AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Majnu: ‘ಮಿಷನ್​ ಮಜ್ನು’ ಟ್ರೇಲರ್​: ಸಿದ್ದಾರ್ಥ್​ ಮಲ್ಹೋತ್ರ ಪಾತ್ರ ನೋಡಿದವರಿಗೆ ನೆನಪಾಯ್ತು ‘ರಾಜಿ’ ಸಿನಿಮಾ

Mission Majnu Trailer: ‘ರಾಜಿ’ ಸಿನಿಮಾ ತುಂಬ ಕ್ಲಾಸ್​ ಆಗಿ ಮೂಡಿಬಂದಿತ್ತು. ಆದರೆ ‘ಮಿಷನ್​ ಮಜ್ನು’ ಸಖತ್​ ಮಾಸ್​ ಆಗಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ.

Mission Majnu: ‘ಮಿಷನ್​ ಮಜ್ನು’ ಟ್ರೇಲರ್​: ಸಿದ್ದಾರ್ಥ್​ ಮಲ್ಹೋತ್ರ ಪಾತ್ರ ನೋಡಿದವರಿಗೆ ನೆನಪಾಯ್ತು ‘ರಾಜಿ’ ಸಿನಿಮಾ
ಸಿದ್ದಾರ್ಥ್ ಮಲ್ಹೋತ್ರ
TV9 Web
| Edited By: |

Updated on:Jan 09, 2023 | 6:52 PM

Share

ಬಾಲಿವುಡ್​ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಮಿಷನ್​ ಮಜ್ನು’ (Mission Majnu) ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ಹೀರೋ ಆಗಿ ಸಿದ್ದಾರ್ಥ್ ಮಲ್ಹೋತ್ರ (Sidharth Malhotra) ನಟಿಸಿದ್ದರೆ, ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಿಷನ್​ ಮಜ್ನು’ ಚಿತ್ರವು ಥಿಯೇಟರ್​ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಸದ್ಯಕ್ಕೆ ಬಾಲಿವುಡ್​ ಸಿನಿಮಾಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಆಗುತ್ತಿಲ್ಲವಾದ್ದರಿಂದ ಒಟಿಟಿಯಲ್ಲಿ ರಿಲೀಸ್​ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಜನವರಿ 20ರಂದು ನೆಟ್​ಫ್ಲಿಕ್ಸ್​ (Netflix) ಮೂಲಕ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್​ ಆಗಲಿದೆ. ಅಚ್ಚರಿ ಎಂದರೆ ಈ ಚಿತ್ರದ ಟ್ರೇಲರ್​ ನೋಡಿದವರಿಗೆ ಆಲಿಯಾ ಭಟ್​ ನಟನೆಯ ‘ರಾಜಿ’ ಸಿನಿಮಾ ನೆನಪಾಗುತ್ತಿದೆ.

‘ರಾಜಿ’ ಮತ್ತು ‘ಮಿಷನ್​ ಮಜ್ನು’ ಚಿತ್ರಗಳ ನಡುವೆ ಒಂದು ಸಾಮ್ಯತೆ ಇದೆ. ಈ ಎರಡೂ ಚಿತ್ರಗಳ ಕಥೆಯಲ್ಲಿ ಹೋಲಿಕೆ ಇದೆ. ಭಾರತದ ವಿರುದ್ಧ ಪಾಕಿಸ್ತಾನ ನಡೆಸುವ ಸಂಚನ್ನು ತಿಳಿಯಲು ಹೀರೋ ಪಾಕಿಸ್ತಾನಕ್ಕೆ ಹೋಗಿ ಅಲ್ಲಿನ ಪ್ರಜೆಯಂತೆ ಬದುಕುತ್ತಾನೆ. ಅಲ್ಲಿನ ಯುವತಿಯನ್ನೇ ಮದುವೆ ಆಗುತ್ತಾನೆ. ಇದು ‘ಮಿಷನ್​ ಮಜ್ನು’ ಚಿತ್ರದ ಕಥೆ. ‘ರಾಜಿ’ ಸಿನಿಮಾದ ಕಥೆ ಕೂಡ ಇದೇ ರೀತಿ ಇತ್ತು. ಭಾರತದ ಯುವತಿಯೊಬ್ಬಳು ಪಾಕಿಸ್ತಾನದ ಸೈನ್ಯಾಧಿಕಾರಿಯೊಬ್ಬನನ್ನು ಮದುವೆಯಾಗಿ ಹೋಗಿ, ಅಲ್ಲಿ ಭಾರತದ ಪರವಾಗಿ ಏಜೆಂಟ್​ ಆಗಿ ಕೆಲಸ ಮಾಡುತ್ತಾಳೆ. ಹಾಗಾಗಿ ಪ್ರೇಕ್ಷಕರಿಗೆ ‘ಮಿಷನ್​ ಮಜ್ನು’ ಟ್ರೇಲರ್​ ನೋಡಿದಾಗ ‘ರಾಜಿ’ ಚಿತ್ರ ನೆನಪಾಗಿದೆ.

ಇದನ್ನೂ ಓದಿ: ಸಿದ್ದಾರ್ಥ್​ ಮಲ್ಹೋತ್ರಾ- ಕಿಯಾರಾ ಅಡ್ವಾಣಿ ಪ್ರೇಮಕ್ಕೆ ಸಿಕ್ತು ಮತ್ತೊಂದು ಸಾಕ್ಷ್ಯ

ಇದನ್ನೂ ಓದಿ
Image
ಕಿಯಾರಾ ಜತೆಗಿನ ಬ್ರೇಕಪ್​ ವದಂತಿಗೆ ತುಪ್ಪ ಸುರಿದ ಸಿದ್ದಾರ್ಥ್​ ಮಲ್ಹೋತ್ರಾ; ಫ್ಯಾನ್ಸ್​ ಊಹಿಸಿದ್ದೇನು?
Image
ಬಾಲಿವುಡ್​ನಲ್ಲಿ ಮತ್ತೊಂದು ಬ್ರೇಕಪ್​; ಸಿದ್ದಾರ್ಥ್​-ಕಿಯಾರಾ ಪ್ರೇಮ್​ ಕಹಾನಿಗೆ ಸ್ಯಾಡ್ ಎಂಡಿಂಗ್
Image
ಸಿದ್ದಾರ್ಥ್​ ಮಲ್ಹೋತ್ರಾ- ಕಿಯಾರಾ ಅಡ್ವಾಣಿ ಪ್ರೇಮಕ್ಕೆ ಸಿಕ್ತು ಮತ್ತೊಂದು ಸಾಕ್ಷ್ಯ
Image
Kiara Advani: ‘ಕಿಯಾರಾ ಜೊತೆ ಬಲವಂತವಾಗಿ ಕಿಸ್​ ಮಾಡಬೇಕಾಯ್ತು’: ಎಲ್ಲವನ್ನೂ ಒಪ್ಪಿಕೊಂಡ ಶೇರ್​ಷಾ ಹೀರೋ ಸಿದ್ದಾರ್ಥ್​

‘ರಾಜಿ’ ಸಿನಿಮಾ ತುಂಬ ಕ್ಲಾಸ್​ ಆಗಿ ಮೂಡಿಬಂದಿತ್ತು. ಆದರೆ ‘ಮಿಷನ್​ ಮಜ್ನು’ ಸಖತ್​ ಮಾಸ್​ ಆಗಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಈ ಚಿತ್ರದಲ್ಲಿ ಭರ್ಜರಿ ಸಾಹಸ ದೃಶ್ಯಗಳ ಕೂಡ ಇರಲಿವೆ. ಶಾಂತನು ಭಾಗ್ಚಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಜನರಿಂದ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಕಿಯಾರಾ ಜತೆಗಿನ ಬ್ರೇಕಪ್​ ವದಂತಿಗೆ ತುಪ್ಪ ಸುರಿದ ಸಿದ್ದಾರ್ಥ್​ ಮಲ್ಹೋತ್ರಾ; ಫ್ಯಾನ್ಸ್​ ಊಹಿಸಿದ್ದೇನು?

ಈ ಹಿಂದೆ ಸಿದ್ದಾರ್ಥ್​ ಮಲ್ಹೋತ್ರ ನಟಿಸಿದ್ದ ‘ಶೇರ್ಷಾ’ ಸಿನಿಮಾ ಕೂಡ ನೈಜ ಘಟನೆಗಳನ್ನು ಆಧರಿಸಿ ದೇಶಭಕ್ತಿ ಚಿತ್ರವಾಗಿತ್ತು. ಅದು ಸಹ ಒಟಿಟಿಯಲ್ಲಿ ರಿಲೀಸ್​ ಆಗಿ ಜನಮೆಚ್ಚುಗೆ ಗಳಿಸಿತ್ತು. ಈಗ ಅವರು ಅದೇ ರೀತಿ ಮತ್ತೊಂದು ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ಗುಡ್​ಬೈ’ ಚಿತ್ರ ಕಳೆದ ವರ್ಷ ರಿಲೀಸ್​ ಆಗಿ ಸೋಲು ಕಂಡಿತು. ಹಾಗಾಗಿ ಅವರಿಗೆ ‘ಮಿಷನ್​ ಮಜ್ನು’ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ರಶ್ಮಿಕಾ ಮಂದಣ್ಣ ಮತ್ತು ಸಿದ್ದಾರ್ಥ್​ ಮಲ್ಹೋತ್ರ ಅವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:52 pm, Mon, 9 January 23

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?