AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ಅಂಬಾನಿ ಧರಿಸಿದ್ದ 10 ಕೋಟಿ ರೂಪಾಯಿ ವಾಚ್ ನೋಡಿ ದಿಗ್ಭ್ರಮೆಗೊಂಡ ಜುಕರ್​ಬರ್ಗ್ ಪತ್ನಿ

ಅನಂತ್ ಕೈಯಲ್ಲಿದ್ದ ವಾಚ್ ನೋಡಿ ಜುಕರ್​​ಬರ್ಗ್ ಮನಸ್ಸು ಬದಲಾಗಿದೆ. ‘ನಾನು ಎಂದಿಗೂ ವಾಚ್​​ಗಳನ್ನು ಖರೀದಿಸಲು ಬಯಸಲಿಲ್ಲ. ಆದರೆ ಅನಂತ್‌ ಅವರ ಕೈಯಲ್ಲಿದ್ದ ವಾಚ್ ನೋಡಿ ನನ್ನ ಮನಸ್ಸು ಬದಲಾಯಿತು. ವಾಚ್ ಚೆನ್ನಾಗಿ ಕಾಣುತ್ತದೆ’ ಎಂದಿದ್ದಾರೆ ಮಾರ್ಕ್​ ಜುಕರ್​ಬರ್ಗ್. ಈ ವೀಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಪ್ರತಿಕ್ರಿಯೆಗಳು ಬರುತ್ತಿವೆ.

ಅನಂತ್ ಅಂಬಾನಿ ಧರಿಸಿದ್ದ 10 ಕೋಟಿ ರೂಪಾಯಿ ವಾಚ್ ನೋಡಿ ದಿಗ್ಭ್ರಮೆಗೊಂಡ ಜುಕರ್​ಬರ್ಗ್ ಪತ್ನಿ
ಅನಂತ್ ಅಂಬಾನಿ ಧರಿಸಿದ್ದ 10 ಕೋಟಿ ರೂಪಾಯಿ ವಾಚ್ ನೋಡಿ ದಿಗ್ಭ್ರಮೆಗೊಂಡ ಜುಕರ್​ಬರ್ಗ್ ಪತ್ನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 04, 2024 | 11:54 AM

Share

ಸಾಮಾಜಿಕ ಜಾಲತಾಣದಲ್ಲಿ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ವಿವಾಹಪೂರ್ವ ಕಾರ್ಯಕ್ರಮದ ಬಗ್ಗೆ ಚರ್ಚೆ ಆಗುತ್ತಿದೆ. ಈ ಕಾರ್ಯಕ್ರಮ ಮಾರ್ಚ್ 1ರಿಂದ ಮಾರ್ಚ್ 3ರವರೆಗೆ ನಡೆದಿದೆ. ಕಾರ್ಯಕ್ರಮವು ಜಾಮ್‌ನಗರದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯಿತು. ಈ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ದೇಶ-ವಿದೇಶದ ಖ್ಯಾತನಾಮರು ಪಾಲ್ಗೊಂಡಿದ್ದರು. ಅನಿಲ್ ಕಪೂರ್, ಸಲ್ಮಾನ್ ಖಾನ್, ಶಾರುಖ್ ಖಾನ್, ರಣಬೀರ್ ಕಪೂರ್ (Ranbir Kapoor), ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ಸೈಫ್ ಅಲಿ ಖಾನ್, ಕರೀನಾ ಕಪೂರ್ ಸೇರಿದಂತೆ ಬಾಲಿವುಡ್ ಇಂಡಸ್ಟ್ರಿಯ ಎಲ್ಲಾ ತಾರೆಯರು ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ತಕ್ಷಣ ಬಾಲಿವುಡ ಸೆಲೆಬ್ರಿಟಿಗಳೆಲ್ಲ ಮುಂಬೈಗೆ ಹೊರಟಿದ್ದಾರೆ. ಅಮೆರಿಕದ ಸಿಂಗರ್ ಏಕಾನ್ ಭಾಗವಹಿಸಿದ್ದರು. ಅದೇ ರೀತಿ ಫೇಸ್‌ಬುಕ್ ಸಹ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ತಮ್ಮ ಪತ್ನಿ ಪ್ರಿಸ್ಸಿಲ್ಲಾ ಚಾನ್ ಜೊತೆ ಅನಂತ್ ಅಂಬಾನಿ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಭಾಗಿ ಆದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊದಲ್ಲಿ, ಜುಕರ್‌ಬರ್ಗ್ ಪತ್ನಿ ಪ್ರಿಸ್ಸಿಲ್ಲಾ ಚಾನ್ ಅವರು ಅನಂತ್ ಅಂಬಾನಿ ಅವರ ಕೈಯಲ್ಲಿರುವ ದುಬಾರಿ ವಾಚ್‌ನಿಂದ ದಿಗ್ಭ್ರಮೆಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಅನಂತ್ ಅವರು ಜುಕರ್‌ಬರ್ಗ್ ಮತ್ತು ಅವರ ಪತ್ನಿ ಪ್ರಿಸ್ಸಿಲ್ಲಾ ಅವರೊಂದಿಗೆ ನಿಂತು ಮಾತನಾಡುತ್ತಿದ್ದರು. ಕಾಡಿನಲ್ಲಿ ಒಂದು ಸುತ್ತು ಹಾಕಿ ಬರುವ ಬಗ್ಗೆ ಅನಂತ್ ಕೇಳಿದ್ದಾರೆ. ಅಲ್ಲಿಗೆ ಪ್ರಯಾಣಿಸಲು ವ್ಯವಸ್ಥೆ ಮಾಡುವ ಬಗ್ಗೆ ಅನಂತ್ ಮಾತನಾಡಿದ್ದಾರೆ. ಆಗ ಇದ್ದಕ್ಕಿದ್ದಂತೆ ಪ್ರಿಸ್ಸಿಲ್ಲಾರ ಕಣ್ಣು ಅನಂತ್ ಅವರ ದುಬಾರಿ ವಾಚ್​​ನತ್ತ ಹೋಗಿದೆ. ಅವರಿಗೆ ಆ ವಾಚ್ ತುಂಬಾ ಇಷ್ಟ ಆಗುತ್ತದೆ. ಅನಂತ್ ಅವರ ಕೈಯಲ್ಲಿರುವ ವಾಚ್​ನ ಮೆಚ್ಚುತ್ತಾ, ‘ಇದು ತುಂಬಾ ಅದ್ಭುತವಾದ ವಾಚ್. ಈ ವಾಚ್​​ನ ಯಾವ ಕಂಪನಿ ತಯಾರಿಸಿದೆ?’ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಅನಂತ್, ರಿಶಾರ್​ ಮಿಲ್ ಕಂಪನಿಯ ವಾಚ್ ಎಂದಿದ್ದಾರೆ.

ಅನಂತ್ ಕೈಯಲ್ಲಿದ್ದ ವಾಚ್ ನೋಡಿ ಜುಕರ್​​ಬರ್ಗ್ ಮನಸ್ಸು ಬದಲಾಗಿದೆ. ‘ನಾನು ಎಂದಿಗೂ ವಾಚ್​​ಗಳನ್ನು ಖರೀದಿಸಲು ಬಯಸಲಿಲ್ಲ. ಆದರೆ ಅನಂತ್‌ ಅವರ ಕೈಯಲ್ಲಿದ್ದ ವಾಚ್ ನೋಡಿ ನನ್ನ ಮನಸ್ಸು ಬದಲಾಯಿತು. ವಾಚ್ ಚೆನ್ನಾಗಿ ಕಾಣುತ್ತದೆ’ ಎಂದಿದ್ದಾರೆ ಮಾರ್ಕ್​ ಜುಕರ್​ಬರ್ಗ್. ಈ ವೀಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಪ್ರತಿಕ್ರಿಯೆಗಳು ಬರುತ್ತಿವೆ. ‘ಮಾರ್ಕ್ ಜುಕರ್‌ಬರ್ಗ್ ಕೂಡ ಅಂಬಾನಿ ಮುಂದೆ ಬಡವರಾಗಿದ್ದಾರೆ’ ಎಂದು ಒಬ್ಬರು ಬರೆದಿದ್ದಾರೆ. ಮತ್ತೊಬ್ಬರು ‘ಮೊದಲ ಬಾರಿಗೆ ಇಂತಹ ಶ್ರೀಮಂತರ ಹರಟೆ ಕೇಳುತ್ತಿದ್ದೇನೆ’ ಎಂದು ಕೆಲವರು ಹೇಳಿದ್ದಾರೆ. ‘ಪವರ್ ಆಫ್ ಮೋಟಾ ಭಾಯ್’ ಎಂದೂ ಬಳಕೆದಾರರು ಬರೆದಿದ್ದಾರೆ.

ಇದನ್ನೂ ಓದಿ: ಅನಂತ್ ಅಂಬಾನಿ ಮದುವೆ: ಸ್ವರ್ಗವನ್ನು ಧರೆಗಿಳಿಸಿದ ಮುಖೇಶ್ ಅಂಬಾನಿ, ಇಲ್ಲಿವೆ ಚಿತ್ರಗಳು

ಅನಂತ್ ಅಂಬಾನಿ ಅವರ ಕೈಯಲ್ಲಿ ಇದ್ದಿದ್ದ ವಾಚ್​ನ ಬೆಲೆ ಬರೋಬ್ಬರಿ 10 ಕೋಟಿ ರೂಪಾಯಿ ಎನ್ನಲಾಗಿದೆ. ರಿಶಾರ್​ ಮಿಲ್ ಅತ್ಯಂತ ದುಬಾರಿ ವಾಚ್​​ಗಳನ್ನು ತಯಾರಿಸುತ್ತದೆ. ಇದು ಸ್ವಿಜರ್​ಲೆಂಡ್​ನ ಕಂಪನಿ ಆಗಿದೆ. ಇಂಗ್ಲಿಷ್​ನಲ್ಲಿ ಇದರ ಸ್ಪೆಲ್ಲಿಂಗ್ Richard Mille ಎಂದಿದ್ದರೂ ಇದನ್ನು ಉಚ್ಚಾರ ಮಾಡುವುದು ರಿಶಾರ್​ ಮಿಲ್ ಎಂದಾಗಿದೆ. ಮಾರ್ಕ್​ ಜುಕರ್​ ಬರ್ಗ್ ಕೂಡ ಶ್ರೀಮಂತರೇ. ಆದರೆ, ಅವರಿಗೆ ದುಬಾರಿ ವಸ್ತುಗಳ ಮೇಲೆ ಮೋಹ ಇಲ್ಲ. ಅವರು ಸದಾ ಸಿಂಪಲ್ ಆಗಿ ಕಾಣಿಸಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ