AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌನಿ ರಾಯ್ ರೆಸ್ಟೋರೆಂಟ್ ಸಖತ್ ದುಬಾರಿ; ಜಾಮೂನು, ಭೇಲ್​ ಪುರಿಗೆ 400 ರೂಪಾಯಿ

ಮೌನಿ ರಾಯ್ ಅವರ 'ಬದ್ಮಾಶ್' ರೆಸ್ಟೋರೆಂಟ್ ಬೆಂಗಳೂರು ಸೇರಿದಂತೆ ಹಲವೆಡೆ ದುಬಾರಿ ಬೆಲೆಗಳಿಂದ ಸುದ್ದಿಯಾಗಿದೆ. ಜಾಮೂನು, ಅವಕಾಡೋ ಭೇಲ್ ಪುರಿ, ತಂದೂರಿ ರೋಟಿ ಸೇರಿದಂತೆ ಹಲವು ತಿನಿಸುಗಳಿಗೆ 300 ರೂ.ನಿಂದ 800 ರೂ.ವರೆಗೆ ಬೆಲೆ ಇದೆ. ಸೆಲೆಬ್ರಿಟಿಗಳ ಹೋಟೆಲ್‌ಗಳಿಗೆ ಅಭಿಮಾನಿಗಳು ಖಂಡಿತಾ ಬರುತ್ತಾರೆ ಎಂಬ ನಂಬಿಕೆಯೇ ಈ ದುಬಾರಿ ಬೆಲೆಗೆ ಕಾರಣ ಎನ್ನಲಾಗಿದೆ.

ಮೌನಿ ರಾಯ್ ರೆಸ್ಟೋರೆಂಟ್ ಸಖತ್ ದುಬಾರಿ; ಜಾಮೂನು, ಭೇಲ್​ ಪುರಿಗೆ 400 ರೂಪಾಯಿ
ಮೌನಿ ರಾಯ್
ರಾಜೇಶ್ ದುಗ್ಗುಮನೆ
|

Updated on: Oct 27, 2025 | 12:49 PM

Share

ಎಲ್ಲಾ ಸೆಲೆಬ್ರಿಟಿಗಳು ಸಿನಿಮಾ ರಂಗದಲ್ಲಿ ಯಶಸ್ಸು ಕಂಡ ಬಳಿಕ ಯಾವುದಾದರೂ ಒಂದು ಉದ್ಯಮ ಆರಂಭಿಸುತ್ತಾರೆ. ಬಾಲಿವುಡ್​ನಲ್ಲಿ ಈ ಟ್ರೆಂಡ್ ಜೋರಾಗಿದೆ. ಅನೇಕ ಸೆಲೆಬ್ರಿಟಿಗಳು ಬಟ್ಟೆ ಬ್ರ್ಯಾಂಡ್ ಹೊಂದಿದ್ದಾರೆ. ಇನ್ನೂ ಕೆಲವು ಸೆಲೆಬ್ರಿಟಿಗಳು ತಮ್ಮದೇ ಹೋಟೆಲ್ ಉದ್ಯಮ ಹೊಂದಿದ್ದಾರೆ. ಇದಕ್ಕೆ ಮೌನಿ ರಾಯ್ (Mouni Roy) ಕೂಡ ಹೊರತಾಗಿಲ್ಲ. ಅವರು ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಆರು ರೆಸ್ಟೋರೆಂಟ್ ಹೊಂದಿದ್ದಾರೆ. ಈ ರೆಸ್ಟೋರೆಂಟ್​ನ ತಿನಿಸುಗಳ ಬೆಲೆ ಅನೇಕರಿಗೆ ಅಚ್ಚರಿ ಮೂಡಿಸಿದೆ.

‘ಬದ್​ಮಾಶ್’ ಅನ್ನೋದು ಮೌನಿ ರಾಯ್ ರೆಸ್ಟೋರೆಂಟ್ ಹೆಸರು. ಬೆಂಗಳೂರಿನ ಸರ್ಜಾಪುರದಲ್ಲಿ ಅವರು 2023ರಲ್ಲಿ ಮೊದಲ ಔಟ್​ಲೆಟ್ ಆರಂಭಿಸಿದರು. ಈಗ ಮುಂಬೈ, ಕೋಲ್ಕತ್ತ ಸೇರಿದಂತೆ ಆರು ಕಡೆಗಳಲ್ಲಿ ಅವರ ಹೋಟೆಲ್ ಇದೆ. ಈ ರೆಸ್ಟೋರೆಂಟ್​​ಗೆ ಭೇಟಿ ನೀಡಬೇಕು ಎಂದರೆ ನೀವು ದೊಡ್ಡ ಮೊತ್ತ ತೆತ್ತಲು ರೆಡಿ ಇರಬೇಕು. ಇಲ್ಲಿನ ತಿಂಡಿಗಳ ಬೆಲೆ 300 ರೂಪಾಯಿಯಿಂದ ಆರಂಭ ಆಗಿ 800 ರೂಪಾಯಿವರೆಗೆ ಇದೆ.

ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿದ ಪ್ರಕಾರ, ಜಾಮೂನಿನ ಬೆಲೆ 410 ರೂಪಾಯಿ. ಅವಕಾಡೋ ಭೇಲ್ ಬೆಲೆ 395 ರೂಪಾಯಿ.  ಮಸಾಲಾ ಪೀನಟ್, ಮಸಾಲಾ ಪಾಪಡ್, ಕ್ರಿಸ್ಪಿ ಕಾರ್ನ್ ಹಾಗು ಶೇವ್ ಪುರಿ ಬೆಲೆ 295 ರೂಪಾಯಿ. ಸಿಗಡಿಯಿಂದ ಮಾಡಿದ ತಿಂಡಿಗಳ ಬೆಲೆ 795 ರೂಪಾಯಿ. ತಂದೂರಿ ರೋಟಿ ಒಂದಕ್ಕೆ 105 ರೂಪಾಯಿ. ನಾನ್ ಬೆಲೆ 115 ರೂಪಾಯಿ.

View this post on Instagram

A post shared by BADMAASH (@badmaashla)

ತಾವು ಆರಂಭಿಸಿದ ಹೋಟೆಲ್ ಎಂಬ ಕಾರಣಕ್ಕೆ ಅವರ ಫ್ಯಾನ್ಸ್ ಬಂದೇ ಬರುತ್ತಾರೆ ಎಂಬ ನಂಬಿಕೆ ಸೆಲೆಬ್ರಿಟಿಗಳದ್ದು. ಈ ಕಾರಣದಿಂದಲೇ ದುಬಾರಿ ಬೆಲೆಯನ್ನು ನಿಗದಿ ಮಾಡಲಾಗುತ್ತದೆ. ಶಿಲ್ಪಾ ಶೆಟ್ಟಿ ಅವರು ಮುಂಬೈನಲ್ಲಿ ತಮ್ಮದೇ ಆದ ಹೋಟೆಲ್ ಹೊಂದಿದ್ದಾರೆ. ಈ ಹೋಟೆಲ್​​ನಿಂದ ಶಿಲ್ಪಾ ಕೋಟಿ ಕೋಟಿ ಬಿಸ್ನೆಸ್ ಮಾಡುತ್ತಿದೆ.

ಇದನ್ನೂ ಓದಿ: ವೇದಿಕೆಯಲ್ಲಿ ಕೆಜಿಎಫ್ ಹಾಡಿಗೆ ಮೌನಿ ರಾಯ್ ಭರ್ಜರಿ ಡ್ಯಾನ್ಸ್

ಮೌನಿ ರಾಯ್ ಅವರು 2006ರಲ್ಲಿ ಚಿತ್ರರಂಗಕ್ಕೆ ಬಂದರು. ಅವರು ಸಿನಿಮಾ ಮಾಡಿದ್ದು ಕಡಿಮೆ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಾ ಗಮನ ಸೆಳೆಯುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್