Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ದೇಶಕನ ಕಚೇರಿ ಮುಂದೆ ಕಾಣಿಸಿಕೊಂಡ ರಶ್ಮಿಕಾ; ಬಾಲಿವುಡ್​ನಲ್ಲಿ 3ನೇ ಚಿತ್ರ ಯಾರ ಜೊತೆ?

Rashmika Mandanna: ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಮತ್ತು ‘ಅತರಂಗಿ ರೇ’ ಚಿತ್ರಕ್ಕೆ ಆನಂದ್​ ಎಲ್​. ರಾಯ್​ ನಿರ್ದೇಶನ ಮಾಡುತ್ತಿದ್ದಾರೆ. ಅಂಥ ಪ್ರತಿಭಾನ್ವಿತ ನಿರ್ದೇಶಕನ ಕಚೇರಿ ಎದುರು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಖ್ಯಾತ ನಿರ್ದೇಶಕನ ಕಚೇರಿ ಮುಂದೆ ಕಾಣಿಸಿಕೊಂಡ ರಶ್ಮಿಕಾ; ಬಾಲಿವುಡ್​ನಲ್ಲಿ 3ನೇ ಚಿತ್ರ ಯಾರ ಜೊತೆ?
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Nov 21, 2021 | 1:40 PM

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಕೇವಲ ದಕ್ಷಿಣ ಭಾರತಕ್ಕೆ ಸೀಮಿತವಾಗಿ ಉಳಿದಿಲ್ಲ. ಬಾಲಿವುಡ್​ ಸಿನಿಮಾಗಳಲ್ಲೂ ಅವರಿಗೆ ಬೇಡಿಕೆ ಹೆಚ್ಚಿದೆ. ಈಗಾಗಲೇ ಅಮಿತಾಭ್​ ಬಚ್ಚನ್​, ಸಿದ್ದಾರ್ಥ್​ ಮಲ್ಹೋತ್ರಾ ಮುಂತಾದ ಸ್ಟಾರ್​ ಕಲಾವಿದರ ಜೊತೆ ನಟಿಸುವ ಅವಕಾಶ ರಶ್ಮಿಕಾಗೆ ಸಿಕ್ಕಿದೆ. ಅಮಿತಾಭ್ ಜೊತೆ ‘ಗುಡ್​ ಬೈ’ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ (Mission Majnu) ಸಿನಿಮಾದಲ್ಲಿ ಅವರು ತೆರೆಹಂಚಿಕೊಂಡಿದ್ದಾರೆ. ಈ ಸಿನಿಮಾಗಳ ಬಿಡುಗಡೆಗಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ. ಅಷ್ಟರಲ್ಲಾಗಲೇ ಬಾಲಿವುಡ್​ನಲ್ಲಿ ರಶ್ಮಿಕಾ 3ನೇ ಸಿನಿಮಾ ಒಪ್ಪಿಕೊಂಡಿರುವ ಸಾಧ್ಯತೆ ದಟ್ಟವಾಗಿದೆ. ಈಗ ಅವರು ಖ್ಯಾತ ನಿರ್ದೇಶಕ ಆನಂದ್​ ಎಲ್​. ರಾಯ್​ (Anand L Rai) ಅವರ ಕಚೇರಿ ಎದುರು ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ. ಎಲ್ಲೆಲ್ಲೂ ಅವರ ಫೋಟೋಗಳು ವೈರಲ್​ ಆಗುತ್ತಿವೆ.

ಹಿಂದಿ ಚಿತ್ರರಂಗದಲ್ಲಿ ವಿಶೇಷ ರೀತಿಯ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡವರು ನಿರ್ದೇಶಕ ಆನಂದ್​ ಎಲ್​. ರಾಯ್​. ಅವರು ನಿರ್ದೇಶಿಸಿದ ‘ತನು ವೆಡ್ಸ್​ ಮನು’ ಚಿತ್ರವನ್ನು ಪ್ರೇಕ್ಷಕರು ಸಖತ್​ ಮೆಚ್ಚಿಕೊಂಡಿದ್ದರು. ಸದ್ಯ ಅವರು ಅಕ್ಷಯ್​ ಕುಮಾರ್​ ಜೊತೆ ಎರಡು ಸಿನಿಮಾ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಮತ್ತು ‘ಅತರಂಗಿ ರೇ’ ಚಿತ್ರಕ್ಕೆ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ. ಅಂಥ ಪ್ರತಿಭಾನ್ವಿತ ನಿರ್ದೇಶಕನ ಕಚೇರಿ ಎಂದು ರಶ್ಮಿಕಾ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಆನಂದ್​ ಎಲ್​. ರಾಯ್​ ಜೊತೆ ರಶ್ಮಿಕಾ ಹೊಸ ಸಿನಿಮಾದ ಕಥೆ ಕೇಳಲು ಬಂದಿರಬಹುದು ಅಥವಾ ಈಗಾಗಲೇ ಅವರು ಚಿತ್ರಕ್ಕೆ ಸಹಿ ಹಾಕಿರಬಹುದು ಎಂದು ಊಹಿಸಲಾಗುತ್ತಿದೆ. ಹಾಗಾಗಿ ಅವರ ಮೂರನೇ ಬಾಲಿವುಡ್​ ಸಿನಿಮಾಗೆ ಆನಂದ್​ ಎಲ್​. ರಾಯ್​ ನಿರ್ದೇಶನ ಮಾಡುತ್ತಾರೆ ಎಂಬ ಗುಮಾನಿ ಮೂಡಿದೆ. ಆದರೆ ಈ ಬಗ್ಗೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಹಲವು ಹಿಂದಿ ಸಿನಿಮಾ ಆಫರ್​ಗಳು ರಶ್ಮಿಕಾ ಅವರನ್ನು ಹುಡುಕಿಕೊಂಡು ಬರುತ್ತಿವೆ. ಆ ಸಿನಿಮಾದ ಮಾತುಕತೆ ಮತ್ತು ಕೆಲಸಗಳಿಗಾಗಿ ಪದೇಪದೇ ಅವರು ಮುಂಬೈಗೆ ತೆರಳಬೇಕಾಗಿದೆ. ಹಾಗಾಗಿ ಅವರು ಮುಂಬೈನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಅಲ್ಲದೇ ಗೋವಾದಲ್ಲೂ ಒಂದು ಐಷಾರಾಮಿ ಬಂಗಲೆ ಹೊಂದಿದ್ದಾರೆ. ಸಿನಿಮಾ ಮಾತ್ರವಲ್ಲದೇ ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿರುವ ಅವರು ಜಾಹೀರಾತುಗಳಿಂದಲೂ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ.

ಸದ್ಯ ರಶ್ಮಿಕಾ ಮಂದಣ್ಣ ಗಮನವೆಲ್ಲ ‘ಪುಷ್ಪ’ ಸಿನಿಮಾದ ಮೇಲಿದೆ. ಡಿ.17ರಂದು ಆ ಚಿತ್ರ ಬಿಡುಗಡೆ ಆಗಲಿದ್ದು, ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಜೋಡಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ:

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?

‘ರಶ್ಮಿಕಾ ಊಟ’ ಮಾರಾಟಕ್ಕಿದೆ; ಇದನ್ನು ತಿನ್ನೋದು ಹೇಗೆ? ವಿಡಿಯೋ ಸಮೇತ ವಿವರಿಸಿದ ನಟಿ

ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ