AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್​ಗೆ ಜಾಕ್ವೆಲಿನ್ ಅರ್ಜಿ

ತಮ್ಮ ವಿರುದ್ಧದ ಎಫ್​ಐಆರ್​ ರದ್ದು ಮಾಡಬೇಕು ಎಂದು ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ‘ಸುಕೇಶ್​ ಚಂದ್ರಶೇಖರ್​ ಮಾಡಿದ ಅಪರಾಧಗಳಿಗೆ ಜಾಕ್ವೆಲಿನ್​ ಫರ್ನಾಂಡಿಸ್​ ಸಹಾಯ ಮಾಡಿಲ್ಲ. ಹಾಗಾಗಿ ನಟಿಗೆ ಶಿಕ್ಷೆ ಆಗಬಾರದು’ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್​ಗೆ ಜಾಕ್ವೆಲಿನ್ ಅರ್ಜಿ
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
ಮದನ್​ ಕುಮಾರ್​
|

Updated on: Dec 19, 2023 | 11:10 AM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜೊತೆ ಸ್ನೇಹ ಬೆಳೆಸಿದ್ದರಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಸುಕೇಶ್​ ಮಾಡಿದ 200 ಕೋಟಿ ರೂ. ವಂಚನೆ ಕೇಸ್​ನಲ್ಲಿ ಜಾಕ್ವೆಲಿನ್​ (Jacqueline Fernandez) ಕೂಡ ಭಾಗಿ ಆಗಿದ್ದರು ಎಂಬ ಅನುಮಾನ ಇದೆ. ಇದರ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ಎಫ್​ಐಆರ್​ನಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಹೆಸರನ್ನು ಸೇರಿಸಿದೆ. ಆದರೆ ತಮ್ಮ ವಿರುದ್ಧದ ಎಫ್​ಐಆರ್​ ರದ್ದು ಮಾಡಬೇಕು ಎಂದು ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೆಹಲಿ ಹೈಕೋರ್ಟ್​ಗೆ (Delhi HC) ಅರ್ಜಿ ಸಲ್ಲಿಸಿದ್ದಾರೆ.

‘ಸುಕೇಶ್​ ಚಂದ್ರಶೇಖರ್​ ಮಾಡಿದ ಕುತಂತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್​ ಸಂತ್ರಸ್ಥೆ ಆಗಿದ್ದಾರೆ. ವಂಚನೆಯಿಂದ ಹಣ ಗಳಿಸುವಲ್ಲಿ ಸುಕೇಶ್​ ಮಾಡಿದ ಅಪರಾಧಗಳಿಗೆ ಜಾಕ್ವೆಲಿನ್​ ಫರ್ನಾಂಡಿಸ್​ ಸಹಾಯ ಮಾಡಿಲ್ಲ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್​ 3 ಮತ್ತು 4ರಲ್ಲಿ ಅವರಿಗೆ ಶಿಕ್ಷೆ ಆಗಬಾರದು’ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಶ್ರೀಲಂಕನ್​ ಸುಂದರಿ ಜಾಕ್ವೆಲಿನ್​ ಫರ್ನಾಂಡಿಸ್​ ಸೀರೆ ಫೋಟೋಶೂಟ್​ ಕಂಡು ಫ್ಯಾನ್ಸ್​ ಫಿದಾ

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸುಕೇಶ್​ ಚಂದ್ರಶೇಖರ್​ ಅರೆಸ್ಟ್​ ಆದ ಬಳಿಕ ಒಂದಷ್ಟು ಫೋಟೋಗಳು ಬಹಿರಂಗ ಆಗಿದ್ದವು. ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಬಹಳ ಆಪ್ತವಾಗಿ ಕ್ಲಿಕ್ಕಿಸಿಕೊಂಡ ಫೋಟೋಗಳು ಲೀಕ್​ ಆದವು. ಆ ಬಳಿಕ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಸಂಕಷ್ಟ ಹೆಚ್ಚಾಯಿತು. ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.

ಇದನ್ನೂ ಓದಿ: ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಮಾತು ಕೂಡ ಕೇಳಿಬಂದಿದೆ. ಸದ್ಯ ಜೈಲಿನಲ್ಲಿರುವ ಸುಕೇಶ್​ ಚಂದ್ರಶೇಖರ್​, ಅಲ್ಲಿಂದಲೇ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಪತ್ರ ಬರೆಯುತ್ತಿದ್ದಾನೆ. ಈಗಾಗಲೇ ಅನೇಕ ಬಾರಿ ಆತ ಬರೆದ ಲವ್​ ಲೆಟರ್​ಗಳು ವೈರಲ್​ ಆಗಿವೆ. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ