AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy: ಪಾಸ್​ಪೋರ್ಟ್​​ ಇಲ್ಲದೇ ವಿಮಾನ ನಿಲ್ದಾಣ ಪ್ರವೇಶಿಸಲು ಯತ್ನಿಸಿದ ಮೌನಿ ರಾಯ್​; ವಾಪಸ್​ ಮನೆಗೆ ಕಳಿಸಿದ ಅಧಿಕಾರಿ

Mouni Roy Viral Video: ವಿಮಾನ ನಿಲ್ದಾಣದಲ್ಲಿ ಮೌನಿ ರಾಯ್​ ಅವರಿಗೆ ಪ್ರವೇಶ ನಿರ್ಬಂಧಿಸಲಾಯಿತು. ಬೇರೆ ಆಯ್ಕೆ ಇಲ್ಲದೇ ಅವರು ವಾಪಸ್​ ಮನೆ ಕಡೆ ಹೊರಟರು.

Mouni Roy: ಪಾಸ್​ಪೋರ್ಟ್​​ ಇಲ್ಲದೇ ವಿಮಾನ ನಿಲ್ದಾಣ ಪ್ರವೇಶಿಸಲು ಯತ್ನಿಸಿದ ಮೌನಿ ರಾಯ್​; ವಾಪಸ್​ ಮನೆಗೆ ಕಳಿಸಿದ ಅಧಿಕಾರಿ
ಮೌನಿ ರಾಯ್​
ಮದನ್​ ಕುಮಾರ್​
|

Updated on: Jul 12, 2023 | 4:36 PM

Share

ಸೆಲೆಬ್ರಿಟಿಗಳು ಸದಾ ಕಾಲ ವಿಮಾನದಲ್ಲಿ ಪ್ರಯಾಣ ಮಾಡುತ್ತಾರೆ. ಹಲವು ದೇಶಗಳಿಗೆ ಅವರು ಭೇಟಿ ನೀಡುತ್ತಾರೆ. ಈ ವೇಳೆ ಅಗತ್ಯ ದಾಖಲೆ ಪತ್ರಗಳನ್ನು ತಮ್ಮ ಬಳಿ ಇಟ್ಟುಕೊಳ್ಳಬೇಕಾದ್ದು ಅವರ ಜವಾಬ್ದಾರಿ. ಆದರೆ ಮೌನಿ ರಾಯ್​ (Mouni Roy) ಅವರು ಈ ವಿಚಾರದಲ್ಲಿ ಕೊಂಚ ಎಡವಿದ್ದಾರೆ. ಪಾಸ್​ಪೋರ್ಟ್​ ಇಲ್ಲದೆಯೇ ಅವರು ಮುಂಬೈ ವಿಮಾನ ನಿಲ್ದಾಣವನ್ನು (Mumbai Airport) ಪ್ರವೇಶಿಸಲು ಯತ್ನಿಸಿದ್ದಾರೆ. ಆದರೆ ಅಲ್ಲಿದ್ದ ಅಧಿಕಾರಿಗಳು ಅದಕ್ಕೆ ಅವಕಾಶ ನೀಡಿಲ್ಲ. ಮೌನಿ ಬಳಿ ಪಾಸ್​ಪೋರ್ಟ್​ (Passport) ಇಲ್ಲ ಎಂದು ಗೊತ್ತಾದ ತಕ್ಷಣ ಅವರನ್ನು ವಾಪಸ್​ ಕಳಿಸಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಇದನ್ನು ಕಂಡು ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮೌನಿ ರಾಯ್​ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಾಗ ಅವರ ಫೋಟೋ ಮತ್ತು ವಿಡಿಯೋಗಾಗಿ ಪಾಪರಾಜಿಗಳು ಮುತ್ತಿಗೆ ಹಾಕುತ್ತಾರೆ. ಇತ್ತೀಚೆಗೆ ಅದೇ ರೀತಿ ಆಯಿತು. ಪಾಪರಾಜಿಗಳ ಕಡೆಗೆ ಕೈ ಬೀಸಿ, ನಂತರ ಅವರು ವಿಮಾನ ನಿಲ್ದಾಣ ಪ್ರವೇಶಿಸಲು ಮುಂದಾದರು. ಆಗ ಅಲ್ಲಿದ್ದ ಅಧಿಕಾರಿಯು ಪಾಸ್​ಪೋರ್ಟ್​ ತೋರಿಸುವಂತೆ ಸೂಚಿಸಿದ್ದಾರೆ. ಬ್ಯಾಗ್​ ಪೂರ್ತಿ ಹುಡುಕಾಡಿದರೂ ಮೌನಿ ರಾಯ್​ಗೆ ಪಾಸ್​ ಪೋರ್ಟ್​ ಸಿಕ್ಕಿಲ್ಲ. ಹಾಗಾಗಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಪ್ರವೇಶ ನಿರ್ಬಂಧಿಸಲಾಯಿತು. ಬೇರೆ ಆಯ್ಕೆ ಇಲ್ಲದೇ ಮೌನಿ ರಾಯ್​ ವಾಪಸ್​ ಮನೆ ಕಡೆ ಹೊರಟರು.

ಈ ವಿಡಿಯೋ ವೈರಲ್​ ಆದ ಬಳಿಕ ಮೌನಿ ರಾಯ್​ ಅವರನ್ನು ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ‘ಪ್ರಚಾರ ಪಡೆಯುವ ಸಲುವಾಗಿ ಪಾಪರಾಜಿಗಳಿಗೆ ಫೋನ್​ ಮಾಡಿ ಆಹ್ವಾನ ನೀಡುವ ಭರದಲ್ಲಿ ಪಾಸ್​ಪೋರ್ಟ್​ ಇಟ್ಟುಕೊಳ್ಳುವುದನ್ನೇ ಮೌನಿ ರಾಯ್​ ಮರೆತಿದ್ದಾರೆ’ ಎಂದು ಅನೇಕರು ಕಾಲೆಳೆದಿದ್ದಾರೆ. ಇಂಥ ಹಲವಾರು ನೆಗೆಟಿವ್​ ಕಮೆಂಟ್​ಗಳು ಬಂದಿವೆ. ಆದರೆ ಅದಕ್ಕೆಲ್ಲ ಮೌನಿ ರಾಯ್​ ತಲೆ ಕೆಡಿಸಿಕೊಂಡಿಲ್ಲ.

ಇದನ್ನೂ ಓದಿ: ಬಿಕಿನಿ ಧರಿಸಿ ಹೊಸ ಫೋಟೋಶೂಟ್​ ಮಾಡಿಸಿದ ಮೌನಿ ರಾಯ್​

ಚಿತ್ರರಂಗದಲ್ಲಿ ಮೌನಿ ರಾಯ್​ ಅವರಿಗೆ ಸಖತ್​ ಬೇಡಿಕೆ ಇದೆ. ಕಿರುತೆರೆಯ ಧಾರಾವಾಹಿಗಳಿಂದ ಖ್ಯಾತಿ ಪಡೆದ ಅವರು ನಂತರ ಸಿನಿಮಾಗಳಲ್ಲೂ ದೊಡ್ಡ ದೊಡ್ಡ ಅವಕಾಶಗಳನ್ನು ಪಡೆದರು. ಅಕ್ಷಯ್​ ಕುಮಾರ್​ ಅವರಂತಹ ಸ್ಟಾರ್​ ನಟರ ಜೊತೆ ತೆರೆಹಂಚಿಕೊಳ್ಳುವ ಚಾನ್ಸ್​ ಅವರಿಗೆ ಸಿಕ್ಕಿತು. ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದ ‘ಗಲಿ ಗಲಿ ಮೇ..’ ಹಾಡಿನಲ್ಲಿ ಯಶ್​ ಜೊತೆ ಡ್ಯಾನ್ಸ್​ ಮಾಡುವ ಮೂಲಕ ಮೌನಿಗೆ ಹೆಚ್ಚು ಜನಪ್ರಿಯತೆ ಸಿಕ್ಕಿತು. ಈಗ ಅವರ ಕೈಯಲ್ಲಿ ಅನೇಕ ಪ್ರಾಜೆಕ್ಟ್​ಗಳಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ