AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿಯಾದ ಸಲ್ಮಾನ್ ಖಾನ್ ಸಿನಿಮಾ; 40 ದಿನ ರೀಶೂಟ್

'ಬ್ಯಾಟಲ್ ಆಫ್ ಗಲ್ವಾನ್' ಚಿತ್ರದ ಶೀರ್ಷಿಕೆ ಈಗ 'ಮಾತೃಭೂಮಿ' ಎಂದು ಬದಲಾಗಿದೆ. ಭಾರತ-ಚೀನಾ ಸಂಬಂಧಗಳ ಸೂಕ್ಷ್ಮತೆ ಮತ್ತು ರಾಜಕೀಯ ಸನ್ನಿವೇಶದಿಂದಾಗಿ ಈ ಬದಲಾವಣೆ ಮಾಡಲಾಗಿದ್ದು, ಕಥೆಯನ್ನು ಗಲ್ವಾನ್ ಸಂಘರ್ಷದಿಂದ ಶಾಂತಿ, ಸಾಮರಸ್ಯ ಮತ್ತು ಯುದ್ಧದ ಪರಿಣಾಮಗಳ ಕಡೆಗೆ ತಿರುಗಿಸಲಾಗಿದೆ. ಸದ್ಯ ಈ ವಿಷಯ ಬಾಲಿವುಡ್ ಅಂಗದಲ್ಲಿ ಚರ್ಚೆ ಆಗುತ್ತಿದೆ.

ದುಬಾರಿಯಾದ ಸಲ್ಮಾನ್ ಖಾನ್ ಸಿನಿಮಾ; 40 ದಿನ ರೀಶೂಟ್
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on:Mar 17, 2026 | 1:25 PM

Share

‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾದ ಟೈಟಲ್​​ನ ಇತ್ತೀಚೆಗೆ ‘ಮಾತೃಭೂಮಿ’ (Matrabhoomi) ಎಂದು ಬದಲಾಯಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ತಂಡ ರಿವೀಲ್ ಮಾಡಿರಲಿಲ್ಲ. ಹೀಗಿರುವಾಗಲೇ ಇದರ ಹಿಂದಿನ ಅಸಲಿ ವಿಷಯ ರಿವೀಲ್ ಆಗಿದೆ. ಸಲ್ಮಾನ್ ಖಾನ್ ಸಿನಿಮಾ ದುಬಾರಿ ಆಗಿದೆ. ತಂಡದವರು ಸಿನಿಮಾದ ಟೈಟಲ್ ಬದಲಿಸಿದ್ದು ಮಾತ್ರವಲ್ಲ, 40 ದಿನಗಳ ರೀ ಶೂಟ್ ಮಾಡುತ್ತಿದ್ದಾರೆ.

ಅಪೂರ್ವ ಲಖಿಯಾ ಅವರು ‘ಮಾತೃಭೂಮಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಹಾಗೂ ಚೀನಾ ಸಂಘರ್ಷದ ಬಗ್ಗೆ ಸಿನಿಮಾ ಇದೆ. ದಿವಂಗತ ಕರ್ನಲ್ ಬಿಕುಮಲ್ಲಾ ಸಂತೋಷ್ ಬಾಬು ಪಾತ್ರದಲ್ಲಿ ಸಲ್ಮಾನ್ ಖಾನ್ ನಟಿಸುತ್ತಿದ್ದಾರೆ. 2205ರ ಸೆಪ್ಟೆಂಬರ್​​ ಅಲ್ಲಿ ಲಡಾಕ್​​​ನಲ್ಲಿ ಸಿನಿಮಾ ಶೂಟ್ ಮಾಡುವ ಪ್ಲ್ಯಾನ್ ಇತ್ತು. ಡಿಸೆಂಬರ್ ವೇಳೆಗೆ ಆ ಭಾಗದಲ್ಲಿ ಸಿನಿಮಾ ಶೂಟ್ ಕಂಪ್ಲೀಟ್ ಮಾಡುವ ಆಲೋಚನೆ ಇತ್ತು.

ಈಗ ಸಿನಿಮಾ ದುಬಾರಿ ಆಗುತ್ತಿದೆ. ಫೆಬ್ರವರಿಯಿಂದಲೇ ಸಿನಿಮಾದ ರೀಶೂಟ್ ಮುಂಬೈನಲ್ಲಿ ನಡೆದಿದೆ ಎನ್ನಲಾಗಿದೆ. ಸಿನಿಮಾದ ಕಥೆಯಲ್ಲಿ ಕೊಂಚ ಬದಲಾವಣೆ ಮಾಡಿರುವ ಕಾರಣದಿಂದ ರೀ ಶೂಟಿಂಗ್ ನಡೆದಿದೆ ಎಂದು ಹೇಳಲಾಗುತ್ತಾ ಇದೆ.

ಚೈನೀಸ್ ಹಾಡನ್ನು ಸಿನಿಮಾದಲ್ಲಿ ಹೆಚ್ಚುವರಿಯಾಗಿ ಸೇರ್ಪಡೆ ಮಾಡಲಾಗುತ್ತಿದೆ. ಹಿಮೇಶ್ ರೇಶ್ಮಿಯಾ ಅವರು ಈ ಹಾಡನ್ನು ಕಂಪೋಸ್ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್ ಅವರು ಕೂಡ ಈ ಹಾಡಿನಲ್ಲಿ ಇರಲಿದ್ದಾರೆ. ರೆಕಾರ್​ಡ್ ಮುಗಿದ ಬಳಿಕ ಹಾಡಿನ ಶೂಟ್ ನಡೆಯಲಿದೆ.

ಇದನ್ನೂ ಓದಿ: ‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಸದ್ಯದ ರಾಜಕೀಯ ಸನ್ನಿವೇಶಗಳ ಕಾರಣದಿಂದ ಈ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ. ಭಾರತ ಮತ್ತು ಚೀನಾ ನಡುವಿನ ಸಂಬಂಧದ ವಿಷಯವನ್ನು ಗಮನದಲ್ಲಿಟ್ಟುಕೊಂಡು ಕಥೆ ಬದಲಿಸಲಾಗಿದೆ. ಗಲ್ವಾನ್ ಸಂಘರ್ಷದ ಮೇಲೆ ಮಾತ್ರ ಕೇಂದ್ರೀಕರಿಸುವ ಬದಲು ಶಾಂತಿ, ಸಾಮರಸ್ಯ ಮತ್ತು ಯುದ್ಧ ಮಾಡುವುದರಿಂದ ಹೋಗುವ ಜೀವಗಳ ವಿಷಯದ ಮೇಲೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:20 pm, Tue, 17 March 26

Follow Us
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ