ಖ್ಯಾತ ನಿರ್ದೇಶಕನ ಕಚೇರಿ ಮುಂದೆ ಕಾಣಿಸಿಕೊಂಡ ರಶ್ಮಿಕಾ; ಬಾಲಿವುಡ್​ನಲ್ಲಿ 3ನೇ ಚಿತ್ರ ಯಾರ ಜೊತೆ?

Rashmika Mandanna: ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಮತ್ತು ‘ಅತರಂಗಿ ರೇ’ ಚಿತ್ರಕ್ಕೆ ಆನಂದ್​ ಎಲ್​. ರಾಯ್​ ನಿರ್ದೇಶನ ಮಾಡುತ್ತಿದ್ದಾರೆ. ಅಂಥ ಪ್ರತಿಭಾನ್ವಿತ ನಿರ್ದೇಶಕನ ಕಚೇರಿ ಎದುರು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಖ್ಯಾತ ನಿರ್ದೇಶಕನ ಕಚೇರಿ ಮುಂದೆ ಕಾಣಿಸಿಕೊಂಡ ರಶ್ಮಿಕಾ; ಬಾಲಿವುಡ್​ನಲ್ಲಿ 3ನೇ ಚಿತ್ರ ಯಾರ ಜೊತೆ?
ರಶ್ಮಿಕಾ ಮಂದಣ್ಣ
Follow us
| Updated By: ಮದನ್​ ಕುಮಾರ್​

Updated on: Nov 21, 2021 | 1:40 PM

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಕೇವಲ ದಕ್ಷಿಣ ಭಾರತಕ್ಕೆ ಸೀಮಿತವಾಗಿ ಉಳಿದಿಲ್ಲ. ಬಾಲಿವುಡ್​ ಸಿನಿಮಾಗಳಲ್ಲೂ ಅವರಿಗೆ ಬೇಡಿಕೆ ಹೆಚ್ಚಿದೆ. ಈಗಾಗಲೇ ಅಮಿತಾಭ್​ ಬಚ್ಚನ್​, ಸಿದ್ದಾರ್ಥ್​ ಮಲ್ಹೋತ್ರಾ ಮುಂತಾದ ಸ್ಟಾರ್​ ಕಲಾವಿದರ ಜೊತೆ ನಟಿಸುವ ಅವಕಾಶ ರಶ್ಮಿಕಾಗೆ ಸಿಕ್ಕಿದೆ. ಅಮಿತಾಭ್ ಜೊತೆ ‘ಗುಡ್​ ಬೈ’ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ (Mission Majnu) ಸಿನಿಮಾದಲ್ಲಿ ಅವರು ತೆರೆಹಂಚಿಕೊಂಡಿದ್ದಾರೆ. ಈ ಸಿನಿಮಾಗಳ ಬಿಡುಗಡೆಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ. ಅಷ್ಟರಲ್ಲಾಗಲೇ ಬಾಲಿವುಡ್​ನಲ್ಲಿ ರಶ್ಮಿಕಾ 3ನೇ ಸಿನಿಮಾ ಒಪ್ಪಿಕೊಂಡಿರುವ ಸಾಧ್ಯತೆ ದಟ್ಟವಾಗಿದೆ. ಈಗ ಅವರು ಖ್ಯಾತ ನಿರ್ದೇಶಕ ಆನಂದ್​ ಎಲ್​. ರಾಯ್​ (Anand L Rai) ಅವರ ಕಚೇರಿ ಎದುರು ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. ಎಲ್ಲೆಲ್ಲೂ ಅವರ ಫೋಟೋಗಳು ವೈರಲ್​ ಆಗುತ್ತಿವೆ.

ಹಿಂದಿ ಚಿತ್ರರಂಗದಲ್ಲಿ ವಿಶೇಷ ರೀತಿಯ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡವರು ನಿರ್ದೇಶಕ ಆನಂದ್​ ಎಲ್​. ರಾಯ್​. ಅವರು ನಿರ್ದೇಶಿಸಿದ ‘ತನು ವೆಡ್ಸ್​ ಮನು’ ಚಿತ್ರವನ್ನು ಪ್ರೇಕ್ಷಕರು ಸಖತ್​ ಮೆಚ್ಚಿಕೊಂಡಿದ್ದರು. ಸದ್ಯ ಅವರು ಅಕ್ಷಯ್​ ಕುಮಾರ್​ ಜೊತೆ ಎರಡು ಸಿನಿಮಾ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಮತ್ತು ‘ಅತರಂಗಿ ರೇ’ ಚಿತ್ರಕ್ಕೆ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ. ಅಂಥ ಪ್ರತಿಭಾನ್ವಿತ ನಿರ್ದೇಶಕನ ಕಚೇರಿ ಎಂದು ರಶ್ಮಿಕಾ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಆನಂದ್​ ಎಲ್​. ರಾಯ್​ ಜೊತೆ ರಶ್ಮಿಕಾ ಹೊಸ ಸಿನಿಮಾದ ಕಥೆ ಕೇಳಲು ಬಂದಿರಬಹುದು ಅಥವಾ ಈಗಾಗಲೇ ಅವರು ಚಿತ್ರಕ್ಕೆ ಸಹಿ ಹಾಕಿರಬಹುದು ಎಂದು ಊಹಿಸಲಾಗುತ್ತಿದೆ. ಹಾಗಾಗಿ ಅವರ ಮೂರನೇ ಬಾಲಿವುಡ್​ ಸಿನಿಮಾಗೆ ಆನಂದ್​ ಎಲ್​. ರಾಯ್​ ನಿರ್ದೇಶನ ಮಾಡುತ್ತಾರೆ ಎಂಬ ಗುಮಾನಿ ಮೂಡಿದೆ. ಆದರೆ ಈ ಬಗ್ಗೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಹಲವು ಹಿಂದಿ ಸಿನಿಮಾ ಆಫರ್​ಗಳು ರಶ್ಮಿಕಾ ಅವರನ್ನು ಹುಡುಕಿಕೊಂಡು ಬರುತ್ತಿವೆ. ಆ ಸಿನಿಮಾದ ಮಾತುಕತೆ ಮತ್ತು ಕೆಲಸಗಳಿಗಾಗಿ ಪದೇಪದೇ ಅವರು ಮುಂಬೈಗೆ ತೆರಳಬೇಕಾಗಿದೆ. ಹಾಗಾಗಿ ಅವರು ಮುಂಬೈನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಅಲ್ಲದೇ ಗೋವಾದಲ್ಲೂ ಒಂದು ಐಷಾರಾಮಿ ಬಂಗಲೆ ಹೊಂದಿದ್ದಾರೆ. ಸಿನಿಮಾ ಮಾತ್ರವಲ್ಲದೇ ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿರುವ ಅವರು ಜಾಹೀರಾತುಗಳಿಂದಲೂ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ.

ಸದ್ಯ ರಶ್ಮಿಕಾ ಮಂದಣ್ಣ ಗಮನವೆಲ್ಲ ‘ಪುಷ್ಪ’ ಸಿನಿಮಾದ ಮೇಲಿದೆ. ಡಿ.17ರಂದು ಆ ಚಿತ್ರ ಬಿಡುಗಡೆ ಆಗಲಿದ್ದು, ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಜೋಡಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ:

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?

‘ರಶ್ಮಿಕಾ ಊಟ’ ಮಾರಾಟಕ್ಕಿದೆ; ಇದನ್ನು ತಿನ್ನೋದು ಹೇಗೆ? ವಿಡಿಯೋ ಸಮೇತ ವಿವರಿಸಿದ ನಟಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ