AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗ್ರ ಸಿಕ್ಕಿದ್ದ, ಕುರಾನ್ ಓದಿಲ್ಲ ಎಂದಿದ್ದಕ್ಕೆ ಕಿರುಕುಳ ನೀಡಿದ್ದ’; ನಟಿಯಿಂದ ಶಾಕಿಂಗ್ ವಿಚಾರ ರಿವೀಲ್

ಏಪ್ರಿಲ್ 22ರ ಜಮ್ಮು-ಕಾಶ್ಮೀರ ಉಗ್ರ ದಾಳಿಯ ನಂತರ, ಮಾಡೆಲ್ ಏಕ್ತಾ ತಿವಾರಿ ಅವರು ತಮ್ಮ ಆಘಾತಕಾರಿ ಅನುಭವವನ್ನು ಬಹಿರಂಗಪಡಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಉಗ್ರನನ್ನು ಭೇಟಿಯಾದ ಅವರು, ಧಾರ್ಮಿಕ ಪ್ರಶ್ನೆಗಳನ್ನು ಎದುರಿಸಿದ್ದು, ಕುರಾನ್ ಓದದಿರುವುದಕ್ಕೆ ಕಿರುಕುಳ ಅನುಭವಿಸಿದ್ದಾರೆ. ಈ ಘಟನೆಯಿಂದ ತಪ್ಪಿಸಿಕೊಂಡು ಬದುಕುಳಿದ ಅವರ ಅನುಭವ ಭಯಾನಕವಾಗಿದೆ.

‘ಉಗ್ರ ಸಿಕ್ಕಿದ್ದ, ಕುರಾನ್ ಓದಿಲ್ಲ ಎಂದಿದ್ದಕ್ಕೆ ಕಿರುಕುಳ ನೀಡಿದ್ದ’; ನಟಿಯಿಂದ ಶಾಕಿಂಗ್ ವಿಚಾರ ರಿವೀಲ್
ಏಕ್ತಾ ಕಪೂರ್
ರಾಜೇಶ್ ದುಗ್ಗುಮನೆ
|

Updated on:Apr 26, 2025 | 3:46 PM

Share

ಏಪ್ರಿಲ್ 22ರಂದು ಜಮ್ಮು-ಕಾಶ್ಮೀರಪಹಲ್ಗಾಮ್​ನಲ್ಲಿ (Pahalgam Attack) ಭೀಕರ ಉಗ್ರರ ದಾಳಿ ನಡೆಯಿತು ಈ ದಾಳಿ ವೇಳೆ 26 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡರು. ಈ ದಾಳಿ ಹಿಂದೆ ಇರುವವರ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ. ಈ ರೇಖಾ ಚಿತ್ರ ನೋಡಿದ ಬಳಿಕ ಮಾಡೆಲ್, ನಟಿ ಏಕ್ತಾ ತಿವಾರಿ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ. ತಾವು ಆ ಉಗ್ರನನ್ನು ನೋಡಿದ್ದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ಆತ ತನ್ನ ಜೊತೆ ತಪ್ಪಾಗಿ ನಡೆದುಕೊಂಡಿದ್ದ ಎಂಬುದನ್ನು ಏಕ್ತಾ ತಿವಾರಿ ವಿವರಿಸಿದ್ದಾರೆ.

ಮಾಧ್ಯಮಗಳ ಜೊತೆ ಏಕ್ತಾ ಮಾತನಾಡಿದ್ದಾರೆ. ‘ಏಪ್ರಿಲ್ 20ರಂದು ನಾವು ಪಹಲ್ಗಾಮ್​ಗೆ ತೆರಳಿದ್ದೆವು. ಅಧಿಕಾರಿಗಳು ಬಿಡುಗಡೆ ಮಾಡಿದ ರೇಖಾ ಚಿತ್ರ ನೋಡಿದ ಬಳಿಕ ನಾನು ಕೂಡ ಸಾವಿನ ಹತ್ತಿರ ಹೋಗಿ ಬಂದಿದ್ದೆ ಎಂಬುದು ಗೊತ್ತಾಯಿತು’ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಆ ದಿನ ಏನಾಗಿತ್ತು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ
Image
ಮದುವೆಯಲ್ಲಿ ಹಾಡೋಕೆ ಅರಿಜಿತ್ ಸಿಂಗ್ ಪಡೆಯೋ ಹಣ ಎಷ್ಟು?
Image
ನಟಿಯಾಗೋ ಪ್ಲ್ಯಾನ್ ಇರಲಿಲ್ಲ; ರಚಿತಾ ನಟಿ​ ಆಗಿರದಿದ್ದರೆ ಏನಾಗಿರುತ್ತಿದ್ದರು
Image
ಕಾರ್ತಿಕ್ ಖಾತೆಯಿಂದ ಫೋಟೋ ಕದ್ದು ಪೋಸ್ಟರ್ ಮಾಡಿದ ಕರಣ್ ಜೋಹರ್
Image
‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್

‘ನಾನು ಕಾಶ್ಮೀರದಲ್ಲಿ ಇದ್ದಾಗ ಕೆಲವರು ಬಂದು ಅಜ್ಮೇರ್ (ಮುಸ್ಲಿಮರ ಪವಿತ್ರ ಸ್ಥಳ)  ಬಗ್ಗೆ ಕೇಳಿದರು. ನಾನು ಅಲ್ಲಿಗೆ ಹೋಗಿಲ್ಲ ಎಂದೆ. ಆ ಬಳಿಕ ಅವರು ಅಮರನಾಥ ಯಾತ್ರೆ ಬಗ್ಗೆ ಕೇಳಿದರು. ಎಷ್ಟು ಜನ ಬಂದಿದ್ದೀರಿ ಎಂದು ಪ್ರಶ್ನೆ ಮಾಡಿದರು. ನಮ್ಮ ಧರ್ಮದ ಬಗ್ಗೆ ಕೇಳಿದರು. ನನಗೆ ಭಯ ಆಯಿತು. ನಾನು ನಿಜ ಹೇಳಿಲ್ಲ. ನನ್ನ ವೈಯಕ್ತಿಕ ಜೀವನದ ಬಗ್ಗೆಯೂ ಕೇಳಿದರು. ವಿವಾಹ ಆಗಿ ಎಷ್ಟು ಸಮಯ ಆಯಿತು ಎಂದು ಪ್ರಶ್ನೆ ಮಾಡಿದರು’ ಎಂದು ಏಕ್ತಾ ತಿವಾರಿ ವಿವರಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಕುರಾನ್ ಬಗ್ಗೆ ಕೂಡ ಪ್ರಶ್ನೆ ಮಾಡಿದ್ದರಂತೆ.

ಏಕ್ತಾ ತಿವಾರಿ ಅವರು ಏಪ್ರಿಲ್ 13ಕ್ಕೆ ವೈಷ್ಣೋ ದೇವಿ ದೇವಾಲಯಕ್ಕೆ ತೆರಳಿದ್ದರು. ಏಪ್ರಿಲ್ 20ರಂದು ಪಹಲ್ಗಾಮ್​ಗೆ ತೆರಳಿದ್ದರು.  ‘ನಮ್ಮನ್ನು ಅವರು ಬೈಸರನ್ ಕಣಿವೆಗೆ ಕರೆದುಕೊಂಡು ಹೋಗುತ್ತೇನೆ ಎಂದರು. ನಾವು ಹೋಗಿಲ್ಲ. ಈ ಕಾರಣಕ್ಕೆ ಅವರಿಗೆ ಸಿಟ್ಟು ಬಂತು ಮತ್ತು ನಮ್ಮ ಜೊತೆ ತಪ್ಪಾಗಿ ನಡೆದುಕೊಂಡರು. ಆ ಘಟನೆಯ ವಿಡಿಯೋ ಕೂಡ ಇದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರ: ರಾಜೌರಿಯಲ್ಲಿ ಪೊಲೀಸ್ ಗಸ್ತು ಪಡೆಯ ವಾಹನದ ಮೇಲೆ ಗ್ರೆನೇಡ್​ ದಾಳಿ

‘ನಾನು ರುದ್ರಾಕ್ಷಿ ಮಾಲೆ ಹಾಕಿಕೊಂಡಿದ್ದೇನೆ, ಕುರಾನ್ ಓದಲ್ಲ ಅನ್ನೋದು ಅವರಿಗೆ ಸಮಸ್ಯೆ ಆಗಿತ್ತು. ಹೀಗಾಗಿ, ನಮ್ಮ ಜೊತೆ ಅವರು ತಪ್ಪಾಗಿ ನಡೆದುಕೊಂಡರು. ಅವರ ಬಳಿ ಶೂ ಒಳಗೆ ಕೀ ಪ್ಯಾಡ್’ ಮೊಬೈಲ್ ಕೂಡ ಇತ್ತು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:23 pm, Sat, 26 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ