ಬಾಲಿವುಡ್​ನ ‘ವಾರ್​ 2’ ಸಿನಿಮಾದಿಂದ ಧ್ರುವ ಸರ್ಜಾಗೆ ಬಂತಾ ಆಫರ್​? ಸಖತ್​ ನ್ಯೂಸ್​

‘ವಾರ್​ 2’ ಸಿನಿಮಾಗೆ ಅಯಾನ್​ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಹೃತಿಕ್​ ರೋಷನ್​, ಜೂನಿಯರ್​ ಎನ್​ಟಿಆರ್​ ಅವರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರತಂಡದಿಂದ ಧ್ರುವ ಸರ್ಜಾಗೆ ಆಫರ್​ ಬಂದಿದೆ ಎಂದು ಹೇಳಲಾಗುತ್ತಿದೆ. ಚಿತ್ರತಂಡದವರು ಬಂದು ಧ್ರುವ ಸರ್ಜಾಗೆ ಕಥೆ ಹೇಳಿದ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳಲಿದೆ.

ಬಾಲಿವುಡ್​ನ ‘ವಾರ್​ 2’ ಸಿನಿಮಾದಿಂದ ಧ್ರುವ ಸರ್ಜಾಗೆ ಬಂತಾ ಆಫರ್​? ಸಖತ್​ ನ್ಯೂಸ್​
ಧ್ರುವ ಸರ್ಜಾ, ಹೃತಿಕ್​ ರೋಷನ್​, ಜೂನಿಯರ್​ ಎನ್​ಟಿಆರ್​
Follow us
|

Updated on: May 28, 2024 | 5:23 PM

ಈಗಂತೂ ಪ್ಯಾನ್​ ಇಂಡಿಯಾ ಸಿನಿಮಾಗಳೇ ಅಬ್ಬರಿಸುತ್ತಿವೆ. ಎಲ್ಲ ಹೀರೋಗಳು ಕೂಡ ತಮ್ಮ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲಿ ಅಂತ ಬಯಸುತ್ತಾರೆ. ಆ ರೀತಿ ಆಗಬೇಕು ಎಂದರೆ ಪ್ಯಾನ್​ ಇಂಡಿಯಾ ಮಟ್ಟದ ಕಲಾವಿದರೇ ಆ ಸಿನಿಮಾದಲ್ಲಿ ಇರಬೇಕು. ಹಾಗಾಗಿ ಪಾತ್ರವರ್ಗದ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತದೆ. ‘ವಾರ್​ 2’ ಸಿನಿಮಾ (War 2 Movie) ಕೂಡ ಅದೇ ಪ್ಲ್ಯಾನ್​ ಮಾಡಿದಂತಿದೆ. ಈ ಚಿತ್ರತಂಡದಿಂದ ಕನ್ನಡದ ನಟ ಧ್ರುವ ಸರ್ಜಾ ಅವರಿಗೆ ಆಫರ್​ ನೀಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಇದರಿಂದ ಧ್ರುವ ಸರ್ಜಾ (Dhruva Sarja) ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

‘ವಾರ್​ 2’ ಸಿನಿಮಾದ ಮೇಲೆ ಸಖತ್​ ನಿರೀಕ್ಷೆ ಇದೆ. ಹೃತಿಕ್​ ರೋಷನ್​, ಜೂನಿಯರ್​ ಎನ್​ಟಿಆರ್​ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಜಾನ್​ ಅಬ್ರಾಹಂ ಮತ್ತು ಕಿಯಾರಾ ಅಡ್ವಾಣಿ ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಈ ಬಹುನಿರೀಕ್ಷಿತ ಸಿನಿಮಾದಲ್ಲಿ ಧ್ರುವ ಸರ್ಜಾ ಸಹ ನಟಿಸುವ ಸಾಧ್ಯತೆ ಇದೆ. ಆ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ.

ಧ್ರುವ ಸರ್ಜಾ ಅವರಿಗೆ ಮಾಸ್​ ಇಮೇಜ್​ ಇದೆ. ಕಟ್ಟುಮಸ್ತಾದ ದೇಹ ಹೊಂದಿರುವ ಅವರು ಆ್ಯಕ್ಷನ್ ಸಿನಿಮಾಗಳಿಗೆ ಹೇಳಿ ಮಾಡಿಸಿದಂತಿದ್ದಾರೆ. ‘ವಾರ್ 2’ ಸಿನಿಮಾದಲ್ಲಿ ಭರ್ಜರಿ ಸಾಹಸ ಸನ್ನಿವೇಶಗಳು ಇರಲಿವೆ. ಈ ಸಿನಿಮಾದಲ್ಲಿ ಹೃತಿಕ್​ ರೋಷನ್​ ಅವರ ಸಹೋದರನ ಪಾತ್ರದಲ್ಲಿ ನಟಿಸಲು ಧ್ರುವ ಸರ್ಜಾಗೆ ಆಫರ್​ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ‘ಚಿತ್ರರಂಗದಲ್ಲಿ ಸ್ಟಾರ್​ ಯಾರೂ ಇಲ್ಲ’: ನೇರವಾಗಿ ಹೇಳಿದ ನಟ ಧ್ರುವ ಸರ್ಜಾ

ಒಂದು ವೇಳೆ ‘ವಾರ್​ 2’ ಸಿನಿಮಾದ ಆಫರ್​ ಅನ್ನು ಧ್ರುವ ಸರ್ಜಾ ಒಪ್ಪಿಕೊಂಡರೆ ಇದು ಅವರ ಮೊದಲ ಬಾಲಿವುಡ್​ ಸಿನಿಮಾ ಆಗಲಿದೆ. ಈ ಸಿನಿಮಾಗೆ ಅಯಾನ್​ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಅವರು ಧ್ರುವ ಸರ್ಜಾಗೆ ಕಥೆ ಹೇಳುವುದು ಬಾಕಿ ಇದೆ. ಎಲ್ಲವೂ ಒಪ್ಪಿಗೆಯಾದರೆ ಧ್ರುವ ಸರ್ಜಾ ಅವರು ಗ್ರೀನ್​ ಸಿಗ್ನಲ್​ ನೀಡಲಿದ್ದಾರೆ. ಆ ಬಗ್ಗೆ ಚಿತ್ರತಂಡದಿಂದ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಧ್ರುವ ಸರ್ಜಾ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಕೆಡಿ’ ಮತ್ತು ‘ಮಾರ್ಟಿನ್​’ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಇವು ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ಅಕ್ಟೋಬರ್​ 11ರಂದು ‘ಮಾರ್ಟಿನ್​’ ಬಿಡುಗಡೆ ಆಗಲಿದೆ. ಈ ವರ್ಷ ಡಿಸೆಂಬರ್​ನಲ್ಲಿ ‘ಕೆಡಿ’ ಸಿನಿಮಾ ತೆರೆಕಾಣಲಿದೆ. ಈ ಎರಡೂ ಸಿನಿಮಾಗಳ ಮೇಲೆ ಭಾರೀ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ