ಸಮಸ್ಯೆ ಎದುರಾಗುತ್ತದೆ. ಮೊದಲು ರಿಲೀಸ್​ ಆದ ಚಿತ್ರಕ್ಕೆ ಹೆಚ್ಚು ಮೈಲೇಜ್​ ಸಿಗುತ್ತದೆ.

Kangana Ranaut: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ
ಕಂಗನಾ ರಣಾವತ್​
Follow us
|

Updated on: Jun 26, 2023 | 7:14 PM

ನಟಿ ಕಂಗನಾ ರಣಾವತ್​ (Kangana Ranaut) ಅವರ ಸಂಪೂರ್ಣ ಗಮನ ಈಗ ‘ಎಮರ್ಜೆನ್ಸಿ’ ಸಿನಿಮಾದ ಮೇಲಿದೆ. ಈ ಚಿತ್ರದಲ್ಲಿ ತುರ್ತು ಪರಿಸ್ಥಿತಿ ಕುರಿತ ಕಥೆ ಇದೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮತ್ತು ಪೋಸ್ಟರ್​ನಿಂದ ಹೈಪ್​ ಹೆಚ್ಚಾಗಿದೆ. ಹಲವು ಕಾರಣಗಳಿಂದಾಗಿ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಸುದ್ದಿ ಆಗುತ್ತಿದೆ. ಈ ಚಿತ್ರದಲ್ಲಿ ಕಂಗನಾ ರಣಾವತ್​ ಅವರು ಇಂದಿರಾ ಗಾಂಧಿಯ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಅಚ್ಚರಿ ಏನೆಂದರೆ, ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನವೇ ತುರ್ತು ಪರಿಸ್ಥಿತಿ (Emergency) ಕುರಿತು ಇನ್ನೊಂದು ಸಿನಿಮಾ ರಿಲೀಸ್​ ಆಗುತ್ತಿದೆ!

ಒಂದೇ ಕಥಾಹಂದರ ಇಟ್ಟುಕೊಂಡು ಎರಡು ಸಿನಿಮಾ ಬಂದರೆ ಸಮಸ್ಯೆ ಎದುರಾಗುತ್ತದೆ. ಮೊದಲು ರಿಲೀಸ್​ ಆದ ಚಿತ್ರಕ್ಕೆ ಹೆಚ್ಚು ಮೈಲೇಜ್​ ಸಿಗುತ್ತದೆ. ನಂತರ ಬಿಡುಗಡೆ ಆದ ಸಿನಿಮಾ ಎಷ್ಟೇ ಚೆನ್ನಾಗಿದ್ದರೂ ಕೂಡ ಅದು ಕಾಪಿ ಎನಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಅದೇ ಟೆನ್ಷನ್​ ಈಗ ‘ಎಮರ್ಜೆನ್ಸಿ’ ಚಿತ್ರಕ್ಕೆ ಎದುರಾಗುತ್ತಿದೆ. ಯಾಕೆಂದರೆ, ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯ ವಿಷಯವನ್ನೇ ಕೇಂದ್ರವಾಗಿ ಇಟ್ಟುಕೊಂಡು ಮರಾಠಿಯಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತಿದೆ. ‘ಆಣಿ ಬಾಣಿ’ ಎಂಬುದು ಈ ಚಿತ್ರದ ಶೀರ್ಷಿಕೆ.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್​ ನಿರ್ಮಾಣದ ಸಿನಿಮಾಗೆ ನೆಗೆಟಿವ್​ ವಿಮರ್ಶೆ; ಮೂವೀ ಮಾಫಿಯಾ ಮೇಲೆ ಆರೋಪ ಹೊರಿಸಿದ ನಟಿ

ಮರಾಠಿ ಭಾಷೆಯಲ್ಲಿ ತುರ್ತು ಪರಿಸ್ಥಿತಿಯನ್ನು ‘ಆಣಿ ಬಾಣಿ’ ಎನ್ನುತ್ತಾರೆ. ಹಾಗಾಗಿ ಈ ಶೀರ್ಷಿಕೆಯಲ್ಲಿ ಸಿನಿಮಾ ಮಾಡಲಾಗಿದೆ. ಜೂನ್​ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಕಂಗನಾ ರಣಾವತ್​ ಅವರು ಇತ್ತೀಚೆಗಷ್ಟೇ ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​ ದಿನಾಂಕವನ್ನು ಘೋಷಿಸಿದರು. ನವೆಂಬರ್​ 24ರಂದು ತಮ್ಮ ಸಿನಿಮಾವನ್ನು ತೆರೆ ಕಾಣಿಸುವುದಾಗಿ ಅವರು ಹೇಳಿದರು. ಅದರ ಬೆನ್ನಲ್ಲೇ ‘ಆಣಿ ಬಾಣಿ’ ಸಿನಿಮಾದ ರಿಲೀಸ್​ ಡೇಟ್​ ಬಹಿರಂಗ ಆಗಿದೆ. ಇದೇ ವಾರ (ಜೂನ್​ 28) ಈ ಚಿತ್ರ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Kangana Ranaut: ಚಿಕ್ಕ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬಂದ ಹುಡುಗಿಗೆ ಕಂಗನಾ ರಣಾವತ್​ ಕ್ಲಾಸ್​; ವೈರಲ್​ ಆಯ್ತು ಫೋಟೋ

ಕಂಗನಾ ರಣಾವತ್ ಅವರು ಈಗ ಕೇವಲ ನಟಿಯಾಗಿ ಮಾತ್ರ ಉಳಿದುಕೊಂಡಿಲ್ಲ. ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಕೂಡ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಟೀಕು ವೆಡ್ಸ್​ ಶೇರು’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ಬಿಡುಗಡೆ ಆಯಿತು. ‘ಎಮರ್ಜೆನ್ಸಿ’ ಸಿನಿಮಾಗೂ ಕಂಗನಾ ಅವರು ಬಂಡವಾಳ ಹೂಡುವ ಮೂಲಕ ಸಹ-ನಿರ್ಮಾಪಕಿ ಆಗಿದ್ದಾರೆ. ಈ ಚಿತ್ರದ ಮೇಲೆ ಅವರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ