AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Laapataa Ladies: ಆಸ್ಕರ್ ಕನಸು ಭಗ್ನ; ರೇಸ್​ನಿಂದ ಹೊರ ಬಿದ್ದ ‘ಲಾಪತಾ ಲೇಡೀಸ್’

ಭಾರತದ ಅತಿ ಜನಪ್ರಿಯ ಚಿತ್ರಗಳಲ್ಲಿ ಒಂದಾದ 'ಮಿಸ್ಸಿಂಗ್ ಲೇಡಿಸ್' (ಲಾಪತಾ ಲೇಡೀಸ್) ಚಿತ್ರವು ಆಸ್ಕರ್ ನಾಮನಿರ್ದೇಶನದಿಂದ ಹೊರಬಿದ್ದಿದೆ. 2025ರ ಆಸ್ಕರ್ ಅವಾರ್ಡ್ ಗೆಲ್ಲುವ ಭಾರತದ ಆಸೆಗೆ ಇದು ತೀವ್ರ ಹೊಡೆತ ನೀಡಿದೆ. ಈ ಚಿತ್ರವು 'ವಿದೇಶಿ ಚಲನಚಿತ್ರ' ವಿಭಾಗಕ್ಕೆ ನಾಮನಿರ್ದೇಶನಗೊಂಡಿದ್ದರೂ, ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದೆ.

Laapataa Ladies: ಆಸ್ಕರ್ ಕನಸು ಭಗ್ನ; ರೇಸ್​ನಿಂದ ಹೊರ ಬಿದ್ದ ‘ಲಾಪತಾ ಲೇಡೀಸ್’
ಲಾಪತಾ ಲೇಡಿಸ್
ರಾಜೇಶ್ ದುಗ್ಗುಮನೆ
|

Updated on:Dec 18, 2024 | 10:03 AM

Share

‘ಮಿಸ್ಸಿಂಗ್ ಲೇಡಿಸ್’ (ಲಾಪತಾ ಲೇಡೀಸ್) ಸಿನಿಮಾ ಆಸ್ಕರ್​ ರೇಸ್​ನಿಂದ ಹೊರ ಬಿದ್ದಿದೆ. ಈ ಮೂಲಕ 2025ರಲ್ಲಿ ಆಸ್ಕರ್ ಗೆಲ್ಲಬೇಕು ಎಂಬ ಭಾರತೀಯರ ಕನಸು ನುಚ್ಚು ನೂರಾಗಿದೆ. ‘ದಿ ಅಕಾಡೆಮಿ ಆಫ್ ಮೋಷನ್​ ಪಿಕ್ಚರ್ಸ್ ಆರ್ಟ್ಸ್ ಆ್ಯಂಡ್ ಸೈನ್ಸ್​’ ಈ ಬಗ್ಗೆ ಘೋಷಣೆ ಮಾಡಿದೆ. ಈ ಚಿತ್ರದ ನಿರ್ಮಾಪಕ ಆಮಿರ್ ಖಾನ್ ಈ ಬಗ್ಗೆ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ.

‘ಲಾಪತಾ ಲೇಡೀಸ್’ ಸಿನಿಮಾ ಭಾರತದಲ್ಲಿ ಈ ವರ್ಷ ಅತಿ ಹೆಚ್ಚು ಇಷ್ಟ ಪಟ್ಟ ಸಿನಿಮಾಗಳಲ್ಲಿ ಒಂದು. ಈ ಸಿನಿಮಾ ನೋಡಿ ಜನರು ಮೆಚ್ಚಿಕೊಂಡರು. ಈ ಚಿತ್ರ ಭಾರತದಿಂದ ಅಧಿಕೃತವಾಗಿ ಆಸ್ಕರ್​ಗೆ ನಾಮಿನೇಟ್ ಆಯಿತು. ‘ವಿದೇಶಿ ಸಿನಿಮಾ’ ವಿಭಾಗಕ್ಕೆ ಈ ಚಿತ್ರ ಕಳುಹಿಸಲಾಯಿತು. ಬುಧವಾರ (ಡಿಸೆಂಬರ್ 18) ಈ ಬಗ್ಗೆ ಘೋಷಣೆ ಆಗಿದ್ದು, ಸಿನಿಮಾ ಟಾಪ್ 15ರಲ್ಲಿ ಬರಲೂ ಅನರ್ಹವಾಗಿದೆ.

ಮಾರ್ಚ್ 2ರಂದು ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದಲ್ಲಿ ನಡೆಯಲಿದೆ. ‘ಆಸ್ಕರ್ ಅವಾರ್ಡ್’ ನಾಮಿನೇಷನ್ ಜನವರಿ 17ರಂದು ಘೋಷಣೆ ಆಗಲಿದೆ. ಮಾರ್ಚ್ 2ರಂದು ಅದ್ದೂರಿ ಈವೆಂಟ್​ನಲ್ಲಿ ವಿನ್ನರ್​ಗಳ ಹೆಸರು ಘೋಷಣೆ ಆಗಲಿದೆ.

ಆಸ್ಕರ್ ಇತಿಹಾಸದಲ್ಲಿ ಈ ವರೆಗೆ ‘ಮದರ್ ಇಂಡಿಯಾ’, ‘ಸಲಾಮ್ ಬಾಂಬೆ’ ಹಾಗೂ ‘ಲಗಾನ್’ ಸಿನಿಮಾಗಳು ‘ವಿದೇಶಿ ಸಿನಿಮಾ’ ವಿಭಾಗದಲ್ಲಿ ನಾಮಿನೇಟ್ ಆಗಿದ್ದವು. ಆದರೆ, ಅವುಗಳಿಗೆ ಅವಾರ್ಡ್ ಸಿಕ್ಕಿಲ್ಲ. ಈಗ ‘ಮಿಸ್ಸಿಂಗ್ ಲೇಡಿಸ್’ ಚಿತ್ರಕ್ಕೂ ಅವಕಾಶ ಕೈ ತಪ್ಪಿದೆ.

ಇದನ್ನೂ ಓದಿ: ಆಸ್ಕರ್ ಅವಾರ್ಡ್​ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆದ ‘ಲಾಪತಾ ಲೇಡಿಸ್’

ಈ ಬಗ್ಗೆ ಗ್ರ್ಯಾಮಿ ಅವಾರ್ಡ್ ವಿನ್ನರ್ ರಿಕ್ಕಿ ಕೇಜ್ ಪ್ರತಿಕ್ರಿಯೆ ನೀಡಿದ್ದಾರೆ. ‘ಆಸ್ಕರ್​ನ ಶಾರ್ಟ್​ಲಿಸ್ಟ್ ರಿಲೀಸ್ ಆಗಿದೆ. ಇದರಲ್ಲಿ ಲಾಪತಾ ಲೇಡೀಸ್ ಚಿತ್ರ ಸ್ಥಾನ ಪಡೆದಿಲ್ಲ. ನಾನು ಈ ಚಿತ್ರವನ್ನು ಎಂಜಾಯ್ ಮಾಡಿದ್ದೇನೆ. ಆದರೆ, ಅಂತಾರಾಷ್ಟ್ರೀಯ ಫೀಚರ್ ಫಿಲ್ಮ್ ವರ್ಗಕ್ಕೆ ಭಾರತವನ್ನು ಪ್ರತಿನಿಧಿಸಲು ಇದು ಒಳ್ಳೆಯ ಆಯ್ಕೆ ಅಲ್ಲ. ನಿರೀಕ್ಷೆಯಂತೆ ಸಿನಿಮಾ ಸೋತಿದೆ. ವರ್ಷ ಕಳೆದಂತೆ ನಾವು ತಪ್ಪಾದ ಚಿತ್ರಗಳನ್ನು ಆಯ್ಕೆ ಮಾಡುತ್ತಲೇ ಇದ್ದೇವೆ. ನಾವು ಯಾವಾಗ ಅರಿತುಕೊಳ್ಳುತ್ತೇವೆ? ಹಲವಾರು ಅತ್ಯುತ್ತಮ ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದೇವೆ. ನಾವು ಪ್ರತಿ ವರ್ಷ ಇಂಟರ್ನ್ಯಾಷನಲ್ ಫೀಚರ್ ಫಿಲ್ಮ್ ವರ್ಗದಲ್ಲಿ ಗೆಲ್ಲಬೇಕು’ ಎಂದು ರಿಕ್ಕಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:56 am, Wed, 18 December 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ