AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗಿ ನಾಲ್ಕೇ ವರ್ಷಕ್ಕೆ ಖ್ಯಾತ ನಟಿ ಮೌನಿ ರಾಯ್ ಸಂಸಾರದಲ್ಲಿ ಬಿರುಕು

ನಟಿ ಮೌನಿ ರಾಯ್ ಮತ್ತು ಅವರ ಪತಿ ಸೂರಜ್ ನಂಬಿಯಾರ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆಯೇ? ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಇಂತಹದೊಂದು ಚರ್ಚೆ ಜೋರಾಗಿ ನಡೆಯುತ್ತಿದೆ. ಮದುವೆಯಾದ ನಾಲ್ಕು ವರ್ಷಗಳ ನಂತರ ಈ ಜೋಡಿ ಬೇರೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿವೆ.

ಮದುವೆ ಆಗಿ ನಾಲ್ಕೇ ವರ್ಷಕ್ಕೆ ಖ್ಯಾತ ನಟಿ ಮೌನಿ ರಾಯ್ ಸಂಸಾರದಲ್ಲಿ ಬಿರುಕು
Suraj Nambiar, Mouni Roy
ಮದನ್​ ಕುಮಾರ್​
|

Updated on: May 12, 2026 | 2:54 PM

Share

ಖ್ಯಾತ ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಮತ್ತು ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಪರಸ್ಪರ ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಈ ದಂಪತಿ, ತಮ್ಮ ಪ್ರವಾಸ ಮತ್ತು ಸಂತೋಷದ ಕ್ಷಣಗಳ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಈಗ ದಿಢೀರನೆ ಅನ್‌ಫಾಲೋ ಮಾಡಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೌನಿ ಮತ್ತು ಸೂರಜ್ ಇಬ್ಬರೂ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಸೂರಜ್ ಅವರು ತಮ್ಮ ಪ್ರೊಫೈಲ್‌ನಿಂದ ಮದುವೆಯ ಕೆಲವು ಫೋಟೋಗಳನ್ನು ತೆಗೆದುಹಾಕಿದ್ದಾರೆ ಎನ್ನಲಾಗಿದೆ. ಆದರೆ ಮೌನಿ ರಾಯ್ ಅವರ ಪ್ರೊಫೈಲ್‌ನಲ್ಲಿ ಇಂದಿಗೂ ಮದುವೆಯ ಚಿತ್ರಗಳು ಲಭ್ಯವಿವೆ. ಮೂಲಗಳ ಪ್ರಕಾರ, ಇಬ್ಬರೂ ಸದ್ಯ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸೂರಜ್ ನಂಬಿಯಾರ್ ಮೂಲತಃ ಬೆಂಗಳೂರಿನ ಜೈನ್ ಕುಟುಂಬಕ್ಕೆ ಸೇರಿದವರು. ದುಬೈನಲ್ಲಿ ಹೂಡಿಕೆ ಬ್ಯಾಂಕರ್ ಮತ್ತು ಉದ್ಯಮಿಯಾಗಿ ನೆಲೆಸಿರುವ ಸೂರಜ್ ಮತ್ತು ಮೌನಿ 2022ರ ಜನವರಿಯಲ್ಲಿ ಗೋವಾದಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದರು. ಮಲಯಾಳಿ ಮತ್ತು ಬಂಗಾಳಿ ಸಂಪ್ರದಾಯದಂತೆ ಇವರ ಮದುವೆ ನಡೆದಿತ್ತು. ಅನೇಕ ಸೆಲೆಬ್ರಿಟಿಗಳು ಆ ಮದುವೆಗೆ ಸಾಕ್ಷಿಯಾಗಿದ್ದರು.

ಈ ಎಲ್ಲ ವದಂತಿಗಳ ಬಗ್ಗೆ ಮೌನಿ ರಾಯ್ ಆಗಲಿ ಅಥವಾ ಸೂರಜ್ ಆಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಮೌನಿ ರಾಯ್ ಅವರು ಸದ್ಯ ವರುಣ್ ಧವನ್ ಜೊತೆ ಅಭಿನಯಿಸಿದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಚಿತ್ರದ ಬಿಡುಗಡೆಯ ತಯಾರಿಯಲ್ಲಿದ್ದಾರೆ.

ಇದನ್ನೂ ಓದಿ: ಅತಿಥಿಯಾಗಿ ಕರೆದು ಕಿರುಕುಳ ನೀಡಿದ ಅಂಕಲ್ಸ್: ನಟಿ ಮೌನಿ ರಾಯ್​ಗೆ ಕೆಟ್ಟ ಅನುಭವ

ಅಭಿಮಾನಿಗಳು ಮಾತ್ರ ‘ಇಷ್ಟು ಸುಂದರವಾದ ಜೋಡಿ ಬೇರೆಯಾಗಬಾರದು’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇದು ಕೇವಲ ಸಣ್ಣ ಮುನಿಸೋ ಅಥವಾ ನಿಜವಾದ ವಿಚ್ಛೇದನವೋ ಎಂಬುದು ಕಾಲವೇ ಉತ್ತರಿಸಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್