AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

. ಇತ್ತೀಚೆಗೆ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ವಿರಾಟ್​ ಕೊಹ್ಲಿ ಮೇಲಿದ್ದ ಪ್ರೀತಿ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.  

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ
‘ವಿರಾಟ್​ ಮೇಲೆ ನನಗೆ ಹುಚ್ಚು ಪ್ರೀತಿಯಿತ್ತು’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ
TV9 Web
| Edited By: |

Updated on: Sep 09, 2021 | 6:05 PM

Share

ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ವಿರಾಟ್​ ಫಿಟ್​ನೆಸ್​ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಇನ್ನು ಅವರ ಫ್ಯಾಷನ್​ ಕೂಡ ಅನೇಕರಿಗೆ ಇಷ್ಟವಾಗುತ್ತದೆ. ವಿರಾಟ್​ ನಟಿ ಅನುಷ್ಕಾ ಶರ್ಮಾ ಅವರನ್ನು ಮದುವೆ ಆದ ನಂತರದಲ್ಲಿ ಬೇಸರ ಮಾಡಿಕೊಂಡವರೆಷ್ಟೋ. ಈಗ ಬಾಲಿವುಡ್​ ನಟಿಯೊಬ್ಬರು ವಿರಾಟ್​ ಅವರ ಮೇಲಿದ್ದ ಹುಚ್ಚು ಪ್ರೀತಿ ಬಗ್ಗೆ ಹೇಳಿಕೊಂಡಿದ್ದಾರೆ.

ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ಮೃಣಾಲ್​ ಠಾಕೂರ್​ ಹೀಗೊಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ವಿರಾಟ್​ ಕೊಹ್ಲಿ ಮೇಲಿದ್ದ ಪ್ರೀತಿ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.

‘ಸೂಪರ್​ 30’, ‘ಬಾಟ್ಲಾ ಹೌಸ್​’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ ಮೃಣಾಲ್. ಅವರಿಗೆ ಕ್ರಿಕೆಟ್​ ಎಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕೊಹ್ಲಿ ಕಂಡರೆ ಅವರಿಗೆ ಅಚ್ಚುಮೆಚ್ಚು. ‘ನನಗೆ ವಿರಾಟ್ ಮೇಲೆ ಹುಚ್ಚು ಪ್ರೀತಿ ಇತ್ತು. ನನ್ನ ಸಹೋದರನ ಜತೆ ಕ್ರಿಕೆಟ್​ ನೋಡೋಕೆ ಸ್ಟೇಡಿಯಮ್​ಗೆ ಹೋಗುತ್ತಿದ್ದೆ’ ಎಂದಿದ್ದಾರೆ.

ತೆಲುಗಿನ ‘ಜೆರ್ಸಿ’ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಶಾಹಿದ್​ ಕಪೂರ್​ ಸಿನಿಮಾದ ಹೀರೋ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ. ಈ ಬಗ್ಗೆಯೂ ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ‘ಸ್ಟೇಡಿಯಮ್​ನಲ್ಲಿ ನಿಂತು ಕ್ರಿಕೆಟ್​ ನೋಡೋದು ಖುಷಿಯ ವಿಚಾರವಾಗಿತ್ತು. ಕ್ರಿಕೆಟ್​ ಎಂದರೆ ಎಲ್ಲಿಲ್ಲದ ಪ್ರೀತಿ ಆಗಿತ್ತು. ಈಗ ಕ್ರಿಕೆಟ್​ನ ಕಥೆ ಹೊಂದಿರುವ ಸಿನಿಮಾದ ಭಾಗವಾಗುತ್ತಿರುವುದಕ್ಕೆ ಖುಷಿ ಇದೆ’ ಎಂದಿದ್ದಾರೆ ಮೃಣಾಲ್.

ಗೌತಮ್​ ಅವರು ‘ಜೆರ್ಸಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ದೀಪಾವಳಿ ಪ್ರಯುಕ್ತ ನವೆಂಬರ್​ 5ರಂದು ಸಿನಿಮಾ ತೆರೆಗೆ ಬರುವ ನಿರಿಕ್ಷೆ ಇದೆ. ಇದಲ್ಲದೆ, ತಮಿಳು ಸಿನಿಮಾ ‘ತಾಡಮ್​’ ಹಿಂದಿ ರಿಮೇಕ್​ನಲ್ಲೂ ಅವರು ನಟಿಸುತ್ತಿದ್ದಾರೆ.

ಇದನ್ನೂ ಓದಿ:  IND vs ENG: ಓಲ್ಡ್ ಟ್ರಾಫರ್ಡ್ ಮೈದಾನವೆಂದರೆ ಕೊಹ್ಲಿ ಬಳಗ ಹೆದರುವುದ್ಯಾಕೆ? ಇಲ್ಲಿ ಗೆಲ್ಲುವುದು ಸುಲಭದ ಮಾತಲ್ಲ!

 ತೆರೆಮೇಲೆ ದಾದಾಗಿರಿ: ಯಾರಾಗಲಿದ್ದಾರೆ ಸೌರವ್ ಗಂಗೂಲಿ ಚಿತ್ರದ ನಾಯಕ?

Follow Us
Web contact
Web contact

TV9 Kannada

Read More
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ