AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸ್ಸು ಬದಲಾಯಿಸಿದ ಕೆಜಿಎಫ್ ಬೆಡಗಿ; ಭಾರತದ ಸಮುದ್ರ ತಟದಲ್ಲೇ ನೆರವೇರಲಿದೆ ಅದ್ದೂರಿ ಕಲ್ಯಾಣ

Mouni Roy | Suraj Nambiar: ಬಾಲಿವುಡ್ ಬೆಡಗಿ ಮೌನಿ ರಾಯ್ ವಿವಾಹದ ತಯಾರಿಯಲ್ಲಿದ್ದಾರೆ. ಗೆಳೆಯ ಸೂರಜ್ ನಂಬಿಯಾರ್ ಜತೆ ಹಸೆಮಣೆ ಏರಲಿರುವ ಅವರು, ಭಾರತದಲ್ಲೇ ವಿವಾಹವಾಗಲು ನಿರ್ಧರಿಸಿದ್ದಾರೆ.

ಮನಸ್ಸು ಬದಲಾಯಿಸಿದ ಕೆಜಿಎಫ್ ಬೆಡಗಿ; ಭಾರತದ ಸಮುದ್ರ ತಟದಲ್ಲೇ ನೆರವೇರಲಿದೆ ಅದ್ದೂರಿ ಕಲ್ಯಾಣ
ಮೌನಿ ರಾಯ್
TV9 Web
| Updated By: shivaprasad.hs|

Updated on:Jan 12, 2022 | 3:58 PM

Share

‘ಕೆಜಿಎಫ್’ (KGF) ಚಿತ್ರದ ಹಿಂದಿ ಅವತರಣಿಕೆಯಲ್ಲಿ ಮೂಡಿ ಬಂದಿದ್ದ ‘ಗಲಿ ಗಲಿ’ (Gali Gali) ಹಾಡಿಗೆ ಹೆಜ್ಜೆ ಹಾಕಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಮೌನಿ ರಾಯ್ (Mouni Roy) ಇದೀಗ ಮದುವೆಯ ತಯಾರಿಯಲ್ಲಿದ್ದಾರೆ. ‘ನಾಗಿಣಿ’ಯಾಗಿ ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿದ್ದ ಮೌನಿ ರಾಯ್ ನಂತರ ಬಾಲಿವುಡ್​ನಲ್ಲಿ ಗುರುತಿಸಿಕೊಂಡರು. ಇತ್ತೀಚೆಗೆ ಅವರು ದುಬೈ ಮೂಲದ ಉದ್ಯಮಿ ಸೂರಜ್ ನಂಬಿಯಾರ್ (Suraj Nambiar) ಜತೆ ಸುತ್ತಾಡುತ್ತಿದ್ದಾರೆ. 2022ರಲ್ಲಿ ಈರ್ವರು ವಿವಾಹವಾಗಲಿದ್ದಾರೆ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ಈ ಜೋಡಿ ‘ಡೆಸ್ಟಿನೇಷನ್ ವೆಡ್ಡಿಂಗ್​’ಗೆ ಪ್ಲಾನ್ ಮಾಡಿತ್ತು. ಅದರಲ್ಲೂ ದುಬೈನಲ್ಲಿಯೇ ಈರ್ವರೂ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿತ್ತು. ಆದರೆ ಈ ಜೋಡಿ ಇದೀಗ ನಿರ್ಧಾರ ಬದಲಿಸಿದೆ. ಅಲ್ಲದೇ ಭಾರತದ ಸಮುದ್ರ ಕಿನಾರೆಯಲ್ಲಿ ವಿವಾಹವಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಗೋವಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲು ಮೌನಿ ಹಾಗೂ ಸೂರಜ್ ಯೋಜಿಸಿದ್ದು, ಪಂಚತಾರಾ ಹೋಟೆಲ್ ಒಂದನ್ನು ಬುಕ್ ಮಾಡಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಇದೇ ಜನವರಿ 27ರಂದು ಈರ್ವರೂ ಹಸೆಮಣೆ ಏರಲಿದ್ದಾರೆ. ಈಗಾಗಲೇ ಅತಿಥಿಗಳಿಗೆ ಆಹ್ವಾನ ಹೋಗಿದ್ದು, ಹೊರಗೆಲ್ಲೂ ಹೆಚ್ಚು ಸುದ್ದಿ ಮಾಡದಂತೆ ಸೂಚಿಸಲಾಗಿದೆ ಎಂದು ಮೌನಿ ರಾಯ್ ಆಪ್ತ ಮೂಲಗಳು ತಿಳಿಸಿವೆ.

ಖಾಸಗಿ ಮಾಧ್ಯಮಗಳ ವರದಿಯ ಪ್ರಕಾರ ಪಶ್ಚಿಮ ಗೋವಾದ ವೆಗೇಟರ್ ಬೀಚ್​ನಲ್ಲಿ​​ (Vagator beach) ವಿವಾಹ ಸಮಾರಂಭ ನಡೆಯಲಿದೆ. ಮಧ್ಯಾಹ್ನದ ನಂತರ ಕಾರ್ಯಕ್ರಮ ಜರುಗಲಿದ್ದು, ಸಮುದ್ರಾಭಿಮುಖವಾಗಿ ನಡೆಯುವ ವಿಶೇಷ ವಿವಾಹ ಮಹೋತ್ಸವ ಇದಾಗಿರಲಿದೆ. ಇದಲ್ಲದೇ ಡಾನ್ಸ್​ ಮೂಲಕವೇ ಹೆಸರು ಮಾಡಿರುವ ಮೌನಿ ವಿವಾಹ ಸಮಾರಂಭದಲ್ಲೂ ವಿಶೇಷ ಕಾರ್ಯಕ್ರಮಕ್ಕೆ ತಯಾರಿ ನಡೆಸಿದ್ದಾರಂತೆ. ಜನವರಿ 28ರಂದು ವಿಶೇಷ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಮೌನಿ ತಮ್ಮ ಸ್ನೇಹಿತರಾದ ಪ್ರತೀಕ್ ಉಟೇಕರ್ ಹಾಗೂ ರಾಹುಲ್ ಶೆಟ್ಟಿ ಅವರೊಂದಿಗೆ ಅಭ್ಯಾಸವನ್ನೂ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಮೌನಿ ರಾಯ್, ಸೂರಜ್ ನಂಬಿಯಾರ್:

Mouni Roy

ಮೌನಿ ರಾಯ್, ಸೂರಜ್ ನಂಬಿಯಾರ್

ಸದ್ಯದ ಮಾಹಿತಿಯ ಪ್ರಕಾರ ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್, ಏಕ್ತಾ ಕಪೂರ್, ವಿನ್ಯಾಸಗಾರ ಮನೀಶ್ ಮಲ್ಹೋತ್ರಾ ಸೇರಿದಂತೆ ಹಲವರು ವಿವಾಹದಲ್ಲಿ ಭಾಗವಹಿಸಲಿದ್ದಾರೆ. ಮೌನಿ ರಾಯ್ ಗೋವಾ ಹಾಗೂ ಮುಂಬೈ ನಡುವೆ ಓಡಾಡುತ್ತಾ ತಯಾರಿ ಗಮನಿಸುತ್ತಿದ್ದಾರೆ. ಮದುಮಗ ಸೂರಜ್ ನಂಬಿಯಾರ್ ಕೂಡ ಭಾರತಕ್ಕೆ ಆಗಮಿಸಿದ್ದಾರೆ, ಆದರೆ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ ಎಂದಿವೆ ಬಾಲಿವುಡ್ ವರದಿಗಳು.

ಇದನ್ನೂ ಓದಿ:

‘ಈ ಜಾಥಾದ ಚಿತ್ರಕಥೆ ಸರಿಯಿಲ್ಲ; ಕಥೆಯೇ ಫ್ಲಾಪ್​’: ಮೇಕೆದಾಟು ಪಾದಯಾತ್ರೆ ಬಗ್ಗೆ ನಟಿ ಶ್ರುತಿ ಖಂಡನೆ

Trisha Krishnan: ಜೀವನದಲ್ಲಿ ಮೊದಲ ಬಾರಿಗೆ ‘ನೆಗೆಟಿವ್’ ರಿಪೋರ್ಟ್ ನೋಡಿ ಖುಷಿಪಟ್ಟ ತ್ರಿಷಾ; 2022ಕ್ಕೆ ರೆಡಿ ಎಂದ ನಟಿ

Published On - 3:53 pm, Wed, 12 January 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ