AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌನಿ ರಾಯ್ ರೆಸ್ಟೋರೆಂಟ್ ಸಖತ್ ದುಬಾರಿ; ಜಾಮೂನು, ಭೇಲ್​ ಪುರಿಗೆ 400 ರೂಪಾಯಿ

ಮೌನಿ ರಾಯ್ ಅವರ 'ಬದ್ಮಾಶ್' ರೆಸ್ಟೋರೆಂಟ್ ಬೆಂಗಳೂರು ಸೇರಿದಂತೆ ಹಲವೆಡೆ ದುಬಾರಿ ಬೆಲೆಗಳಿಂದ ಸುದ್ದಿಯಾಗಿದೆ. ಜಾಮೂನು, ಅವಕಾಡೋ ಭೇಲ್ ಪುರಿ, ತಂದೂರಿ ರೋಟಿ ಸೇರಿದಂತೆ ಹಲವು ತಿನಿಸುಗಳಿಗೆ 300 ರೂ.ನಿಂದ 800 ರೂ.ವರೆಗೆ ಬೆಲೆ ಇದೆ. ಸೆಲೆಬ್ರಿಟಿಗಳ ಹೋಟೆಲ್‌ಗಳಿಗೆ ಅಭಿಮಾನಿಗಳು ಖಂಡಿತಾ ಬರುತ್ತಾರೆ ಎಂಬ ನಂಬಿಕೆಯೇ ಈ ದುಬಾರಿ ಬೆಲೆಗೆ ಕಾರಣ ಎನ್ನಲಾಗಿದೆ.

ಮೌನಿ ರಾಯ್ ರೆಸ್ಟೋರೆಂಟ್ ಸಖತ್ ದುಬಾರಿ; ಜಾಮೂನು, ಭೇಲ್​ ಪುರಿಗೆ 400 ರೂಪಾಯಿ
ಮೌನಿ ರಾಯ್
ರಾಜೇಶ್ ದುಗ್ಗುಮನೆ
|

Updated on: Oct 27, 2025 | 12:49 PM

Share

ಎಲ್ಲಾ ಸೆಲೆಬ್ರಿಟಿಗಳು ಸಿನಿಮಾ ರಂಗದಲ್ಲಿ ಯಶಸ್ಸು ಕಂಡ ಬಳಿಕ ಯಾವುದಾದರೂ ಒಂದು ಉದ್ಯಮ ಆರಂಭಿಸುತ್ತಾರೆ. ಬಾಲಿವುಡ್​ನಲ್ಲಿ ಈ ಟ್ರೆಂಡ್ ಜೋರಾಗಿದೆ. ಅನೇಕ ಸೆಲೆಬ್ರಿಟಿಗಳು ಬಟ್ಟೆ ಬ್ರ್ಯಾಂಡ್ ಹೊಂದಿದ್ದಾರೆ. ಇನ್ನೂ ಕೆಲವು ಸೆಲೆಬ್ರಿಟಿಗಳು ತಮ್ಮದೇ ಹೋಟೆಲ್ ಉದ್ಯಮ ಹೊಂದಿದ್ದಾರೆ. ಇದಕ್ಕೆ ಮೌನಿ ರಾಯ್ (Mouni Roy) ಕೂಡ ಹೊರತಾಗಿಲ್ಲ. ಅವರು ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಆರು ರೆಸ್ಟೋರೆಂಟ್ ಹೊಂದಿದ್ದಾರೆ. ಈ ರೆಸ್ಟೋರೆಂಟ್​ನ ತಿನಿಸುಗಳ ಬೆಲೆ ಅನೇಕರಿಗೆ ಅಚ್ಚರಿ ಮೂಡಿಸಿದೆ.

‘ಬದ್​ಮಾಶ್’ ಅನ್ನೋದು ಮೌನಿ ರಾಯ್ ರೆಸ್ಟೋರೆಂಟ್ ಹೆಸರು. ಬೆಂಗಳೂರಿನ ಸರ್ಜಾಪುರದಲ್ಲಿ ಅವರು 2023ರಲ್ಲಿ ಮೊದಲ ಔಟ್​ಲೆಟ್ ಆರಂಭಿಸಿದರು. ಈಗ ಮುಂಬೈ, ಕೋಲ್ಕತ್ತ ಸೇರಿದಂತೆ ಆರು ಕಡೆಗಳಲ್ಲಿ ಅವರ ಹೋಟೆಲ್ ಇದೆ. ಈ ರೆಸ್ಟೋರೆಂಟ್​​ಗೆ ಭೇಟಿ ನೀಡಬೇಕು ಎಂದರೆ ನೀವು ದೊಡ್ಡ ಮೊತ್ತ ತೆತ್ತಲು ರೆಡಿ ಇರಬೇಕು. ಇಲ್ಲಿನ ತಿಂಡಿಗಳ ಬೆಲೆ 300 ರೂಪಾಯಿಯಿಂದ ಆರಂಭ ಆಗಿ 800 ರೂಪಾಯಿವರೆಗೆ ಇದೆ.

ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿದ ಪ್ರಕಾರ, ಜಾಮೂನಿನ ಬೆಲೆ 410 ರೂಪಾಯಿ. ಅವಕಾಡೋ ಭೇಲ್ ಬೆಲೆ 395 ರೂಪಾಯಿ.  ಮಸಾಲಾ ಪೀನಟ್, ಮಸಾಲಾ ಪಾಪಡ್, ಕ್ರಿಸ್ಪಿ ಕಾರ್ನ್ ಹಾಗು ಶೇವ್ ಪುರಿ ಬೆಲೆ 295 ರೂಪಾಯಿ. ಸಿಗಡಿಯಿಂದ ಮಾಡಿದ ತಿಂಡಿಗಳ ಬೆಲೆ 795 ರೂಪಾಯಿ. ತಂದೂರಿ ರೋಟಿ ಒಂದಕ್ಕೆ 105 ರೂಪಾಯಿ. ನಾನ್ ಬೆಲೆ 115 ರೂಪಾಯಿ.

View this post on Instagram

A post shared by BADMAASH (@badmaashla)

ತಾವು ಆರಂಭಿಸಿದ ಹೋಟೆಲ್ ಎಂಬ ಕಾರಣಕ್ಕೆ ಅವರ ಫ್ಯಾನ್ಸ್ ಬಂದೇ ಬರುತ್ತಾರೆ ಎಂಬ ನಂಬಿಕೆ ಸೆಲೆಬ್ರಿಟಿಗಳದ್ದು. ಈ ಕಾರಣದಿಂದಲೇ ದುಬಾರಿ ಬೆಲೆಯನ್ನು ನಿಗದಿ ಮಾಡಲಾಗುತ್ತದೆ. ಶಿಲ್ಪಾ ಶೆಟ್ಟಿ ಅವರು ಮುಂಬೈನಲ್ಲಿ ತಮ್ಮದೇ ಆದ ಹೋಟೆಲ್ ಹೊಂದಿದ್ದಾರೆ. ಈ ಹೋಟೆಲ್​​ನಿಂದ ಶಿಲ್ಪಾ ಕೋಟಿ ಕೋಟಿ ಬಿಸ್ನೆಸ್ ಮಾಡುತ್ತಿದೆ.

ಇದನ್ನೂ ಓದಿ: ವೇದಿಕೆಯಲ್ಲಿ ಕೆಜಿಎಫ್ ಹಾಡಿಗೆ ಮೌನಿ ರಾಯ್ ಭರ್ಜರಿ ಡ್ಯಾನ್ಸ್

ಮೌನಿ ರಾಯ್ ಅವರು 2006ರಲ್ಲಿ ಚಿತ್ರರಂಗಕ್ಕೆ ಬಂದರು. ಅವರು ಸಿನಿಮಾ ಮಾಡಿದ್ದು ಕಡಿಮೆ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಾ ಗಮನ ಸೆಳೆಯುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್