200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್​ಗೆ ಜಾಕ್ವೆಲಿನ್ ಅರ್ಜಿ

ತಮ್ಮ ವಿರುದ್ಧದ ಎಫ್​ಐಆರ್​ ರದ್ದು ಮಾಡಬೇಕು ಎಂದು ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ‘ಸುಕೇಶ್​ ಚಂದ್ರಶೇಖರ್​ ಮಾಡಿದ ಅಪರಾಧಗಳಿಗೆ ಜಾಕ್ವೆಲಿನ್​ ಫರ್ನಾಂಡಿಸ್​ ಸಹಾಯ ಮಾಡಿಲ್ಲ. ಹಾಗಾಗಿ ನಟಿಗೆ ಶಿಕ್ಷೆ ಆಗಬಾರದು’ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್​ಗೆ ಜಾಕ್ವೆಲಿನ್ ಅರ್ಜಿ
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
Follow us
|

Updated on: Dec 19, 2023 | 11:10 AM

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜೊತೆ ಸ್ನೇಹ ಬೆಳೆಸಿದ್ದರಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಸುಕೇಶ್​ ಮಾಡಿದ 200 ಕೋಟಿ ರೂ. ವಂಚನೆ ಕೇಸ್​ನಲ್ಲಿ ಜಾಕ್ವೆಲಿನ್​ (Jacqueline Fernandez) ಕೂಡ ಭಾಗಿ ಆಗಿದ್ದರು ಎಂಬ ಅನುಮಾನ ಇದೆ. ಇದರ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ಎಫ್​ಐಆರ್​ನಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಹೆಸರನ್ನು ಸೇರಿಸಿದೆ. ಆದರೆ ತಮ್ಮ ವಿರುದ್ಧದ ಎಫ್​ಐಆರ್​ ರದ್ದು ಮಾಡಬೇಕು ಎಂದು ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೆಹಲಿ ಹೈಕೋರ್ಟ್​ಗೆ (Delhi HC) ಅರ್ಜಿ ಸಲ್ಲಿಸಿದ್ದಾರೆ.

‘ಸುಕೇಶ್​ ಚಂದ್ರಶೇಖರ್​ ಮಾಡಿದ ಕುತಂತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್​ ಸಂತ್ರಸ್ಥೆ ಆಗಿದ್ದಾರೆ. ವಂಚನೆಯಿಂದ ಹಣ ಗಳಿಸುವಲ್ಲಿ ಸುಕೇಶ್​ ಮಾಡಿದ ಅಪರಾಧಗಳಿಗೆ ಜಾಕ್ವೆಲಿನ್​ ಫರ್ನಾಂಡಿಸ್​ ಸಹಾಯ ಮಾಡಿಲ್ಲ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್​ 3 ಮತ್ತು 4ರಲ್ಲಿ ಅವರಿಗೆ ಶಿಕ್ಷೆ ಆಗಬಾರದು’ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಶ್ರೀಲಂಕನ್​ ಸುಂದರಿ ಜಾಕ್ವೆಲಿನ್​ ಫರ್ನಾಂಡಿಸ್​ ಸೀರೆ ಫೋಟೋಶೂಟ್​ ಕಂಡು ಫ್ಯಾನ್ಸ್​ ಫಿದಾ

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸುಕೇಶ್​ ಚಂದ್ರಶೇಖರ್​ ಅರೆಸ್ಟ್​ ಆದ ಬಳಿಕ ಒಂದಷ್ಟು ಫೋಟೋಗಳು ಬಹಿರಂಗ ಆಗಿದ್ದವು. ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಬಹಳ ಆಪ್ತವಾಗಿ ಕ್ಲಿಕ್ಕಿಸಿಕೊಂಡ ಫೋಟೋಗಳು ಲೀಕ್​ ಆದವು. ಆ ಬಳಿಕ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಸಂಕಷ್ಟ ಹೆಚ್ಚಾಯಿತು. ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.

ಇದನ್ನೂ ಓದಿ: ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಮಾತು ಕೂಡ ಕೇಳಿಬಂದಿದೆ. ಸದ್ಯ ಜೈಲಿನಲ್ಲಿರುವ ಸುಕೇಶ್​ ಚಂದ್ರಶೇಖರ್​, ಅಲ್ಲಿಂದಲೇ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಪತ್ರ ಬರೆಯುತ್ತಿದ್ದಾನೆ. ಈಗಾಗಲೇ ಅನೇಕ ಬಾರಿ ಆತ ಬರೆದ ಲವ್​ ಲೆಟರ್​ಗಳು ವೈರಲ್​ ಆಗಿವೆ. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ