‘ಕಂಗನಾ ಫೈಟರ್’: ನಟಿಯನ್ನು ಹಾಡಿ ಹೊಗಳಿದ ಬಾಲಿವುಡ್ ನಾಯಕಿ

Kangana Ranaut: ಹಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಸಂಬಂಧಿ ಮೀರಾ ಚೋಪ್ರಾ ಬಾಲಿವುಡ್​ನಲ್ಲಿ ನಟಿಯಾಗಿ ನೆಲೆ ನಿಲ್ಲುವ ಪ್ರಯತ್ನದಲ್ಲಿದ್ದಾರೆ. ಇದೀಗ ಮೀರಾ ಚೋಪ್ರಾ ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ಅವರನ್ನು ಕೊಂಡಾಡಿದ್ದಾರೆ.

‘ಕಂಗನಾ ಫೈಟರ್’: ನಟಿಯನ್ನು ಹಾಡಿ ಹೊಗಳಿದ ಬಾಲಿವುಡ್ ನಾಯಕಿ
Follow us
| Updated By: ಮಂಜುನಾಥ ಸಿ.

Updated on: Oct 11, 2024 | 6:48 PM

ನಟಿ ಕಂಗನಾ ರಣಾವತ್ ಅವರು ಬಾಲಿವುಡ್​ನಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಅವರಿಗೆ ಅನೇಕರನ್ನು ಕಂಡರೆ ಆಗೋದಿಲ್ಲ. ಅವರು ಸುಖಾಸುಮ್ಮನೆ ಕಿರಿಕ್ ಮಾಡಿಕೊಳ್ಳುತ್ತಾರೆ. ಹಲವರ ವಿರುದ್ಧ ಅವರು ಸಿಡಿದೆದ್ದಿದ್ದು ಇದೆ. ಅದೇ ರೀತಿ ಅವರನ್ನು ಕಂಡರೂ ಅನೇಕರಿಗೆ ಆಗೋದಿಲ್ಲ ಎಂಬುದನ್ನು ಇಲ್ಲಿ ಗಮನಿಸಬೇಕು. ಅವರನ್ನು ಹೊಗಳಿದವರು ತುಂಬಾನೇ ಕಡಿಮೆ, ಈಗ ಕಂಗನಾ ಬಗ್ಗೆ ಓರ್ವ ನಟಿ ಮೆಚ್ಚುಗೆಯ ಮಾತನ್ನು ಆಡಿದ್ದಾರೆ.

ಕಂಗನಾ ರಣಾವತ್ ಅವರ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದು ಪ್ರಿಯಾಂಕಾ ಚೋಪ್ರಾ ಅವರ ಕಸಿನ್ ಮೀರಾ ಚೋಪ್ರಾ. ನಟನೆಯಲ್ಲಿ ಗೆದ್ದ ಬಳಿಕ ಕಂಗನಾ ರಾಜಕೀಯದಲ್ಲೂ ಯಶಸ್ಸು ಕಂಡಿದ್ದಾರೆ. ‘ಯುವ ಜನತೆ ರಾಜಕೀಯಕ್ಕೆ ಇಳಿಯಬೇಕು. ಕಂಗನಾ ಅವರನ್ನೇ ನೋಡಿ.. ಅವರಿಗೆ ಅದರಲ್ಲಿ ಇಳಿಯಲು ಸರಿಯಾದ ಸಮಯ. ಅವರು ಉತ್ತಮ ನಟಿ’ ಎಂದಿದ್ದಾರೆ.

‘ನಾನು ಕಂಗನಾ ಅಭಿಮಾನಿ. ನಾನು ಕಂಗನಾ ಅವರ ದೊಡ್ಡ ಅಭಿಮಾನಿ. ಅವರು ಇಂಡಸ್ಟ್ರಿಯಲ್ಲಿ ಮಾಡಿರೋದನ್ನು ಈ ಮೊದಲು ಯಾರೂ ಮಾಡಿಲ್ಲ. ಬಾಲಿವುಡ್​ನಲ್ಲಿ ಆರಂಭದಿಂದ ಯಾರೂ ಮಾಡಿರದ್ದನ್ನು ಅವರು ಮಾಡಿ ತೋರಿಸಿದ್ದಾರೆ ಅನ್ನೋದು ವಿಶೇಷ’ ಎಂದಿದ್ದಾರೆ ಮೀರಾ. ‘ಕಂಗನಾ ಫೈಟರ್. ಅವರು ಒಬ್ಬಂಟಿ. ಅವರು ಕೆಲಸ ಮಾಡೋದೆ ಹಾಗೆ. ಕಂಗನಾ ಎಲ್ಲವನ್ನೂ ಮಾಡುತ್ತಾರೆ. ಈ ರೀತಿ ಮ್ಯಾನೇಜ್ ಮಾಡೋಕೆ ಯಾರಿಂದಲೂ ಸಾಧ್ಯವಾಗಿಲ್ಲ’ ಎಂದು ಕಂಗನಾ ರಣಾವತ್ ಅರ ಬಗ್ಗೆ ಮೀರಾ ಮೆಚ್ಚುಗೆಯ ಮಾತನ್ನು ಆಡಿದ್ದಾರೆ.

ಇದನ್ನೂ ಓದಿ:ಕೃಷಿ ಕಾಯ್ದೆ ವಿಚಾರ: ಹೇಳಿಕೆ ಹಿಂಪಡೆದ ಕಂಗನಾ ರನೌತ್

‘ಕಂಗನಾ ಯಾವಾಗಲೂ ಡಿಪ್ಲೋಮೆಟಿಕ್ ಆಗಿ ನಡೆದುಕೊಂಡಿಲ್ಲ. ಈ ಕಾರಣಕ್ಕೆ ಅವರಿಗೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಅವರು ಅತ್ಯುತ್ತಮ ನಟಿ ಅನ್ನೋದನ್ನು ಯಾರೂ ತಳ್ಳಿ ಹಾಕಲು ಸಾಧ್ಯವಿಲ್ಲ. ನಟನೆಯಿಂದ ರಾಜಕೀಯದಲ್ಲಿ ಸಹಕಾರಿ ಆಯಿತೇ? ಇಲ್ಲ. ಅವರು 10 ದಿನಕ್ಕೊಮ್ಮೆ ಕ್ಷಮೆ ಕೇಳುತ್ತಾರೆ. ಹೃದಯದಿಂದ ಮಾತನಾಡಿ ಅವರು ಸಮಸ್ಯೆ ಮಾಡಿಕೊಳ್ಳುತ್ತಾರೆ’ ಎಂದಿದ್ದಾರೆ ಅವರು.

ಕಂಗನಾ ಅವರು ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್ ನಿರೀಕ್ಷೆಯಲ್ಲಿ ಇದ್ದಾರೆ. ಈ ಚಿತ್ರವು ಸೆನ್ಸಾರ್ ಮಂಡಳಿಯಿಂದ ಸಾಕಷ್ಟು ತೊಂದರೆ ಅನುಭವಿಸಿದೆ. ಈ ಚಿತ್ರವು ಸೆಪ್ಟೆಂಬರ್ನಲ್ಲೇ ರಿಲೀಸ್ ಆಗಿರಬೇಕಿತ್ತು. ಆದರೆ, ಕಾರಣಾಂತರಗಳಿಂದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಯಶಸ್ಸು ಕಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ
‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ
ಶಿವಕುಮಾರ್​​ಗೆ ವಿಶ್ ಮಾಡಲು ಬೆಳಗ್ಗೆಯೇ ಮನೆ ಮುಂದೆ ಅಭಿಮಾನಿಗಳ ದಂಡು
ಶಿವಕುಮಾರ್​​ಗೆ ವಿಶ್ ಮಾಡಲು ಬೆಳಗ್ಗೆಯೇ ಮನೆ ಮುಂದೆ ಅಭಿಮಾನಿಗಳ ದಂಡು