AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾನ್​ ಎಂಬ ಹೆಸರಿನ ಕಾರಣಕ್ಕೆ ಶಾರುಖ್​ ಮಗನನ್ನು ಅರೆಸ್ಟ್​ ಮಾಡಲಾಗಿದೆ’: ಮೆಹಬೂಬಾ ಮುಫ್ತಿ ಆರೋಪ

ಆರ್ಯನ್​ ಖಾನ್​ ಬಂಧನದ ಬಗ್ಗೆ ಟ್ವೀಟ್​ ಮಾಡಿರುವ ಮೆಹಬೂಬಾ ಮುಫ್ತಿ ಅವರು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಅವರ ಹೇಳಿಕೆಯನ್ನು ಬಹುತೇಕರು ಖಂಡಿಸಿದ್ದಾರೆ.

‘ಖಾನ್​ ಎಂಬ ಹೆಸರಿನ ಕಾರಣಕ್ಕೆ ಶಾರುಖ್​ ಮಗನನ್ನು ಅರೆಸ್ಟ್​ ಮಾಡಲಾಗಿದೆ’: ಮೆಹಬೂಬಾ ಮುಫ್ತಿ ಆರೋಪ
ಆರ್ಯನ್​ ಖಾನ್​, ಮೆಹಬೂಬಾ ಮುಫ್ತಿ
TV9 Web
| Edited By: |

Updated on: Oct 12, 2021 | 8:22 AM

Share

ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಆರೋಪದ ಮೇಲೆ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಬಂಧನಕ್ಕೆ ಒಳಗಾದ ಬಳಿಕ ಅವರ ಪರವಾಗಿ ಅನೇಕರು ಧ್ವನಿ ಎತ್ತಿದ್ದಾರೆ. ಸದ್ಯ ಆರ್ಯನ್ ಖಾನ್​ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಅವರನ್ನು ಎನ್​ಸಿಬಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಜಾತಿ-ಧರ್ಮದ ವಿಚಾರವನ್ನೂ ಎಳೆದುತಂದಿದ್ದಾರೆ. ಅದು ದೊಡ್ಡ ಚರ್ಚೆಗೆ ಕಾರಣ ಆಗಿದೆ.

ಆರ್ಯನ್​ ಬಂಧನದ ಬಗ್ಗೆ ಟ್ವೀಟ್​ ಮಾಡಿರುವ ಮೆಹಬೂಬಾ ಮುಫ್ತಿ ಅವರು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ರೈತರ ಕೊಲೆ ಆರೋಪ ಹೊತ್ತಿರುವ ಕೇಂದ್ರ ಸಚಿವರ ಮಗನಿಗೆ ಶಿಕ್ಷೆ ಕೊಡಿಸುವ ಬದಲು ತನಿಖಾ ಸಂಸ್ಥೆಗಳು 23ರ ಪ್ರಾಯದ ಹುಡುಗನ ಹಿಂದೆ ಬಿದ್ದಿವೆ. ಆತನ ಸರ್​ನೇಮ್ ಖಾನ್ ಎಂಬುದೇ ಇದಕ್ಕೆ ಕಾರಣ. ಬಿಜೆಪಿಯ ವೋಟ್​ ಬ್ಯಾಂಕ್​ ಕಾರಣದಿಂದ ಮುಸ್ಲೀಮರು ಟಾರ್ಗೆಟ್​ ಆಗುತ್ತಿದ್ದಾರೆ’ ಎಂದು ಮೆಹಬೂಬಾ ಮುಫ್ತಿ ಟ್ವೀಟ್​ ಮಾಡಿದ್ದಾರೆ.

ಮೆಹಬೂಬಾ ಮುಫ್ತಿ ಅವರ ಹೇಳಿಕೆಯನ್ನು ಬಹುತೇಕರು ಖಂಡಿಸಿದ್ದಾರೆ. ಈ ಸಂಬಂಧ ದೆಹಲಿ ಮೂಲದ ವಕೀಲರೊಬ್ಬರು ಅವರ ವಿರುದ್ಧ ದೂರು ನೀಡಿದ್ದಾರೆ ಎಂದು ವರದಿ ಆಗಿದೆ. ಅದೇನೇ ಇರಲಿ, ಪ್ರತಿ ದಿನ ಒಬ್ಬರಲ್ಲಾ ಒಬ್ಬರು ಶಾರುಖ್​ ಫ್ಯಾಮಿಲಿ ಪರವಾಗಿ ಬ್ಯಾಟ್​ ಬೀಸುತ್ತಲೇ ಇದ್ದಾರೆ. ಇತ್ತೀಚೆಗೆ ಹೃತಿಕ್​ ರೋಷನ್​, ವಿಶಾಲ್​ ದದ್ಲಾನಿ, ಶೇಖರ್​ ಸುಮನ್​, ಸಲ್ಮಾನ್ ಖಾನ್, ಫರ್ಹಾ ಖಾನ್​ ಮುಂತಾದವರು ಶಾರುಖ್​ಗೆ ಬೆಂಬಲ ವ್ಯಕ್ತಪಡಿಸಿದ್ದರು.

ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಸೋಮವಾರ (ಅ.11)  ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದರೆ ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯಕ್ಕೆ ಬುಧವಾರಕ್ಕೆ (ಅ.13) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯದೇ ಬೇರೆ ದಾರಿ ಇಲ್ಲ. ಆರ್ಯನ್​ ಖಾನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಪುತ್ರ ಅರೆಸ್ಟ್​ ಆದ ದಿನದಿಂದಲೂ ಶಾರುಖ್​ ಮತ್ತು ಗೌರಿ ಖಾನ್​ ದಂಪತಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಊಟ, ನಿದ್ರೆಯ ಕಡೆಗೂ ಅವರು ಗಮನ ಕೊಡುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಒಂದು ವೇಳೆ ಸ್ಪೆಷಲ್​ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ಗೆ ಜಾಮೀನು ಸಿಗದೇ ಇದ್ದರೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ವಕೀಲ ಸತೀಶ್​ ಮಾನೆಶಿಂಧೆ ನಿರ್ಧರಿಸಿದ್ದಾರೆ. ಯಾವುದಕ್ಕೂ ಬುಧವಾರದವರೆಗೆ ಕಾಯುವುದು ಅನಿವಾರ್ಯ.

ಇದನ್ನೂ ಓದಿ:

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

Follow Us
Web contact
Web contact

TV9 Kannada

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​