AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್​ಗೆ ಜಾಕ್ವೆಲಿನ್ ಅರ್ಜಿ

ತಮ್ಮ ವಿರುದ್ಧದ ಎಫ್​ಐಆರ್​ ರದ್ದು ಮಾಡಬೇಕು ಎಂದು ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ‘ಸುಕೇಶ್​ ಚಂದ್ರಶೇಖರ್​ ಮಾಡಿದ ಅಪರಾಧಗಳಿಗೆ ಜಾಕ್ವೆಲಿನ್​ ಫರ್ನಾಂಡಿಸ್​ ಸಹಾಯ ಮಾಡಿಲ್ಲ. ಹಾಗಾಗಿ ನಟಿಗೆ ಶಿಕ್ಷೆ ಆಗಬಾರದು’ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್​ಗೆ ಜಾಕ್ವೆಲಿನ್ ಅರ್ಜಿ
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
ಮದನ್​ ಕುಮಾರ್​
|

Updated on: Dec 19, 2023 | 11:10 AM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜೊತೆ ಸ್ನೇಹ ಬೆಳೆಸಿದ್ದರಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಸುಕೇಶ್​ ಮಾಡಿದ 200 ಕೋಟಿ ರೂ. ವಂಚನೆ ಕೇಸ್​ನಲ್ಲಿ ಜಾಕ್ವೆಲಿನ್​ (Jacqueline Fernandez) ಕೂಡ ಭಾಗಿ ಆಗಿದ್ದರು ಎಂಬ ಅನುಮಾನ ಇದೆ. ಇದರ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ಎಫ್​ಐಆರ್​ನಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಹೆಸರನ್ನು ಸೇರಿಸಿದೆ. ಆದರೆ ತಮ್ಮ ವಿರುದ್ಧದ ಎಫ್​ಐಆರ್​ ರದ್ದು ಮಾಡಬೇಕು ಎಂದು ಕೋರಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೆಹಲಿ ಹೈಕೋರ್ಟ್​ಗೆ (Delhi HC) ಅರ್ಜಿ ಸಲ್ಲಿಸಿದ್ದಾರೆ.

‘ಸುಕೇಶ್​ ಚಂದ್ರಶೇಖರ್​ ಮಾಡಿದ ಕುತಂತ್ರದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್​ ಸಂತ್ರಸ್ಥೆ ಆಗಿದ್ದಾರೆ. ವಂಚನೆಯಿಂದ ಹಣ ಗಳಿಸುವಲ್ಲಿ ಸುಕೇಶ್​ ಮಾಡಿದ ಅಪರಾಧಗಳಿಗೆ ಜಾಕ್ವೆಲಿನ್​ ಫರ್ನಾಂಡಿಸ್​ ಸಹಾಯ ಮಾಡಿಲ್ಲ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್​ 3 ಮತ್ತು 4ರಲ್ಲಿ ಅವರಿಗೆ ಶಿಕ್ಷೆ ಆಗಬಾರದು’ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಶ್ರೀಲಂಕನ್​ ಸುಂದರಿ ಜಾಕ್ವೆಲಿನ್​ ಫರ್ನಾಂಡಿಸ್​ ಸೀರೆ ಫೋಟೋಶೂಟ್​ ಕಂಡು ಫ್ಯಾನ್ಸ್​ ಫಿದಾ

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸುಕೇಶ್​ ಚಂದ್ರಶೇಖರ್​ ಅರೆಸ್ಟ್​ ಆದ ಬಳಿಕ ಒಂದಷ್ಟು ಫೋಟೋಗಳು ಬಹಿರಂಗ ಆಗಿದ್ದವು. ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಬಹಳ ಆಪ್ತವಾಗಿ ಕ್ಲಿಕ್ಕಿಸಿಕೊಂಡ ಫೋಟೋಗಳು ಲೀಕ್​ ಆದವು. ಆ ಬಳಿಕ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಸಂಕಷ್ಟ ಹೆಚ್ಚಾಯಿತು. ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು.

ಇದನ್ನೂ ಓದಿ: ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಪರಸ್ಪರ ಪ್ರೀತಿಸುತ್ತಿದ್ದರು ಎಂಬ ಮಾತು ಕೂಡ ಕೇಳಿಬಂದಿದೆ. ಸದ್ಯ ಜೈಲಿನಲ್ಲಿರುವ ಸುಕೇಶ್​ ಚಂದ್ರಶೇಖರ್​, ಅಲ್ಲಿಂದಲೇ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಪತ್ರ ಬರೆಯುತ್ತಿದ್ದಾನೆ. ಈಗಾಗಲೇ ಅನೇಕ ಬಾರಿ ಆತ ಬರೆದ ಲವ್​ ಲೆಟರ್​ಗಳು ವೈರಲ್​ ಆಗಿವೆ. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್