AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ

Emergency Movie: ಒಂದೇ ಕಥಾಹಂದರ ಇಟ್ಟುಕೊಂಡು ಎರಡು ಸಿನಿಮಾ ಬಂದರೆ ಸಮಸ್ಯೆ ಎದುರಾಗುತ್ತದೆ. ಮೊದಲು ರಿಲೀಸ್​ ಆದ ಚಿತ್ರಕ್ಕೆ ಹೆಚ್ಚು ಮೈಲೇಜ್​ ಸಿಗುತ್ತದೆ.

Kangana Ranaut: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ
ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Jun 26, 2023 | 7:14 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರ ಸಂಪೂರ್ಣ ಗಮನ ಈಗ ‘ಎಮರ್ಜೆನ್ಸಿ’ ಸಿನಿಮಾದ ಮೇಲಿದೆ. ಈ ಚಿತ್ರದಲ್ಲಿ ತುರ್ತು ಪರಿಸ್ಥಿತಿ ಕುರಿತ ಕಥೆ ಇದೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮತ್ತು ಪೋಸ್ಟರ್​ನಿಂದ ಹೈಪ್​ ಹೆಚ್ಚಾಗಿದೆ. ಹಲವು ಕಾರಣಗಳಿಂದಾಗಿ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಸುದ್ದಿ ಆಗುತ್ತಿದೆ. ಈ ಚಿತ್ರದಲ್ಲಿ ಕಂಗನಾ ರಣಾವತ್​ ಅವರು ಇಂದಿರಾ ಗಾಂಧಿಯ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಅಚ್ಚರಿ ಏನೆಂದರೆ, ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನವೇ ತುರ್ತು ಪರಿಸ್ಥಿತಿ (Emergency) ಕುರಿತು ಇನ್ನೊಂದು ಸಿನಿಮಾ ರಿಲೀಸ್​ ಆಗುತ್ತಿದೆ!

ಒಂದೇ ಕಥಾಹಂದರ ಇಟ್ಟುಕೊಂಡು ಎರಡು ಸಿನಿಮಾ ಬಂದರೆ ಸಮಸ್ಯೆ ಎದುರಾಗುತ್ತದೆ. ಮೊದಲು ರಿಲೀಸ್​ ಆದ ಚಿತ್ರಕ್ಕೆ ಹೆಚ್ಚು ಮೈಲೇಜ್​ ಸಿಗುತ್ತದೆ. ನಂತರ ಬಿಡುಗಡೆ ಆದ ಸಿನಿಮಾ ಎಷ್ಟೇ ಚೆನ್ನಾಗಿದ್ದರೂ ಕೂಡ ಅದು ಕಾಪಿ ಎನಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಅದೇ ಟೆನ್ಷನ್​ ಈಗ ‘ಎಮರ್ಜೆನ್ಸಿ’ ಚಿತ್ರಕ್ಕೆ ಎದುರಾಗುತ್ತಿದೆ. ಯಾಕೆಂದರೆ, ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯ ವಿಷಯವನ್ನೇ ಕೇಂದ್ರವಾಗಿ ಇಟ್ಟುಕೊಂಡು ಮರಾಠಿಯಲ್ಲಿ ಒಂದು ಸಿನಿಮಾ ಬಿಡುಗಡೆ ಆಗುತ್ತಿದೆ. ‘ಆಣಿ ಬಾಣಿ’ ಎಂಬುದು ಈ ಚಿತ್ರದ ಶೀರ್ಷಿಕೆ.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್​ ನಿರ್ಮಾಣದ ಸಿನಿಮಾಗೆ ನೆಗೆಟಿವ್​ ವಿಮರ್ಶೆ; ಮೂವೀ ಮಾಫಿಯಾ ಮೇಲೆ ಆರೋಪ ಹೊರಿಸಿದ ನಟಿ

ಮರಾಠಿ ಭಾಷೆಯಲ್ಲಿ ತುರ್ತು ಪರಿಸ್ಥಿತಿಯನ್ನು ‘ಆಣಿ ಬಾಣಿ’ ಎನ್ನುತ್ತಾರೆ. ಹಾಗಾಗಿ ಈ ಶೀರ್ಷಿಕೆಯಲ್ಲಿ ಸಿನಿಮಾ ಮಾಡಲಾಗಿದೆ. ಜೂನ್​ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಕಂಗನಾ ರಣಾವತ್​ ಅವರು ಇತ್ತೀಚೆಗಷ್ಟೇ ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​ ದಿನಾಂಕವನ್ನು ಘೋಷಿಸಿದರು. ನವೆಂಬರ್​ 24ರಂದು ತಮ್ಮ ಸಿನಿಮಾವನ್ನು ತೆರೆ ಕಾಣಿಸುವುದಾಗಿ ಅವರು ಹೇಳಿದರು. ಅದರ ಬೆನ್ನಲ್ಲೇ ‘ಆಣಿ ಬಾಣಿ’ ಸಿನಿಮಾದ ರಿಲೀಸ್​ ಡೇಟ್​ ಬಹಿರಂಗ ಆಗಿದೆ. ಇದೇ ವಾರ (ಜೂನ್​ 28) ಈ ಚಿತ್ರ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Kangana Ranaut: ಚಿಕ್ಕ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಬಂದ ಹುಡುಗಿಗೆ ಕಂಗನಾ ರಣಾವತ್​ ಕ್ಲಾಸ್​; ವೈರಲ್​ ಆಯ್ತು ಫೋಟೋ

ಕಂಗನಾ ರಣಾವತ್ ಅವರು ಈಗ ಕೇವಲ ನಟಿಯಾಗಿ ಮಾತ್ರ ಉಳಿದುಕೊಂಡಿಲ್ಲ. ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿ ಕೂಡ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬಂದ ‘ಟೀಕು ವೆಡ್ಸ್​ ಶೇರು’ ಸಿನಿಮಾ ಇತ್ತೀಚೆಗೆ ಒಟಿಟಿಯಲ್ಲಿ ಬಿಡುಗಡೆ ಆಯಿತು. ‘ಎಮರ್ಜೆನ್ಸಿ’ ಸಿನಿಮಾಗೂ ಕಂಗನಾ ಅವರು ಬಂಡವಾಳ ಹೂಡುವ ಮೂಲಕ ಸಹ-ನಿರ್ಮಾಪಕಿ ಆಗಿದ್ದಾರೆ. ಈ ಚಿತ್ರದ ಮೇಲೆ ಅವರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ