AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mithun Chakraborty: ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Dadasaheb Phalke Award: 70ನೇ ರಾಷ್ಟ್ರೀಯ ಫಿಲ್ಮ್​ ಅವಾರ್ಡ್​ ಕಾರ್ಯಕ್ರಮ ಅಕ್ಟೋಬರ್ 8ರಂದು ನಡೆಯಲಿದೆ. ಈ ವೇಳೆ ಮಿಥುನ್ ಚಕ್ರವರ್ತಿಗೆ ಅವಾರ್ಡ್ ನೀಡಿ ಗೌರವಿಸೋ ಕೆಲಸ ಆಗಲಿದೆ.  ಸದ್ಯ ಬಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕರು ಮಿಥುನ್​ಗೆ ಅಭಿನಂದನೆ ಕೋರಿದ್ದಾರೆ.

Mithun Chakraborty: ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಮಿಥುನ್
ರಾಜೇಶ್ ದುಗ್ಗುಮನೆ
|

Updated on:Sep 30, 2024 | 11:12 AM

Share

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿದೆ. ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತ ಬಂದಿದೆ. 74ನೇ ವಯಸ್ಸಿಗೆ ಈ ಅವಾರ್ಡ್ ಪಡೆದ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ.

‘ಮಿಥುನ್ ಅವರು ಸಿನಿಮಾ ಜರ್ನಿ ನಿಜಕ್ಕೂ ಹಲವು ತಲೆಮಾರಿಗಳಿಗೆ ಸ್ಫೂರ್ತಿ. ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿ ಮಿಥುನ್ ಚಕ್ರವರ್ತಿಗೆ ಈ ಅವಾರ್ಡ್ ನೀಡಲು ನಿರ್ಧರಿಸಿದೆ. ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ ಈ ಅವಾರ್ಡ್ ನೀಡಲಾಗುತ್ತಿದೆ’ ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.

70ನೇ ರಾಷ್ಟ್ರೀಯ ಫಿಲ್ಮ್​ ಅವಾರ್ಡ್​ ಕಾರ್ಯಕ್ರಮ ಅಕ್ಟೋಬರ್ 8ರಂದು ನಡೆಯಲಿದೆ. ಈ ವೇಳೆ ಮಿಥುನ್ ಚಕ್ರವರ್ತಿಗೆ ಅವಾರ್ಡ್ ನೀಡಿ ಗೌರವಿಸೋ ಕೆಲಸ ಆಗಲಿದೆ.  ಸದ್ಯ ಬಾಲಿವುಡ್ ಸೇರಿದಂತೆ ಚಿತ್ರರಂಗದ ಅನೇಕರು ಮಿಥುನ್​ಗೆ ಅಭಿನಂದನೆ ಕೋರಿದ್ದಾರೆ.

ಇದನ್ನೂ ಓದಿ: ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ; ಪರೀಕ್ಷೆ ಮಾಡಿ ಶೀಘ್ರವೇ ಡಿಸ್ಚಾರ್ಜ್​

ಮಿಥುನ್ ಚಕ್ರವರ್ತಿ ಜನಿಸಿದ್ದು 1950ರಲ್ಲಿ. ಮಿಥುನ್ ಚಕ್ರವರ್ತಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 1976ರಲ್ಲಿ. ಅಂದರೆ 26ನೇ ವಯಸ್ಸಿಗೆ ಅವರು ಹೀರೋ ಆದರು. ‘ಮೃಗಯಾ’ ಅವರ ನಟನೆಯ ಮೊದಲ ಸಿನಿಮಾ. ಅವರಿಗೆ ಮೊದಲ ಸಿನಿಮಾದ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ‘ಸುರಕ್ಷಾ’, ‘ಡಿಸ್ಕೋ ಡ್ಯಾನ್ಸರ್’, ‘ಡ್ಯಾನ್ಸ್ ಡ್ಯಾನ್ಸ್’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಹಿಂದಿ ಹಾಗೂ ಬೆಂಗಾಲಿ ಭಾಷೆಯಲ್ಲಿ ಹೆಚ್ಚು ಕಾಣಿಸಿಕೊಂಡಿದ್ದಾರೆ. 2018ರಲ್ಲಿ ಕನ್ನಡದ ‘ದಿ ವಿಲನ್’ ಸಿನಿಮಾದಲ್ಲಿ ಅವರು ನಟಿಸಿದ್ದರು. ಅವರು ಅನೇಕ ರಿಯಾಲಿಟಿ ಶೋಗೆ ಹೋಸ್ಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:56 am, Mon, 30 September 24

Follow Us
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ?
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ