AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mission Majnu: ಪ್ರೇಕ್ಷಕರಿಗೆ ಇಷ್ಟವಾಯ್ತು ‘ಮಿಷನ್​ ಮಜ್ನು’ ಸಿನಿಮಾ; ರಶ್ಮಿಕಾ ನಟನೆಗೂ ಮೆಚ್ಚುಗೆ

Mission Majnu Twitter Review: ‘ಮಿಷನ್​ ಮಜ್ನು’ ಚಿತ್ರದಲ್ಲಿ ದೇಶಭಕ್ತಿ ಕಥಾಹಂದರ ಇದೆ. ಗಣರಾಜ್ಯೋತ್ಸವಕ್ಕೆ ಕೆಲವೇ ದಿನ ಬಾಕಿ ಇರುವಾಗ ಈ ಸಿನಿಮಾ ರಿಲೀಸ್​ ಆಗಿದ್ದು ಪ್ಲಸ್​ ಪಾಯಿಂಟ್​ ಆಗಿದೆ.

Mission Majnu: ಪ್ರೇಕ್ಷಕರಿಗೆ ಇಷ್ಟವಾಯ್ತು ‘ಮಿಷನ್​ ಮಜ್ನು’ ಸಿನಿಮಾ; ರಶ್ಮಿಕಾ ನಟನೆಗೂ ಮೆಚ್ಚುಗೆ
ಮಿಷನ್ ಮಜ್ನು ಸಿನಿಮಾದಲ್ಲಿ ಸಿದ್ದಾರ್ಥ್ ಮಲ್ಹೋತ್ರ, ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Jan 20, 2023 | 4:06 PM

Share

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಿಷನ್​ ಮಜ್ನು’ ಸಿನಿಮಾ (Mission Majnu Movie) ಥಿಯೇಟರ್​ನಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಸಿನಿಮಾ ಒಟಿಟಿ ಹಾದಿ ಹಿಡಿಯಿತು. ಈ ಚಿತ್ರದಲ್ಲಿ ಸಿದ್ದಾರ್ಥ್​ ಮಲ್ಹೋತ್ರ (Sidharth Malhotra) ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ನೆಟ್​ಫ್ಲಿಕ್ಸ್​ನಲ್ಲಿ ಇಂದು (ಜ.20) ಬಹುನಿರೀಕ್ಷಿತ ‘ಮಿಷನ್​ ಮಜ್ನು’ ಸಿನಿಮಾ ರಿಲೀಸ್​ ಆಗಿದೆ. ಸ್ಪೈ-ಥ್ರಿಲ್ಲರ್​ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶಾಂತನು ಭಾಗ್ಚಿ ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ ನೋಡಿದ ಪ್ರೇಕ್ಷಕರು ಈ ಸಿನಿಮಾವನ್ನು ‘ರಾಜಿ’ ಚಿತ್ರಕ್ಕೆ ಹೋಲಿಸಿದ್ದರು. ಆದರೆ ಈಗ ಪೂರ್ತಿ ಸಿನಿಮಾ ನೋಡಿದ ಮೇಲೆ ಪ್ರೇಕ್ಷಕರ ಭಾವನೆ ಬದಲಾಗಿದೆ. ತಮ್ಮ ವಿಮರ್ಶೆ (Mission Majnu Review) ಏನು ಎಂಬುದನ್ನು ಟ್ವಿಟರ್​ ಮೂಲಕ ಜನರು ತಿಳಿಸುತ್ತಿದ್ದಾರೆ.

ನೈಜ ಘಟನೆಗಳನ್ನು ಆಧರಿಸಿ ‘ಮಿಷನ್​ ಮಜ್ನು’ ಚಿತ್ರ ಮೂಡಿಬಂದಿದೆ. ರೆಟ್ರೋ ಶೈಲಿಯ ಮೇಕಿಂಗ್​ ಈ ಸಿನಿಮಾದಲ್ಲಿದೆ. ಸಿದ್ದಾರ್ಥ್​ ಮಲ್ಹೋತ್ರ ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಅನೇಕರು ಇದನ್ನು ಮಾಸ್ಟರ್​ ಪೀಸ್​ ಎಂದು ಕರೆದಿದ್ದಾರೆ. ಅಷ್ಟರಮಟ್ಟಿಗೆ ಜನರಿಗೆ ಈ ಸಿನಿಮಾ ಇಷ್ಟ ಆಗಿದೆ. ಕೊನೆಯ ದೃಶ್ಯದವರೆಗೂ ಕೌತುಕಭರಿತವಾಗಿದೆ ಎಂದು ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ
Image
Mili Twitter Review: ಜಾನ್ವಿ ಕಪೂರ್​ ಅಭಿನಯಕ್ಕೆ ಕೇಳಿಬರ್ತಿದೆ ಮೆಚ್ಚುಗೆ; ‘ಮಿಲಿ’ ನೋಡಿ ವಿಮರ್ಶೆ ತಿಳಿಸಿದ ಸಿನಿಪ್ರಿಯರು
Image
Gandhada Gudi Twitter Review: ಹೇಗಿದೆ ‘ಗಂಧದ ಗುಡಿ’?; ಪ್ರೀಮಿಯರ್​ ಶೋ ಬಳಿಕ ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ ಫ್ಯಾನ್ಸ್​
Image
Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?
Image
Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..

ಕಳೆದ ವರ್ಷ ಬಾಲಿವುಡ್​ ಸಿನಿಮಾಗಳಿಗೆ ಥಿಯೇಟರ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಆಗಲಿಲ್ಲ. ಸಿದ್ದಾರ್ಥ್​ ಮಲ್ಹೋತ್ರ ನಟನೆಯ ‘ಥ್ಯಾಂಕ್​ ಗಾಡ್​’ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ‘ಗುಡ್​ ಬೈ’ ಚಿತ್ರ ಸೋತವು. ಅದರ ಪರಿಣಾಮವಾಗಿ ‘ಮಿಷನ್​ ಮಜ್ನು’ ಚಿತ್ರತಂಡದವರು ಥಿಯೇಟರ್​ ಸಹವಾಸ ಬೇಡ ಅಂತ ನೇರವಾಗಿ ಒಟಿಟಿಯಲ್ಲಿ ಈ ಸಿನಿಮಾವನ್ನು ರಿಲೀಸ್​ ಮಾಡಿದ್ದಾರೆ. ಒಂದು ವೇಳೆ ಚಿತ್ರಮಂದಿರದಲ್ಲಿ ರಿಲೀಸ್​ ಆಗಿದ್ದರೆ ಸುಲಭವಾಗಿ 100 ಕೋಟಿ ರೂಪಾಯಿ ಕಲೆಕ್ಷನ್​ ಆಗುತ್ತಿತ್ತು ಎಂದು ಕೂಡ ಪ್ರೇಕ್ಷಕರು ಹೇಳುತ್ತಿದ್ದಾರೆ.

‘ಮಿಷನ್​ ಮಜ್ನು’ ಚಿತ್ರದಲ್ಲಿ ದೇಶಭಕ್ತಿ ಕಥಾಹಂದರ ಇದೆ. ಗಣರಾಜ್ಯೋತ್ಸವಕ್ಕೆ ಕೆಲವೇ ದಿನ ಬಾಕಿ ಇರುವಾಗ ಈ ಸಿನಿಮಾ ರಿಲೀಸ್​ ಆಗಿದ್ದು ಪ್ಲಸ್​ ಪಾಯಿಂಟ್​ ಆಗಿದೆ. ‘ಈ ಚಿತ್ರದಿಂದ 2023ರಲ್ಲಿ ಬಾಲಿವುಡ್​ಗೆ ಉತ್ತಮ ಆರಂಭ ಆಗಿದೆ’ ಎಂದು ಕೆಲವರು ಟ್ವೀಟ್​ ಮಾಡಿದ್ದಾರೆ. ಎಲ್ಲ ಕಡೆಗಳಿಂದ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಇದನ್ನೂ ಓದಿ: Rashmika Mandanna: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಬಗ್ಗೆ ಅಪ್​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

ಈ ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂಧ ಹುಡುಗಿಯ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅವರ ನಟನೆಯನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಈ ಸಿನಿಮಾದ ಯಶಸ್ಸಿನಿಂದ ಬಾಲಿವುಡ್​ನಲ್ಲಿ ರಶ್ಮಿಕಾ ಅವರಿಗೆ ಇನ್ನಷ್ಟು ಒಳ್ಳೆಯ ಆಫರ್​ಗಳು ಸಿಗಲಿವೆ. ಈಗ ಅವರು ರಣಬೀರ್​ ಕಪೂರ್​ ನಟನೆಯ ‘ಅನಿಮಲ್’ ಚಿತ್ರಕ್ಕೆ ನಾಯಕಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್