AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ದೇಶಕನ ಕಚೇರಿ ಮುಂದೆ ಕಾಣಿಸಿಕೊಂಡ ರಶ್ಮಿಕಾ; ಬಾಲಿವುಡ್​ನಲ್ಲಿ 3ನೇ ಚಿತ್ರ ಯಾರ ಜೊತೆ?

Rashmika Mandanna: ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಮತ್ತು ‘ಅತರಂಗಿ ರೇ’ ಚಿತ್ರಕ್ಕೆ ಆನಂದ್​ ಎಲ್​. ರಾಯ್​ ನಿರ್ದೇಶನ ಮಾಡುತ್ತಿದ್ದಾರೆ. ಅಂಥ ಪ್ರತಿಭಾನ್ವಿತ ನಿರ್ದೇಶಕನ ಕಚೇರಿ ಎದುರು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಖ್ಯಾತ ನಿರ್ದೇಶಕನ ಕಚೇರಿ ಮುಂದೆ ಕಾಣಿಸಿಕೊಂಡ ರಶ್ಮಿಕಾ; ಬಾಲಿವುಡ್​ನಲ್ಲಿ 3ನೇ ಚಿತ್ರ ಯಾರ ಜೊತೆ?
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Nov 21, 2021 | 1:40 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಕೇವಲ ದಕ್ಷಿಣ ಭಾರತಕ್ಕೆ ಸೀಮಿತವಾಗಿ ಉಳಿದಿಲ್ಲ. ಬಾಲಿವುಡ್​ ಸಿನಿಮಾಗಳಲ್ಲೂ ಅವರಿಗೆ ಬೇಡಿಕೆ ಹೆಚ್ಚಿದೆ. ಈಗಾಗಲೇ ಅಮಿತಾಭ್​ ಬಚ್ಚನ್​, ಸಿದ್ದಾರ್ಥ್​ ಮಲ್ಹೋತ್ರಾ ಮುಂತಾದ ಸ್ಟಾರ್​ ಕಲಾವಿದರ ಜೊತೆ ನಟಿಸುವ ಅವಕಾಶ ರಶ್ಮಿಕಾಗೆ ಸಿಕ್ಕಿದೆ. ಅಮಿತಾಭ್ ಜೊತೆ ‘ಗುಡ್​ ಬೈ’ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ (Mission Majnu) ಸಿನಿಮಾದಲ್ಲಿ ಅವರು ತೆರೆಹಂಚಿಕೊಂಡಿದ್ದಾರೆ. ಈ ಸಿನಿಮಾಗಳ ಬಿಡುಗಡೆಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ. ಅಷ್ಟರಲ್ಲಾಗಲೇ ಬಾಲಿವುಡ್​ನಲ್ಲಿ ರಶ್ಮಿಕಾ 3ನೇ ಸಿನಿಮಾ ಒಪ್ಪಿಕೊಂಡಿರುವ ಸಾಧ್ಯತೆ ದಟ್ಟವಾಗಿದೆ. ಈಗ ಅವರು ಖ್ಯಾತ ನಿರ್ದೇಶಕ ಆನಂದ್​ ಎಲ್​. ರಾಯ್​ (Anand L Rai) ಅವರ ಕಚೇರಿ ಎದುರು ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. ಎಲ್ಲೆಲ್ಲೂ ಅವರ ಫೋಟೋಗಳು ವೈರಲ್​ ಆಗುತ್ತಿವೆ.

ಹಿಂದಿ ಚಿತ್ರರಂಗದಲ್ಲಿ ವಿಶೇಷ ರೀತಿಯ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡವರು ನಿರ್ದೇಶಕ ಆನಂದ್​ ಎಲ್​. ರಾಯ್​. ಅವರು ನಿರ್ದೇಶಿಸಿದ ‘ತನು ವೆಡ್ಸ್​ ಮನು’ ಚಿತ್ರವನ್ನು ಪ್ರೇಕ್ಷಕರು ಸಖತ್​ ಮೆಚ್ಚಿಕೊಂಡಿದ್ದರು. ಸದ್ಯ ಅವರು ಅಕ್ಷಯ್​ ಕುಮಾರ್​ ಜೊತೆ ಎರಡು ಸಿನಿಮಾ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಮತ್ತು ‘ಅತರಂಗಿ ರೇ’ ಚಿತ್ರಕ್ಕೆ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ. ಅಂಥ ಪ್ರತಿಭಾನ್ವಿತ ನಿರ್ದೇಶಕನ ಕಚೇರಿ ಎಂದು ರಶ್ಮಿಕಾ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಆನಂದ್​ ಎಲ್​. ರಾಯ್​ ಜೊತೆ ರಶ್ಮಿಕಾ ಹೊಸ ಸಿನಿಮಾದ ಕಥೆ ಕೇಳಲು ಬಂದಿರಬಹುದು ಅಥವಾ ಈಗಾಗಲೇ ಅವರು ಚಿತ್ರಕ್ಕೆ ಸಹಿ ಹಾಕಿರಬಹುದು ಎಂದು ಊಹಿಸಲಾಗುತ್ತಿದೆ. ಹಾಗಾಗಿ ಅವರ ಮೂರನೇ ಬಾಲಿವುಡ್​ ಸಿನಿಮಾಗೆ ಆನಂದ್​ ಎಲ್​. ರಾಯ್​ ನಿರ್ದೇಶನ ಮಾಡುತ್ತಾರೆ ಎಂಬ ಗುಮಾನಿ ಮೂಡಿದೆ. ಆದರೆ ಈ ಬಗ್ಗೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಹಲವು ಹಿಂದಿ ಸಿನಿಮಾ ಆಫರ್​ಗಳು ರಶ್ಮಿಕಾ ಅವರನ್ನು ಹುಡುಕಿಕೊಂಡು ಬರುತ್ತಿವೆ. ಆ ಸಿನಿಮಾದ ಮಾತುಕತೆ ಮತ್ತು ಕೆಲಸಗಳಿಗಾಗಿ ಪದೇಪದೇ ಅವರು ಮುಂಬೈಗೆ ತೆರಳಬೇಕಾಗಿದೆ. ಹಾಗಾಗಿ ಅವರು ಮುಂಬೈನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಅಲ್ಲದೇ ಗೋವಾದಲ್ಲೂ ಒಂದು ಐಷಾರಾಮಿ ಬಂಗಲೆ ಹೊಂದಿದ್ದಾರೆ. ಸಿನಿಮಾ ಮಾತ್ರವಲ್ಲದೇ ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿರುವ ಅವರು ಜಾಹೀರಾತುಗಳಿಂದಲೂ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ.

ಸದ್ಯ ರಶ್ಮಿಕಾ ಮಂದಣ್ಣ ಗಮನವೆಲ್ಲ ‘ಪುಷ್ಪ’ ಸಿನಿಮಾದ ಮೇಲಿದೆ. ಡಿ.17ರಂದು ಆ ಚಿತ್ರ ಬಿಡುಗಡೆ ಆಗಲಿದ್ದು, ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಜೋಡಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ:

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?

‘ರಶ್ಮಿಕಾ ಊಟ’ ಮಾರಾಟಕ್ಕಿದೆ; ಇದನ್ನು ತಿನ್ನೋದು ಹೇಗೆ? ವಿಡಿಯೋ ಸಮೇತ ವಿವರಿಸಿದ ನಟಿ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್