AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ

Emergency Movie: ಒಂದೇ ಕಥಾಹಂದರ ಇಟ್ಟುಕೊಂಡು ಎರಡು ಸಿನಿಮಾ ಬಂದರೆ ಸಮಸ್ಯೆ ಎದುರಾಗುತ್ತದೆ. ಮೊದಲು ರಿಲೀಸ್​ ಆದ ಚಿತ್ರಕ್ಕೆ ಹೆಚ್ಚು ಮೈಲೇಜ್​ ಸಿಗುತ್ತದೆ.

Kangana Ranaut: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 26, 2023 | 7:14 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರ ಸಂಪೂರ್ಣ ಗಮನ ಈಗ ‘ಎಮರ್ಜೆನ್ಸಿ’ ಸಿನಿಮಾದ ಮೇಲಿದೆ. ಈ ಚಿತ್ರದಲ್ಲಿ ತುರ್ತು ಪರಿಸ್ಥಿತಿ ಕುರಿತ ಕಥೆ ಇದೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮತ್ತು ಪೋಸ್ಟರ್​ನಿಂದ ಹೈಪ್​ ಹೆಚ್ಚಾಗಿದೆ. ಹಲವು ಕಾರಣಗಳಿಂದಾಗಿ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಸುದ್ದಿ ಆಗುತ್ತಿದೆ. ಈ ಚಿತ್ರದಲ್ಲಿ ಕಂಗನಾ ರಣಾವತ್​ ಅವರು ಇಂದಿರಾ ಗಾಂಧಿಯ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಅಚ್ಚರಿ ಏನೆಂದರೆ, ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನವೇ ತುರ್ತು ಪರಿಸ್ಥಿತಿ (Emergency) ಕುರಿತು ಇನ್ನೊಂದು ಸಿನಿಮಾ ರಿಲೀಸ್​ ಆಗುತ್ತಿದೆ!

ಒಂದೇ ಕಥಾಹಂದರ ಇಟ್ಟುಕೊಂಡು ಎರಡು ಸಿನಿಮಾ ಬಂದರೆ ಸಮಸ್ಯೆ ಎದುರಾಗುತ್ತದೆ. ಮೊದಲು ರಿಲೀಸ್​ ಆದ ಚಿತ್ರಕ್ಕೆ ಹೆಚ್ಚು ಮೈಲೇಜ್​ ಸಿಗುತ್ತದೆ. ನಂತರ ಬಿಡುಗಡೆ ಆದ ಸಿನಿಮಾ ಎಷ್ಟೇ ಚೆನ್ನಾಗಿದ್ದರೂ ಕೂಡ ಅದು ಕಾಪಿ ಎನಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಅದೇ ಟೆನ್ಷನ್​ ಈಗ ‘ಎಮರ್ಜೆನ್ಸಿ’ ಚಿತ್ರಕ್ಕೆ ಎದುರಾಗುತ್ತಿದೆ. ಯಾಕೆಂದರೆ, ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯ ವಿಷಯವನ್ನೇ ಕೇಂದ್ರವಾಗಿ ಇಟ್ಟುಕೊಂಡು ಮರಾಠಿಯಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತಿದೆ. ‘ಆಣಿ ಬಾಣಿ’ ಎಂಬುದು ಈ ಚಿತ್ರದ ಶೀರ್ಷಿಕೆ.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್​ ನಿರ್ಮಾಣದ ಸಿನಿಮಾಗೆ ನೆಗೆಟಿವ್​ ವಿಮರ್ಶೆ; ಮೂವೀ ಮಾಫಿಯಾ ಮೇಲೆ ಆರೋಪ ಹೊರಿಸಿದ ನಟಿ

ಮರಾಠಿ ಭಾಷೆಯಲ್ಲಿ ತುರ್ತು ಪರಿಸ್ಥಿತಿಯನ್ನು ‘ಆಣಿ ಬಾಣಿ’ ಎನ್ನುತ್ತಾರೆ. ಹಾಗಾಗಿ ಈ ಶೀರ್ಷಿಕೆಯಲ್ಲಿ ಸಿನಿಮಾ ಮಾಡಲಾಗಿದೆ. ಜೂನ್​ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಕಂಗನಾ ರಣಾವತ್​ ಅವರು ಇತ್ತೀಚೆಗಷ್ಟೇ ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​ ದಿನಾಂಕವನ್ನು ಘೋಷಿಸಿದರು. ನವೆಂಬರ್​ 24ರಂದು ತಮ್ಮ ಸಿನಿಮಾವನ್ನು ತೆರೆ ಕಾಣಿಸುವುದಾಗಿ ಅವರು ಹೇಳಿದರು. ಅದರ ಬೆನ್ನಲ್ಲೇ ‘ಆಣಿ ಬಾಣಿ’ ಸಿನಿಮಾದ ರಿಲೀಸ್​ ಡೇಟ್​ ಬಹಿರಂಗ ಆಗಿದೆ. ಇದೇ ವಾರ (ಜೂನ್​ 28) ಈ ಚಿತ್ರ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Kangana Ranaut: ಚಿಕ್ಕ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬಂದ ಹುಡುಗಿಗೆ ಕಂಗನಾ ರಣಾವತ್​ ಕ್ಲಾಸ್​; ವೈರಲ್​ ಆಯ್ತು ಫೋಟೋ

ಕಂಗನಾ ರಣಾವತ್ ಅವರು ಈಗ ಕೇವಲ ನಟಿಯಾಗಿ ಮಾತ್ರ ಉಳಿದುಕೊಂಡಿಲ್ಲ. ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಕೂಡ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಟೀಕು ವೆಡ್ಸ್​ ಶೇರು’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ಬಿಡುಗಡೆ ಆಯಿತು. ‘ಎಮರ್ಜೆನ್ಸಿ’ ಸಿನಿಮಾಗೂ ಕಂಗನಾ ಅವರು ಬಂಡವಾಳ ಹೂಡುವ ಮೂಲಕ ಸಹ-ನಿರ್ಮಾಪಕಿ ಆಗಿದ್ದಾರೆ. ಈ ಚಿತ್ರದ ಮೇಲೆ ಅವರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್