AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ‘ವಾರ್​ 2’ ಸಿನಿಮಾದಿಂದ ಧ್ರುವ ಸರ್ಜಾಗೆ ಬಂತಾ ಆಫರ್​? ಸಖತ್​ ನ್ಯೂಸ್​

‘ವಾರ್​ 2’ ಸಿನಿಮಾಗೆ ಅಯಾನ್​ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಹೃತಿಕ್​ ರೋಷನ್​, ಜೂನಿಯರ್​ ಎನ್​ಟಿಆರ್​ ಅವರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರತಂಡದಿಂದ ಧ್ರುವ ಸರ್ಜಾಗೆ ಆಫರ್​ ಬಂದಿದೆ ಎಂದು ಹೇಳಲಾಗುತ್ತಿದೆ. ಚಿತ್ರತಂಡದವರು ಬಂದು ಧ್ರುವ ಸರ್ಜಾಗೆ ಕಥೆ ಹೇಳಿದ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳಲಿದೆ.

ಬಾಲಿವುಡ್​ನ ‘ವಾರ್​ 2’ ಸಿನಿಮಾದಿಂದ ಧ್ರುವ ಸರ್ಜಾಗೆ ಬಂತಾ ಆಫರ್​? ಸಖತ್​ ನ್ಯೂಸ್​
ಧ್ರುವ ಸರ್ಜಾ, ಹೃತಿಕ್​ ರೋಷನ್​, ಜೂನಿಯರ್​ ಎನ್​ಟಿಆರ್​
ಮದನ್​ ಕುಮಾರ್​
|

Updated on: May 28, 2024 | 5:23 PM

Share

ಈಗಂತೂ ಪ್ಯಾನ್​ ಇಂಡಿಯಾ ಸಿನಿಮಾಗಳೇ ಅಬ್ಬರಿಸುತ್ತಿವೆ. ಎಲ್ಲ ಹೀರೋಗಳು ಕೂಡ ತಮ್ಮ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲಿ ಅಂತ ಬಯಸುತ್ತಾರೆ. ಆ ರೀತಿ ಆಗಬೇಕು ಎಂದರೆ ಪ್ಯಾನ್​ ಇಂಡಿಯಾ ಮಟ್ಟದ ಕಲಾವಿದರೇ ಆ ಸಿನಿಮಾದಲ್ಲಿ ಇರಬೇಕು. ಹಾಗಾಗಿ ಪಾತ್ರವರ್ಗದ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತದೆ. ‘ವಾರ್​ 2’ ಸಿನಿಮಾ (War 2 Movie) ಕೂಡ ಅದೇ ಪ್ಲ್ಯಾನ್​ ಮಾಡಿದಂತಿದೆ. ಈ ಚಿತ್ರತಂಡದಿಂದ ಕನ್ನಡದ ನಟ ಧ್ರುವ ಸರ್ಜಾ ಅವರಿಗೆ ಆಫರ್​ ನೀಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ಇದರಿಂದ ಧ್ರುವ ಸರ್ಜಾ (Dhruva Sarja) ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

‘ವಾರ್​ 2’ ಸಿನಿಮಾದ ಮೇಲೆ ಸಖತ್​ ನಿರೀಕ್ಷೆ ಇದೆ. ಹೃತಿಕ್​ ರೋಷನ್​, ಜೂನಿಯರ್​ ಎನ್​ಟಿಆರ್​ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಜಾನ್​ ಅಬ್ರಾಹಂ ಮತ್ತು ಕಿಯಾರಾ ಅಡ್ವಾಣಿ ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಈ ಬಹುನಿರೀಕ್ಷಿತ ಸಿನಿಮಾದಲ್ಲಿ ಧ್ರುವ ಸರ್ಜಾ ಸಹ ನಟಿಸುವ ಸಾಧ್ಯತೆ ಇದೆ. ಆ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ.

ಧ್ರುವ ಸರ್ಜಾ ಅವರಿಗೆ ಮಾಸ್​ ಇಮೇಜ್​ ಇದೆ. ಕಟ್ಟುಮಸ್ತಾದ ದೇಹ ಹೊಂದಿರುವ ಅವರು ಆ್ಯಕ್ಷನ್ ಸಿನಿಮಾಗಳಿಗೆ ಹೇಳಿ ಮಾಡಿಸಿದಂತಿದ್ದಾರೆ. ‘ವಾರ್ 2’ ಸಿನಿಮಾದಲ್ಲಿ ಭರ್ಜರಿ ಸಾಹಸ ಸನ್ನಿವೇಶಗಳು ಇರಲಿವೆ. ಈ ಸಿನಿಮಾದಲ್ಲಿ ಹೃತಿಕ್​ ರೋಷನ್​ ಅವರ ಸಹೋದರನ ಪಾತ್ರದಲ್ಲಿ ನಟಿಸಲು ಧ್ರುವ ಸರ್ಜಾಗೆ ಆಫರ್​ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ: ‘ಚಿತ್ರರಂಗದಲ್ಲಿ ಸ್ಟಾರ್​ ಯಾರೂ ಇಲ್ಲ’: ನೇರವಾಗಿ ಹೇಳಿದ ನಟ ಧ್ರುವ ಸರ್ಜಾ

ಒಂದು ವೇಳೆ ‘ವಾರ್​ 2’ ಸಿನಿಮಾದ ಆಫರ್​ ಅನ್ನು ಧ್ರುವ ಸರ್ಜಾ ಒಪ್ಪಿಕೊಂಡರೆ ಇದು ಅವರ ಮೊದಲ ಬಾಲಿವುಡ್​ ಸಿನಿಮಾ ಆಗಲಿದೆ. ಈ ಸಿನಿಮಾಗೆ ಅಯಾನ್​ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಅವರು ಧ್ರುವ ಸರ್ಜಾಗೆ ಕಥೆ ಹೇಳುವುದು ಬಾಕಿ ಇದೆ. ಎಲ್ಲವೂ ಒಪ್ಪಿಗೆಯಾದರೆ ಧ್ರುವ ಸರ್ಜಾ ಅವರು ಗ್ರೀನ್​ ಸಿಗ್ನಲ್​ ನೀಡಲಿದ್ದಾರೆ. ಆ ಬಗ್ಗೆ ಚಿತ್ರತಂಡದಿಂದ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಧ್ರುವ ಸರ್ಜಾ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಕೆಡಿ’ ಮತ್ತು ‘ಮಾರ್ಟಿನ್​’ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಇವು ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗುತ್ತಿದೆ. ಅಕ್ಟೋಬರ್​ 11ರಂದು ‘ಮಾರ್ಟಿನ್​’ ಬಿಡುಗಡೆ ಆಗಲಿದೆ. ಈ ವರ್ಷ ಡಿಸೆಂಬರ್​ನಲ್ಲಿ ‘ಕೆಡಿ’ ಸಿನಿಮಾ ತೆರೆಕಾಣಲಿದೆ. ಈ ಎರಡೂ ಸಿನಿಮಾಗಳ ಮೇಲೆ ಭಾರೀ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?