AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ‘ಪ್ರಚಾರಕ್ಕಾಗಿ ಟಾಯ್ಲೆಟ್​ ಬೇಕಾದ್ರೂ ತೊಳೀತಾರೆ’: ಪಾಪ್​ಕಾರ್ನ್​ ಮಾರಿದ ಜಾನ್ವಿಗೆ ನೆಟ್ಟಿಗರ ಟ್ರೋಲ್​

Janhvi Kapoor Viral Video: ‘ಮಿಲಿ’ ಚಿತ್ರದ ಪ್ರಚಾರಕ್ಕಾಗಿ ನಟಿ ಜಾನ್ವಿ ಕಪೂರ್​ ಅವರು ವಿಶೇಷ ರೀತಿಯಲ್ಲಿ ಪ್ರಚಾರ ಮಾಡಲು ಮುಂದಾಗಿದ್ದಾರೆ. ಆದರೆ ಜನರಿಗೆ ಅವರ ಈ ಗಿಮಿಕ್​ ಹಿಡಿಸಿಲ್ಲ.

Janhvi Kapoor: ‘ಪ್ರಚಾರಕ್ಕಾಗಿ ಟಾಯ್ಲೆಟ್​ ಬೇಕಾದ್ರೂ ತೊಳೀತಾರೆ’: ಪಾಪ್​ಕಾರ್ನ್​ ಮಾರಿದ ಜಾನ್ವಿಗೆ ನೆಟ್ಟಿಗರ ಟ್ರೋಲ್​
ಜಾನ್ವಿ ಕಪೂರ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 01, 2022 | 9:32 PM

ಸಿನಿಮಾ ಮಾಡುವುದು ಎಷ್ಟು ಕಷ್ಟವೋ ಅದರ ಪ್ರಚಾರ ಮಾಡುವುದು ಕೂಡ ಅಷ್ಟೇ ಕಷ್ಟ. ಅದಕ್ಕಾಗಿ ಸೆಲೆಬ್ರಿಟಿಗಳು ಇಲ್ಲಸಲ್ಲದ ಕಸರತ್ತು ಮಾಡುತ್ತಾರೆ. ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ (Janhvi Kapoor) ಅವರು ಬಾಲಿವುಡ್​ನಲ್ಲಿ ಫೇಮಸ್​ ಆಗಿದ್ದಾರೆ. ಆದರೆ ಈ ನಟಿಗೆ ಹೇಳಿಕೊಳ್ಳುವಂತಹ ಯಶಸ್ಸು ಇನ್ನೂ ಸಿಕ್ಕಿಲ್ಲ. ಒಂದೇ ಒಂದು ಗೆಲುವಿಗಾಗಿ ಅವರು ಹಲವು ಬಗೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಸಾಲು ಸಾಲು ಸಿನಿಮಾ ಮಾಡಿದರೂ ಅವರಿಗೆ ಜನಮೆಚ್ಚುಗೆ ಸಿಗುತ್ತಿಲ್ಲ. ಪದೇ ಪದೇ ಅವರು ರಿಮೇಕ್​ ಸಿನಿಮಾವನ್ನೇ ಮಾಡುತ್ತಿದ್ದಾರೆ. ಈಗ ಜಾನ್ವಿ ಕಪೂರ್​ ನಟಿಸಿರುವ ‘ಮಿಲಿ’ (Mili) ಸಿನಿಮಾ ನವೆಂಬರ್​ 4ರಂದು ಬಿಡುಗಡೆ ಆಗಲಿದೆ. ಅದರ ಸಲುವಾಗಿ ಜಾನ್ವಿ ಕಪೂರ್​ ಅವರು ವಿಶೇಷ ರೀತಿಯಲ್ಲಿ ಪ್ರಚಾರ ಮಾಡಲು ಮುಂದಾಗಿದ್ದಾರೆ. ಆದರೆ ಜನರಿಗೆ ಅವರ ಈ ಗಿಮಿಕ್​ ಹಿಡಿಸಿಲ್ಲ.

‘ಮಿಲಿ’ ಚಿತ್ರದ ಪ್ರಚಾರಕ್ಕಾಗಿ ಸೋಮವಾರ (ಅ.31) ಜಾನ್ವಿ ಕಪೂರ್ ಅವರು ದೆಹಲಿಗೆ ತೆರಳಿದ್ದರು. ಅಲ್ಲಿನ ಮಲ್ಟಿಪ್ಲೆಕ್ಸ್​ನಲ್ಲಿ ಅವರು ಪಾಪ್​ಕಾರ್ನ್​ ಮಾರಿದ್ದಾರೆ! ಅರೆರೆ, ನಿರ್ಮಾಪಕ ಬೋನಿ ಕಪೂರ್​ ಮಗಳು ಹೀಗೇಕೆ ಪಾಪ್​ಕಾರ್ನ್​ ಮಾರುತ್ತಿದ್ದಾರೆ ಅಂತ ಜನರು ಒಂದು ಕ್ಷಣ ಅಚ್ಚರಿಪಟ್ಟಿದ್ದಾರೆ. ಇದು ಪ್ರಚಾರದ ಗಿಮಿಕ್ ಎಂಬುದು ಮರುಕ್ಷಣವೇ ಗೊತ್ತಾಗಿದೆ.

ಇದನ್ನೂ ಓದಿ
Image
44 ಕೋಟಿ ರೂಪಾಯಿಗೆ ಮನೆ ಮಾರಿಕೊಂಡ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​; ಖರೀದಿಸಿದ ಹೀರೋ ಯಾರು?
Image
ಡಿಗ್ಲಾಮ್ ಲುಕ್​ನಲ್ಲಿ ನಟಿ ಜಾನ್ವಿ ಕಪೂರ್​; ಆದರೆ, ಈ ನಟಿ ನೀವಂದುಕೊಂಡ ಹಾಗಲ್ಲ
Image
Janhvi Kapoor: ಜಾನ್ವಿ ಕಪೂರ್​ ಫೋಟೋ ವೈರಲ್​; ಶ್ರೀದೇವಿ ಪುತ್ರಿಯ ಅಂದ-ಚಂದ ಕಂಡು ವಾವ್​ ಎಂದ ಅಭಿಮಾನಿಗಳು
Image
Janhvi Kapoor: ಪ್ರಕೃತಿಯ ಮಡಿಲಿನಲ್ಲಿ ಜಾನ್ವಿ ಕಪೂರ್ ವಿಹಾರ; ಫೋಟೋಗಳಿಗೆ ಮಸ್ತ್​ ಪೋಸ್​​

ಜಾನ್ವಿ ಕಪೂರ್​ ಅವರು ಪಾಪ್​ ಕಾರ್ನ್​ ಮಾರುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಜನರು ಅದಕ್ಕೆ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಇವರು ಶ್ರೀದೇವಿ-ಬೋನಿ ಕಪೂರ್​ ದಂಪತಿಯ ಪುತ್ರಿ ಆಗಿರದೇ ಇದ್ದರೆ ಪಾಪ್​ಕಾರ್ನ್​ ಮಾರುವ ಕೆಲಸವನ್ನೇ ಮಾಡಬೇಕಿತ್ತು’ ಎಂದು ನೆಟ್ಟಿಗರೊಬ್ಬರು ಕಾಲೆಳೆದಿದ್ದಾರೆ. ‘ಸಿನಿಮಾದ ಪ್ರಚಾರಕ್ಕಾಗಿ ಬೇಕಿದ್ದರೆ ಟಾಯ್ಲೆಟ್​ ಕೂಡ ತೊಳೀತಾರೆ’ ಎಂದು ಇನ್ನೊಬ್ಬರು ಕಟುವಾಗಿ ಟೀಕಿಸಿದ್ದಾರೆ. ‘ಸಿನಿಮಾ ಪ್ರಚಾರದ ಸಮಯದಲ್ಲಿ ಮಾತ್ರ ಇವರಿಗೆ ಜನರ ನೆನಪಾಗುತ್ತದೆ. ಬಾಕಿ ಸಮಯದಲ್ಲಿ ನೆನಪು ಇರುವುದಿಲ್ಲ’ ಎಂಬ ಕಮೆಂಟ್​ ಕೂಡ ಬಂದಿದೆ.

ಮಲಯಾಳಂನ ‘ಹೆಲೆನ್​’ ಸಿನಿಮಾ 2019ರಲ್ಲಿ ಬಿಡುಗಡೆ ಆಗಿ ಜನರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ನಾಯಕಿಪ್ರಧಾನ ಕಥೆಯುಳ್ಳ ಆ ಚಿತ್ರವನ್ನು ಹಿಂದಿಯಲ್ಲಿ ‘ಮಿಲಿ’ ಎಂದು ರಿಮೇಕ್​ ಮಾಡಲಾಗಿದೆ. ಬೋನಿ ಕಪೂರ್​ ಅವರು ಮಗಳು ಜಾನ್ವಿಗಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾದಿಂದಲಾದರೂ ಜಾನ್ವಿಗೆ ಗೆಲುವು ಸಿಗುತ್ತೋ ಇಲ್ಲವೋ ಎಂಬುದು ನವೆಂಬರ್​ 4ರಂದು ಗೊತ್ತಾಗಲಿದೆ. ಈ ಚಿತ್ರದಲ್ಲಿ ಜಾನ್ವಿ ಕಪೂರ್​ ಜೊತೆಗೆ ಸನ್ನಿ ಕೌಶಲ್​ ಹಾಗೂ ಮನೋಜ್​ ಪಾಹ್ವಾ ಅವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:32 pm, Tue, 1 November 22

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ