Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾನ್​ ಎಂಬ ಹೆಸರಿನ ಕಾರಣಕ್ಕೆ ಶಾರುಖ್​ ಮಗನನ್ನು ಅರೆಸ್ಟ್​ ಮಾಡಲಾಗಿದೆ’: ಮೆಹಬೂಬಾ ಮುಫ್ತಿ ಆರೋಪ

ಆರ್ಯನ್​ ಖಾನ್​ ಬಂಧನದ ಬಗ್ಗೆ ಟ್ವೀಟ್​ ಮಾಡಿರುವ ಮೆಹಬೂಬಾ ಮುಫ್ತಿ ಅವರು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಅವರ ಹೇಳಿಕೆಯನ್ನು ಬಹುತೇಕರು ಖಂಡಿಸಿದ್ದಾರೆ.

‘ಖಾನ್​ ಎಂಬ ಹೆಸರಿನ ಕಾರಣಕ್ಕೆ ಶಾರುಖ್​ ಮಗನನ್ನು ಅರೆಸ್ಟ್​ ಮಾಡಲಾಗಿದೆ’: ಮೆಹಬೂಬಾ ಮುಫ್ತಿ ಆರೋಪ
ಆರ್ಯನ್​ ಖಾನ್​, ಮೆಹಬೂಬಾ ಮುಫ್ತಿ
Follow us
TV9 Web
| Updated By: ಮದನ್​ ಕುಮಾರ್​

Updated on: Oct 12, 2021 | 8:22 AM

ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಆರೋಪದ ಮೇಲೆ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಬಂಧನಕ್ಕೆ ಒಳಗಾದ ಬಳಿಕ ಅವರ ಪರವಾಗಿ ಅನೇಕರು ಧ್ವನಿ ಎತ್ತಿದ್ದಾರೆ. ಸದ್ಯ ಆರ್ಯನ್ ಖಾನ್​ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಅವರನ್ನು ಎನ್​ಸಿಬಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಜಾತಿ-ಧರ್ಮದ ವಿಚಾರವನ್ನೂ ಎಳೆದುತಂದಿದ್ದಾರೆ. ಅದು ದೊಡ್ಡ ಚರ್ಚೆಗೆ ಕಾರಣ ಆಗಿದೆ.

ಆರ್ಯನ್​ ಬಂಧನದ ಬಗ್ಗೆ ಟ್ವೀಟ್​ ಮಾಡಿರುವ ಮೆಹಬೂಬಾ ಮುಫ್ತಿ ಅವರು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ರೈತರ ಕೊಲೆ ಆರೋಪ ಹೊತ್ತಿರುವ ಕೇಂದ್ರ ಸಚಿವರ ಮಗನಿಗೆ ಶಿಕ್ಷೆ ಕೊಡಿಸುವ ಬದಲು ತನಿಖಾ ಸಂಸ್ಥೆಗಳು 23ರ ಪ್ರಾಯದ ಹುಡುಗನ ಹಿಂದೆ ಬಿದ್ದಿವೆ. ಆತನ ಸರ್​ನೇಮ್ ಖಾನ್ ಎಂಬುದೇ ಇದಕ್ಕೆ ಕಾರಣ. ಬಿಜೆಪಿಯ ವೋಟ್​ ಬ್ಯಾಂಕ್​ ಕಾರಣದಿಂದ ಮುಸ್ಲೀಮರು ಟಾರ್ಗೆಟ್​ ಆಗುತ್ತಿದ್ದಾರೆ’ ಎಂದು ಮೆಹಬೂಬಾ ಮುಫ್ತಿ ಟ್ವೀಟ್​ ಮಾಡಿದ್ದಾರೆ.

ಮೆಹಬೂಬಾ ಮುಫ್ತಿ ಅವರ ಹೇಳಿಕೆಯನ್ನು ಬಹುತೇಕರು ಖಂಡಿಸಿದ್ದಾರೆ. ಈ ಸಂಬಂಧ ದೆಹಲಿ ಮೂಲದ ವಕೀಲರೊಬ್ಬರು ಅವರ ವಿರುದ್ಧ ದೂರು ನೀಡಿದ್ದಾರೆ ಎಂದು ವರದಿ ಆಗಿದೆ. ಅದೇನೇ ಇರಲಿ, ಪ್ರತಿ ದಿನ ಒಬ್ಬರಲ್ಲಾ ಒಬ್ಬರು ಶಾರುಖ್​ ಫ್ಯಾಮಿಲಿ ಪರವಾಗಿ ಬ್ಯಾಟ್​ ಬೀಸುತ್ತಲೇ ಇದ್ದಾರೆ. ಇತ್ತೀಚೆಗೆ ಹೃತಿಕ್​ ರೋಷನ್​, ವಿಶಾಲ್​ ದದ್ಲಾನಿ, ಶೇಖರ್​ ಸುಮನ್​, ಸಲ್ಮಾನ್ ಖಾನ್, ಫರ್ಹಾ ಖಾನ್​ ಮುಂತಾದವರು ಶಾರುಖ್​ಗೆ ಬೆಂಬಲ ವ್ಯಕ್ತಪಡಿಸಿದ್ದರು.

ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಸೋಮವಾರ (ಅ.11)  ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದರೆ ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯಕ್ಕೆ ಬುಧವಾರಕ್ಕೆ (ಅ.13) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯದೇ ಬೇರೆ ದಾರಿ ಇಲ್ಲ. ಆರ್ಯನ್​ ಖಾನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಪುತ್ರ ಅರೆಸ್ಟ್​ ಆದ ದಿನದಿಂದಲೂ ಶಾರುಖ್​ ಮತ್ತು ಗೌರಿ ಖಾನ್​ ದಂಪತಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಊಟ, ನಿದ್ರೆಯ ಕಡೆಗೂ ಅವರು ಗಮನ ಕೊಡುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಒಂದು ವೇಳೆ ಸ್ಪೆಷಲ್​ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ಗೆ ಜಾಮೀನು ಸಿಗದೇ ಇದ್ದರೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ವಕೀಲ ಸತೀಶ್​ ಮಾನೆಶಿಂಧೆ ನಿರ್ಧರಿಸಿದ್ದಾರೆ. ಯಾವುದಕ್ಕೂ ಬುಧವಾರದವರೆಗೆ ಕಾಯುವುದು ಅನಿವಾರ್ಯ.

ಇದನ್ನೂ ಓದಿ:

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ