AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷಗಳ ಬಳಿಕ ಭಾರತಕ್ಕೆ ಮರಳಿದ ನಟಿ ಮೀನಾಕ್ಷಿ ಶೇಷಾದ್ರಿ; ಚಿತ್ರರಂಗಕ್ಕೆ ಕಮ್​ಬ್ಯಾಕ್

ಒಂದು ಕಾಲದ ಬಹುಬೇಡಿಕೆಯ ನಟಿ ಮೀನಾಕ್ಷಿ ಶೇಷಾದ್ರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯ ತಿಳಿಸಿದ್ದಾರೆ. ಕಮ್​ಬ್ಯಾಕ್ ಬಗ್ಗೆ ಅವರು ಹಂಬಲ ವ್ಯಕ್ತಪಡಿಸಿದ್ದಾರೆ. ಎರಡು ನಿಮಿಷಗಳ ವೀಡಿಯೊವನ್ನು ಹಂಚಿಕೊಂಡಿದ್ದು, ಅದರಲ್ಲಿ ತಾವು ಮುಂಬೈಗೆ ಮರಳಿರುವುದನ್ನು ಹಾಗೂ ಅರ್ಥಪೂರ್ಣ ನಟನಾ ಅವಕಾಶಗಳಿಗಾಗಿ ಕಾಯುತ್ತಿರುವುದನ್ನು ಮುಕ್ತವಾಗಿ ತಿಳಿಸಿದ್ದಾರೆ.

30 ವರ್ಷಗಳ ಬಳಿಕ ಭಾರತಕ್ಕೆ ಮರಳಿದ ನಟಿ ಮೀನಾಕ್ಷಿ ಶೇಷಾದ್ರಿ; ಚಿತ್ರರಂಗಕ್ಕೆ ಕಮ್​ಬ್ಯಾಕ್
Meenakshi Seshadri
ಮದನ್​ ಕುಮಾರ್​
|

Updated on: May 25, 2026 | 10:00 PM

Share

ಬಾಲಿವುಡ್‌ನ (Bollywood) ಹಿರಿಯ ಹಾಗೂ ಜನಪ್ರಿಯ ನಟಿ ಮೀನಾಕ್ಷಿ ಶೇಷಾದ್ರಿ ಅವರು ಸುಮಾರು ಮೂರು ದಶಕಗಳ ಕಾಲ ವಿದೇಶದಲ್ಲಿ ನೆಲೆಸಿದ ನಂತರ ಕಡೆಗೂ ಭಾರತಕ್ಕೆ ಮರಳಿದ್ದಾರೆ. 1990ರ ದಶಕದ ವೇಳೆ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗಲೇ ಚಿತ್ರರಂಗದಿಂದ ದೂರ ಸರಿದಿದ್ದ ನಟಿ, ಇದೀಗ ಸಿನಿಮಾ ಮತ್ತು ಒಟಿಟಿ ಶೋಗಳ ಮೂಲಕ ಹೊಸ ಅವಕಾಶಗಳೊಂದಿಗೆ ತಮ್ಮ ನಟನಾ ಪ್ರಯಾಣವನ್ನು ಪುನರಾರಂಭಿಸಲು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿರುವ ಮೀನಾಕ್ಷಿ ಶೇಷಾದ್ರಿ (Meenakshi Seshadri) ಅವರು ಈ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

ಮದುವೆಯ ನಂತರ ಚಿತ್ರರಂಗವನ್ನು ತೊರೆಯುವ ಮೀನಾಕ್ಷಿ ಅವರ ನಿರ್ಧಾರವು ಬಾಲಿವುಡ್‌ನಲ್ಲಿ ಇಂದಿಗೂ ಹೆಚ್ಚು ಚರ್ಚಿಸಲ್ಪಡುವ ವಿಷಯಗಳಲ್ಲಿ ಒಂದಾಗಿದೆ. 1995ರಲ್ಲಿ ಉದ್ಯಮಿ ಹರೀಶ್ ಮೈಸೂರು ಅವರನ್ನು ವಿವಾಹವಾದ ನಂತರ, ಮೀನಾಕ್ಷಿ ಅಮೆರಿಕಕ್ಕೆ ವಲಸೆ ಹೋಗಿದ್ದರು. ಆ ಸಮಯದಲ್ಲಿ ಹಿಂದಿ ಚಿತ್ರರಂಗದ ಮುಂಚೂಣಿ ನಟಿಯಾಗಿದ್ದರೂ, ಅವರು ಚಿತ್ರರಂಗದಿಂದ ಸಂಪೂರ್ಣವಾಗಿ ದೂರ ಉಳಿದಿದ್ದರು.

ವೀಡಿಯೊದಲ್ಲಿ ಮಾತನಾಡಿದ ಅವರು, ‘ನನ್ನ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗೆ ಆತ್ಮೀಯ ನಮಸ್ಕಾರಗಳು. ಇಂದು ನಿಮ್ಮ ಪ್ರೀತಿ, ಪ್ರೋತ್ಸಾಹ ಮತ್ತು ನಿರಂತರ ಬೆಂಬಲಕ್ಕಾಗಿ ನಾನು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ಬರೋಬ್ಬರಿ 30 ವರ್ಷಗಳ ನಂತರ, ನಾನು ನನ್ನ ಕರ್ಮಭೂಮಿಯಾದ ಭಾರತದ ಮುಂಬೈಗೆ ಮರಳಿದ್ದೇನೆ. ಭರವಸೆ, ಉತ್ಸಾಹ ಮತ್ತು ಸಕಾರಾತ್ಮಕತೆಯೊಂದಿಗೆ ಮತ್ತೊಮ್ಮೆ ಮನರಂಜನಾ ಕ್ಷೇತ್ರಕ್ಕೆ ಹೆಜ್ಜೆ ಇಟ್ಟಿದ್ದೇನೆ’ ಎಂದು ಹೇಳಿದ್ದಾರೆ.

ತಮ್ಮ ಸೃಜನಶೀಲತೆಗೆ ಸವಾಲು ನೀಡುವ ಮತ್ತು ನಟನೆಯ ಹೊಸ ಆಯಾಮಗಳನ್ನು ಅನ್ವೇಷಿಸಲು ಸಹಾಯ ಮಾಡುವ ಪಾತ್ರಗಳನ್ನು ಮಾಡಲು ಬಯಸುವುದಾಗಿ ಅವರು ತಿಳಿಸಿದ್ದಾರೆ. ‘ಅದು ಮುಖ್ಯ ಪಾತ್ರವಾಗಿರಲಿ, ಪೋಷಕ ಪಾತ್ರವಾಗಿರಲಿ ಅಥವಾ ಸಣ್ಣ ಶೋ ಆಗಿರಲಿ, ನಾನು ಅರ್ಥಪೂರ್ಣ ಅವಕಾಶಗಳಿಗಾಗಿ ಎದುರು ನೋಡುತ್ತಿದ್ದೇನೆ. ಅದು ಪ್ರಭಾವಶಾಲಿ ಅಭಿನಯವಾಗಿದ್ದರೆ ಸಾಕು, ಪಾತ್ರ ಯಾವುದಾದರೂ ಪರವಾಗಿಲ್ಲ. ಸಿನಿಮಾ ಅಥವಾ ಒಟಿಟಿ ಶೋಗಳು ಯಾವುದಾದರೂ ಸರಿ’ ಎಂದು ಅವರು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೆಲೆಬ್ರಿಟಿಗಳ ಅಹಂಕಾರಕ್ಕೆ ತೆರೆ ಹಾಕಲು ನಿರ್ಧರಿಸಿದ ಬಾಲಿವುಡ್​ನ ಖ್ಯಾತ ಹೇರ್​​​ಸ್ಟೈಲಿಸ್ಟ್

‘ಹಲವು ಆಫರ್‌ಗಳು ನನ್ನ ಬಳಿ ಬಂದಿದ್ದವು ನಿಜ, ಆದರೆ ಅವುಗಳಲ್ಲಿ ಕೆಲವು ಕ್ರಿಯೇಟಿವ್ ಆಗಿ ಅಷ್ಟೊಂದು ಆಕರ್ಷಕವಾಗಿರಲಿಲ್ಲ ಮತ್ತು ಕೆಲವು ಕಾರಣಾಂತರಗಳಿಂದ ಕಾರ್ಯರೂಪಕ್ಕೆ ಬರಲಿಲ್ಲ’ ಎಂದು ಮೀನಾಕ್ಷಿ ಶೇಷಾದ್ರಿ ಹೇಳಿದ್ದಾರೆ. ಸದ್ಯಕ್ಕೆ ತಾವು ಯಾವುದೇ ಟ್ಯಾಲೆಂಟ್ ಏಜೆನ್ಸಿಯ ಬೆಂಬಲವಿಲ್ಲದೆ ಸ್ವತಂತ್ರವಾಗಿ ಕಮ್‌ಬ್ಯಾಕ್ ಜರ್ನಿಯನ್ನು ನಿಭಾಯಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ