Kiara Advani: 2023ರಲ್ಲಿ ಅತಿ ಹೆಚ್ಚು ಸರ್ಚ್​ ಆದ ಸೆಲೆಬ್ರಿಟಿ: ನಟಿ ಕಿಯಾರಾ ಅಡ್ವಾಣಿಗೆ ಮೊದಲ ಸ್ಥಾನ

Most Googled Person of 2023: ಕಿಯಾರಾ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವ ಮಟ್ಟದಲ್ಲೂ ಅವರ ಹೆಸರು ಟಾಪ್​ನಲ್ಲಿದೆ. ಈ ವರ್ಷ ಹೆಚ್ಚು ಸರ್ಚ್​ಗೆ ಒಳಗಾದ ನಟಿಯರ ಸಾಲಿನಲ್ಲಿ ಕಿಯಾರಾ ಮೊದಲಿದ್ದಾರೆ. ಈ ಮೂಲಕ ಹಲವು ಹಾಲಿವುಡ್ ನಾಯಕಿಯರನ್ನು ಅವರು ಹಿಂದಿಕ್ಕಿದ್ದಾರೆ. 

Kiara Advani: 2023ರಲ್ಲಿ ಅತಿ ಹೆಚ್ಚು ಸರ್ಚ್​ ಆದ ಸೆಲೆಬ್ರಿಟಿ: ನಟಿ ಕಿಯಾರಾ ಅಡ್ವಾಣಿಗೆ ಮೊದಲ ಸ್ಥಾನ
ಕಿಯಾರಾ
Follow us
|

Updated on: Dec 12, 2023 | 11:01 AM

ನಟಿ ಕಿಯಾರಾ ಅಡ್ವಾಣಿ (Kiara Advani) ಅವರು ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರಿಗೆ ಈ ವರ್ಷ ಸಖತ್ ವಿಶೇಷ ಎನಿಸಿಕೊಂಡಿದೆ. ಹಲವು ವರ್ಷಗಳ ಗೆಳೆಯ ಸಿದ್ದಾರ್ಥ ಮಲ್ಹೋತ್ರ ಜೊತೆ ಅವರು ಮದುವೆ ಆದರು. ಅದೇ ರೀತಿ, ಈ ವರ್ಷ ಗೂಗಲ್​ನಲ್ಲಿ ಅತಿ ಹೆಚ್ಚು ಸರ್ಚ್​ಗೆ ಒಳಪಟ್ಟ ಭಾರತೀಯ ಸೆಲೆಬ್ರಿಟಿಗಳಲ್ಲಿ ಕಿಯಾರಾ ಹೆಸರು ಮೊದಲ ಸ್ಥಾನದಲ್ಲಿದೆ. ಗೂಗಲ್ ಈ ಬಗ್ಗೆ ಪಟ್ಟಿ ಬಿಡುಗಡೆ ಮಾಡಿದೆ.

2023ನೇ ವರ್ಷ ಕೊನೆ ಆಗುವ ಹಂತಕ್ಕೆ ಬಂದಿದೆ. ಈ ವೇಳೆ ಒಂದು ವರ್ಷದಲ್ಲಿ ಏನೆಲ್ಲ ಆಯಿತು ಎನ್ನುವ ಬಗ್ಗೆ ಮೆಲುಕು ಹಾಕಲಾಗುತ್ತದೆ. ಈ ವರ್ಷ ಭಾರತೀಯರು ಗೂಗಲ್​ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಿದ ಸೆಲೆಬ್ರಿಟಿ ಎಂದರೆ ಅದು ಕಿಯಾರಾ. ಈ ವರ್ಷ ಅವರ ಮದುವೆ ನೆರವೇರಿದೆ. ಈ ಕಾರಣದಿಂದಲೂ ಅವರ ಹೆಸರು ಹೆಚ್ಚು ಸರ್ಚ್​​ಗೆ ಒಳಗಾಗಿರಬಹುದು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಿಯಾರಾ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಶ್ವ ಮಟ್ಟದಲ್ಲೂ ಅವರ ಹೆಸರು ಟಾಪ್​ನಲ್ಲಿದೆ. ಈ ವರ್ಷ ಹೆಚ್ಚು ಸರ್ಚ್​ಗೆ ಒಳಗಾದ ನಟಿಯರ ಸಾಲಿನಲ್ಲಿ ಕಿಯಾರಾ ಮೊದಲಿದ್ದಾರೆ. ಈ ಮೂಲಕ ಹಲವು ಹಾಲಿವುಡ್ ನಾಯಕಿಯರನ್ನು ಅವರು ಹಿಂದಿಕ್ಕಿದ್ದಾರೆ.  ಪ್ರಿಯಾಂಕಾ ಚೋಪ್ರಾ, ದೀಪಿಕಾ ಪಡುಕೋಣೆ, ಆಲಿಯಾ ಭಟ್ ಅವರು ಈ ಸಾಲಿನಲ್ಲಿ ಇಲ್ಲ ಅನ್ನೋದು ಬೇಸರದ ವಿಚಾರ.

ಇದನ್ನೂ ಓದಿ: ‘ಡಾನ್ 3’ ನಿರ್ದೇಶಕ ಫರ್ಹಾನ್ ಅಖ್ತರ್​ ನಿವಾಸಕ್ಕೆ ಕಿಯಾರಾ ಅಡ್ವಾಣಿ ಭೇಟಿ; ಅಭಿಮಾನಿಗಳಲ್ಲಿ ಮೂಡಿತು ಕುತೂಹಲ

ರಾಜಸ್ಥಾನದಲ್ಲಿ ಕಿಯಾರಾ ಅಡ್ವಾಣಿ ಅವರ ಮದುವೆ ಗ್ರ್ಯಾಂಡ್ ಆಗಿ ನಡೆಯಿತು. ಬಾಲಿವುಡ್ ನಟ ಸಿದ್ದಾರ್ಥ್ ಮಲ್ಹೋತ್ರಾ ಅವರನ್ನು ಕಿಯಾರಾ ವರಿಸಿದರು. ಅವರ ನಟನೆಯ ‘ಸತ್ಯ ಪ್ರೇಮ್ ಕಿ ಕಥಾ’ ಸಿನಿಮಾ ರಿಲೀಸ್ ಆಯಿತು. ‘ಕಾಫಿ ವಿತ್ ಕರಣ್’ ಶೋನಲ್ಲೂ ಅವರು ಭಾಗಿ ಆಗಿದ್ದರು. ‘ವಾರ್ 2’ ಸಿನಿಮಾ ಸೇರಿ ಹಲವು ಚಿತ್ರಗಳು ಅವರ ಕೈಯಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ