AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Majnu: ‘ಮಿಷನ್​ ಮಜ್ನು’ ಟ್ರೇಲರ್​: ಸಿದ್ದಾರ್ಥ್​ ಮಲ್ಹೋತ್ರ ಪಾತ್ರ ನೋಡಿದವರಿಗೆ ನೆನಪಾಯ್ತು ‘ರಾಜಿ’ ಸಿನಿಮಾ

Mission Majnu Trailer: ‘ರಾಜಿ’ ಸಿನಿಮಾ ತುಂಬ ಕ್ಲಾಸ್​ ಆಗಿ ಮೂಡಿಬಂದಿತ್ತು. ಆದರೆ ‘ಮಿಷನ್​ ಮಜ್ನು’ ಸಖತ್​ ಮಾಸ್​ ಆಗಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ.

Mission Majnu: ‘ಮಿಷನ್​ ಮಜ್ನು’ ಟ್ರೇಲರ್​: ಸಿದ್ದಾರ್ಥ್​ ಮಲ್ಹೋತ್ರ ಪಾತ್ರ ನೋಡಿದವರಿಗೆ ನೆನಪಾಯ್ತು ‘ರಾಜಿ’ ಸಿನಿಮಾ
ಸಿದ್ದಾರ್ಥ್ ಮಲ್ಹೋತ್ರ
TV9 Web
| Edited By: |

Updated on:Jan 09, 2023 | 6:52 PM

Share

ಬಾಲಿವುಡ್​ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಮಿಷನ್​ ಮಜ್ನು’ (Mission Majnu) ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ಹೀರೋ ಆಗಿ ಸಿದ್ದಾರ್ಥ್ ಮಲ್ಹೋತ್ರ (Sidharth Malhotra) ನಟಿಸಿದ್ದರೆ, ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಿಷನ್​ ಮಜ್ನು’ ಚಿತ್ರವು ಥಿಯೇಟರ್​ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಸದ್ಯಕ್ಕೆ ಬಾಲಿವುಡ್​ ಸಿನಿಮಾಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಆಗುತ್ತಿಲ್ಲವಾದ್ದರಿಂದ ಒಟಿಟಿಯಲ್ಲಿ ರಿಲೀಸ್​ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಜನವರಿ 20ರಂದು ನೆಟ್​ಫ್ಲಿಕ್ಸ್​ (Netflix) ಮೂಲಕ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್​ ಆಗಲಿದೆ. ಅಚ್ಚರಿ ಎಂದರೆ ಈ ಚಿತ್ರದ ಟ್ರೇಲರ್​ ನೋಡಿದವರಿಗೆ ಆಲಿಯಾ ಭಟ್​ ನಟನೆಯ ‘ರಾಜಿ’ ಸಿನಿಮಾ ನೆನಪಾಗುತ್ತಿದೆ.

‘ರಾಜಿ’ ಮತ್ತು ‘ಮಿಷನ್​ ಮಜ್ನು’ ಚಿತ್ರಗಳ ನಡುವೆ ಒಂದು ಸಾಮ್ಯತೆ ಇದೆ. ಈ ಎರಡೂ ಚಿತ್ರಗಳ ಕಥೆಯಲ್ಲಿ ಹೋಲಿಕೆ ಇದೆ. ಭಾರತದ ವಿರುದ್ಧ ಪಾಕಿಸ್ತಾನ ನಡೆಸುವ ಸಂಚನ್ನು ತಿಳಿಯಲು ಹೀರೋ ಪಾಕಿಸ್ತಾನಕ್ಕೆ ಹೋಗಿ ಅಲ್ಲಿನ ಪ್ರಜೆಯಂತೆ ಬದುಕುತ್ತಾನೆ. ಅಲ್ಲಿನ ಯುವತಿಯನ್ನೇ ಮದುವೆ ಆಗುತ್ತಾನೆ. ಇದು ‘ಮಿಷನ್​ ಮಜ್ನು’ ಚಿತ್ರದ ಕಥೆ. ‘ರಾಜಿ’ ಸಿನಿಮಾದ ಕಥೆ ಕೂಡ ಇದೇ ರೀತಿ ಇತ್ತು. ಭಾರತದ ಯುವತಿಯೊಬ್ಬಳು ಪಾಕಿಸ್ತಾನದ ಸೈನ್ಯಾಧಿಕಾರಿಯೊಬ್ಬನನ್ನು ಮದುವೆಯಾಗಿ ಹೋಗಿ, ಅಲ್ಲಿ ಭಾರತದ ಪರವಾಗಿ ಏಜೆಂಟ್​ ಆಗಿ ಕೆಲಸ ಮಾಡುತ್ತಾಳೆ. ಹಾಗಾಗಿ ಪ್ರೇಕ್ಷಕರಿಗೆ ‘ಮಿಷನ್​ ಮಜ್ನು’ ಟ್ರೇಲರ್​ ನೋಡಿದಾಗ ‘ರಾಜಿ’ ಚಿತ್ರ ನೆನಪಾಗಿದೆ.

ಇದನ್ನೂ ಓದಿ: ಸಿದ್ದಾರ್ಥ್​ ಮಲ್ಹೋತ್ರಾ- ಕಿಯಾರಾ ಅಡ್ವಾಣಿ ಪ್ರೇಮಕ್ಕೆ ಸಿಕ್ತು ಮತ್ತೊಂದು ಸಾಕ್ಷ್ಯ

ಇದನ್ನೂ ಓದಿ
Image
ಕಿಯಾರಾ ಜತೆಗಿನ ಬ್ರೇಕಪ್​ ವದಂತಿಗೆ ತುಪ್ಪ ಸುರಿದ ಸಿದ್ದಾರ್ಥ್​ ಮಲ್ಹೋತ್ರಾ; ಫ್ಯಾನ್ಸ್​ ಊಹಿಸಿದ್ದೇನು?
Image
ಬಾಲಿವುಡ್​ನಲ್ಲಿ ಮತ್ತೊಂದು ಬ್ರೇಕಪ್​; ಸಿದ್ದಾರ್ಥ್​-ಕಿಯಾರಾ ಪ್ರೇಮ್​ ಕಹಾನಿಗೆ ಸ್ಯಾಡ್ ಎಂಡಿಂಗ್
Image
ಸಿದ್ದಾರ್ಥ್​ ಮಲ್ಹೋತ್ರಾ- ಕಿಯಾರಾ ಅಡ್ವಾಣಿ ಪ್ರೇಮಕ್ಕೆ ಸಿಕ್ತು ಮತ್ತೊಂದು ಸಾಕ್ಷ್ಯ
Image
Kiara Advani: ‘ಕಿಯಾರಾ ಜೊತೆ ಬಲವಂತವಾಗಿ ಕಿಸ್​ ಮಾಡಬೇಕಾಯ್ತು’: ಎಲ್ಲವನ್ನೂ ಒಪ್ಪಿಕೊಂಡ ಶೇರ್​ಷಾ ಹೀರೋ ಸಿದ್ದಾರ್ಥ್​

‘ರಾಜಿ’ ಸಿನಿಮಾ ತುಂಬ ಕ್ಲಾಸ್​ ಆಗಿ ಮೂಡಿಬಂದಿತ್ತು. ಆದರೆ ‘ಮಿಷನ್​ ಮಜ್ನು’ ಸಖತ್​ ಮಾಸ್​ ಆಗಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಈ ಚಿತ್ರದಲ್ಲಿ ಭರ್ಜರಿ ಸಾಹಸ ದೃಶ್ಯಗಳ ಕೂಡ ಇರಲಿವೆ. ಶಾಂತನು ಭಾಗ್ಚಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಜನರಿಂದ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಕಿಯಾರಾ ಜತೆಗಿನ ಬ್ರೇಕಪ್​ ವದಂತಿಗೆ ತುಪ್ಪ ಸುರಿದ ಸಿದ್ದಾರ್ಥ್​ ಮಲ್ಹೋತ್ರಾ; ಫ್ಯಾನ್ಸ್​ ಊಹಿಸಿದ್ದೇನು?

ಈ ಹಿಂದೆ ಸಿದ್ದಾರ್ಥ್​ ಮಲ್ಹೋತ್ರ ನಟಿಸಿದ್ದ ‘ಶೇರ್ಷಾ’ ಸಿನಿಮಾ ಕೂಡ ನೈಜ ಘಟನೆಗಳನ್ನು ಆಧರಿಸಿ ದೇಶಭಕ್ತಿ ಚಿತ್ರವಾಗಿತ್ತು. ಅದು ಸಹ ಒಟಿಟಿಯಲ್ಲಿ ರಿಲೀಸ್​ ಆಗಿ ಜನಮೆಚ್ಚುಗೆ ಗಳಿಸಿತ್ತು. ಈಗ ಅವರು ಅದೇ ರೀತಿ ಮತ್ತೊಂದು ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ‘ಗುಡ್​ಬೈ’ ಚಿತ್ರ ಕಳೆದ ವರ್ಷ ರಿಲೀಸ್​ ಆಗಿ ಸೋಲು ಕಂಡಿತು. ಹಾಗಾಗಿ ಅವರಿಗೆ ‘ಮಿಷನ್​ ಮಜ್ನು’ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ರಶ್ಮಿಕಾ ಮಂದಣ್ಣ ಮತ್ತು ಸಿದ್ದಾರ್ಥ್​ ಮಲ್ಹೋತ್ರ ಅವರ ಕೆಮಿಸ್ಟ್ರಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:52 pm, Mon, 9 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್