AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆ ಸಿಗಲಿಲ್ಲ ಅಂತ 4 ರಾತ್ರಿ ನಿದ್ದೆ ಮಾಡಲಿಲ್ಲ ಮೀರಾ ಚೋಪ್ರಾ; ದೀಪಿಕಾ ಮೇಲೆ ಆರೋಪ ಹೊರಿಸಿದ ನಟಿ

Meera Chopra | Deepika Padukone: ‘ನನ್ನ ಮೇಲೆ ತುಂಬ ಒತ್ತಡ ಇತ್ತು. ನಾನು 3-4 ರಾತ್ರಿ ನಿದ್ದೆ ಮಾಡಲಿಲ್ಲ’ ಎಂದು ಮೀರಾ ಚೋಪ್ರಾ ಹೇಳಿದ್ದಾರೆ.

ಬಟ್ಟೆ ಸಿಗಲಿಲ್ಲ ಅಂತ 4 ರಾತ್ರಿ ನಿದ್ದೆ ಮಾಡಲಿಲ್ಲ ಮೀರಾ ಚೋಪ್ರಾ; ದೀಪಿಕಾ ಮೇಲೆ ಆರೋಪ ಹೊರಿಸಿದ ನಟಿ
ದೀಪಿಕಾ ಪಡುಕೋಣೆ, ಮೀರಾ ಚೋಪ್ರಾ
TV9 Web
| Edited By: |

Updated on: May 29, 2022 | 7:59 AM

Share

2022ರ ಕಾನ್​ ಚಿತ್ರೋತ್ಸವಕ್ಕೆ ತೆರೆ ಬಿದ್ದಿದೆ. ಈ ಬಾರಿ ಫಿಲ್ಮ್​ ಫೆಸ್ಟಿವಲ್​ (Cannes 2022) ಹಲವು ಕಾರಣಕ್ಕಾಗಿ ಗಮನ ಸೆಳೆಯಿತು. ಭಾರತದ ಪಾಲಿಗೆ ಇದು ತುಂಬ ವಿಶೇಷವಾಗಿತ್ತು. ಯಾಕೆಂದರೆ ಭಾರತೀಯ ಚಿತ್ರರಂಗಕ್ಕೆ ಕಾನ್​ ಚಿತ್ರೋತ್ಸವದಲ್ಲಿ ಗೌರವ ಸಲ್ಲಿಸಲಾಯಿತು. ಭಾರತದ ಅನೇಕ ನಟ-ನಟಿಯರನ್ನು ಆಹ್ವಾನಿಸಲಾಗಿತ್ತು. ದೀಪಿಕಾ ಪಡುಕೋಣೆ, ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ ಮುಂತಾದ ಟಾಪ್ ನಟಿಯರು ಮಾತ್ರವಲ್ಲದೇ ಇನ್ನಿತರ ಹೀರೋಯಿನ್​ಗಳಿಗೂ ಈ ಚಿತ್ರೋತ್ಸವದಲ್ಲಿ ಭಾಗವಹಿಸುವ ಅವಕಾಶ ನೀಡಲಾಗಿತ್ತು. ಆ ಪೈಕಿ ಮೀರಾ ಚೋಪ್ರಾ (Meera Chopra) ಅವರು ಕೂಡ ಒಬ್ಬರು. ಕಾನ್​ ಚಿತ್ರೋತ್ಸವದಲ್ಲಿ ಭಾಗಿಯಾಗಿ ಬಂದಿರುವ ಮೀರಾ ಒಂದಷ್ಟು ವಿಚಾರಗಳನ್ನು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಮೇಲೆ ಅವರು ಕೆಲವು ಆರೋಪಗಳನ್ನು ಹೊರಿಸಿದ್ದಾರೆ. ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗವಹಿಸಲು ತಮಗೆ ಸೂಕ್ತವಾದ ಬಟ್ಟೆ ಸಿಗದೇ ಇರುವುದಕ್ಕೆ ದೀಪಿಕಾ ಪಡುಕೋಣೆ (Deepika Padukone) ಕಾರಣ ಎಂಬರ್ಥದಲ್ಲಿ ಮೀರಾ ಚೋಪ್ರಾ ಹೇಳಿಕೆ ನೀಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ವಿಚಾರ ಚರ್ಚೆ ಆಗುತ್ತಿದೆ. ಅಷ್ಟಕ್ಕೂ ಮೀರಾ ಈ ರೀತಿ ಹೇಳಿದ್ದೇಕೆ? ಇಲ್ಲಿದೆ ವಿವರ..

ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುವುದು ಕಾನ್​ ಚಿತ್ರೋತ್ಸವದ ಒಂದು ವಿಶೇಷ ಆಕರ್ಷಣೆ. ದೇಶ-ವಿದೇಶದಿಂದ ಬರುವ ನೂರಾರು ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗುತ್ತಾರೆ. ಮನಮೋಹಕವಾದ ಉಡುಗೆಗಳನ್ನು ತೊಟ್ಟು ಅವರೆಲ್ಲ ಪೋಸ್​ ನೀಡುತ್ತಾರೆ. ಸೆಲೆಬ್ರಿಟಿಗಳ ಫೋಟೋ, ವಿಡಿಯೋಗಾಗಿ ಸಾವಿರಾರು ಕ್ಯಾಮೆರಾಗಳು ಮುಗಿ ಬೀಳುತ್ತವೆ. ಇಂಥ ಸಮಾರಂಭದಲ್ಲಿ ಭಾಗವಹಿಸಲು ಮೀರಾ ಚೋಪ್ರಾ ಅವರಿಗೆ ಸೂಕ್ತವಾದ ಕಾಸ್ಟ್ಯೂಮ್​ ಸಿಗಲಿಲ್ಲ ಎಂಬುದು ಈಗ ಸುದ್ದಿ ಆಗಿದೆ.

ಇದನ್ನೂ ಓದಿ: Deepika Padukone: ಕೆಂಪು ಬಣ್ಣದ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದ ನಟಿ ದೀಪಿಕಾ ಪಡುಕೋಣೆ

ಇದನ್ನೂ ಓದಿ
Image
ವಿದೇಶಕ್ಕೆ ಹೋಗಿ ಎಲ್ಲ ಬಟ್ಟೆ ಕಳೆದುಕೊಂಡ ಪೂಜಾ ಹೆಗ್ಡೆ; ಕೊನೇ ಕ್ಷಣದಲ್ಲಿ ನಟಿ ಮಾಡಿದ್ದೇನು?
Image
ಗುಲಾಬಿ ಬಣ್ಣದ ಗೌನ್​ ಧರಿಸಿ ಕಾನ್​ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ; ಫೋಟೋ ವೈರಲ್​
Image
ಕಾನ್ ಚಿತ್ರೋತ್ಸವದಲ್ಲಿ ಮಿಂಚಿದ ತಮನ್ನಾ, ಊರ್ವಶಿ ರೌಟೇಲಾ; ಇಲ್ಲಿವೆ ಕಲರ್​ಫುಲ್​ ಫೋಟೋಗಳು
Image
Cannes film Festival 2022: ಕಾನ್​ ಚಿತ್ರೋತ್ಸವಕ್ಕೆ ದೀಪಿಕಾ ಪಡುಕೋಣೆ ಜ್ಯೂರಿ; ಜಾಗತಿಕ ಮಟ್ಟದಲ್ಲಿ ಹೆಚ್ಚಿತು ಕನ್ನಡತಿಯ ಗೌರವ

‘ಫ್ಯಾಷನ್​ ಎಂಬುದು ಮುಖ್ಯ ವಿಷಯ ಆಗಿದೆ. ಯಾವುದೂ ತಪ್ಪಾಗುವಂತಿಲ್ಲ. ಕಾನ್​ ಚಿತ್ರೋತ್ಸವಕ್ಕಾಗಿ ಕಾಸ್ಟ್ಯೂಮ್​ ಹೊಂದಿಸುವುದು ನನಗೆ ಬಹಳ ಕಷ್ಟ ಆಯಿತು. ಯಾಕೆಂದರೆ ಎಲ್ಲ ಡಿಸೈನರ್​ಗಳು ದೀಪಿಕಾ ಪಡುಕೋಣೆಗೆ ಬಟ್ಟೆ ನೀಡುತ್ತಿದ್ದರು. ನನ್ನ ಮೇಲೆ ತುಂಬ ಒತ್ತಡ ಇತ್ತು. ನಾನು 3-4 ರಾತ್ರಿ ನಿದ್ದೆ ಮಾಡಲಿಲ್ಲ’ ಎಂದು ಮೀರಾ ಚೋಪ್ರಾ ಹೇಳಿದ್ದಾರೆ ಅಂತ ಹಿಂದೂಸ್ತಾನ್​ ಟೈಮ್ಸ್​ ವರದಿ ಮಾಡಿದೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಬಿಕಿನಿ ಫೋಟೋಗಳು ಲೀಕ್​; ಶಾರುಖ್​ ಕೂಡ ಇದ್ದಾರೆ ಅಂತ ಪತ್ತೆಹಚ್ಚಿದ ಫ್ಯಾನ್ಸ್​

ಅನೇಕ ನಟಿಯರು ಪ್ರತಿಷ್ಠಿತ ಕಂಪನಿಗಳ ರಾಯಭಾರಿಗಳಾಗಿ ಕಾನ್​ ಚಿತ್ರೋತ್ಸವದಲ್ಲಿ ಭಾಗವಹಿಸುತ್ತಾರೆ. ತಾವು ಆ ರೀತಿ ಅಲ್ಲ ಎಂದು ಮೀರಾ ಚೋಪ್ರಾ ಹೇಳಿದ್ದಾರೆ. ‘ನಾನು ಯಾವುದೋ ಲಿಕ್ಕರ್​ ಬ್ರ್ಯಾಂಡ್​ ಸಲುವಾಗಿ ಅಥವಾ ಸುಮ್ಮನೆ ರೆಡ್​ ಕಾರ್ಪೆಟ್​ನಲ್ಲಿ ಪೋಸ್​ ನೀಡುವುದಕ್ಕಾಗಿ ಅಲ್ಲಿಗೆ ಹೋಗಿಲ್ಲ. ನನ್ನ ಸಿನಿಮಾದ ಪ್ರಚಾರಕ್ಕಾಗಿ ನಾನು ಅಲ್ಲಿಗೆ ತೆರಳಿದ್ದು’ ಎಂದು ಅವರು ಹೇಳಿದ್ದಾರೆ. ಆ ಮೂಲಕ ಅವರು ಬೇರೆ ನಟಿಯರ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
TV9 Web
TV9 Web

TV9 Kannada

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ