AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

. ಇತ್ತೀಚೆಗೆ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ವಿರಾಟ್​ ಕೊಹ್ಲಿ ಮೇಲಿದ್ದ ಪ್ರೀತಿ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.  

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ
‘ವಿರಾಟ್​ ಮೇಲೆ ನನಗೆ ಹುಚ್ಚು ಪ್ರೀತಿಯಿತ್ತು’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ
TV9 Web
| Edited By: |

Updated on: Sep 09, 2021 | 6:05 PM

Share

ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ವಿರಾಟ್​ ಫಿಟ್​ನೆಸ್​ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಇನ್ನು ಅವರ ಫ್ಯಾಷನ್​ ಕೂಡ ಅನೇಕರಿಗೆ ಇಷ್ಟವಾಗುತ್ತದೆ. ವಿರಾಟ್​ ನಟಿ ಅನುಷ್ಕಾ ಶರ್ಮಾ ಅವರನ್ನು ಮದುವೆ ಆದ ನಂತರದಲ್ಲಿ ಬೇಸರ ಮಾಡಿಕೊಂಡವರೆಷ್ಟೋ. ಈಗ ಬಾಲಿವುಡ್​ ನಟಿಯೊಬ್ಬರು ವಿರಾಟ್​ ಅವರ ಮೇಲಿದ್ದ ಹುಚ್ಚು ಪ್ರೀತಿ ಬಗ್ಗೆ ಹೇಳಿಕೊಂಡಿದ್ದಾರೆ.

ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ಮೃಣಾಲ್​ ಠಾಕೂರ್​ ಹೀಗೊಂದು ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ವಿರಾಟ್​ ಕೊಹ್ಲಿ ಮೇಲಿದ್ದ ಪ್ರೀತಿ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.

‘ಸೂಪರ್​ 30’, ‘ಬಾಟ್ಲಾ ಹೌಸ್​’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ ಮೃಣಾಲ್. ಅವರಿಗೆ ಕ್ರಿಕೆಟ್​ ಎಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕೊಹ್ಲಿ ಕಂಡರೆ ಅವರಿಗೆ ಅಚ್ಚುಮೆಚ್ಚು. ‘ನನಗೆ ವಿರಾಟ್ ಮೇಲೆ ಹುಚ್ಚು ಪ್ರೀತಿ ಇತ್ತು. ನನ್ನ ಸಹೋದರನ ಜತೆ ಕ್ರಿಕೆಟ್​ ನೋಡೋಕೆ ಸ್ಟೇಡಿಯಮ್​ಗೆ ಹೋಗುತ್ತಿದ್ದೆ’ ಎಂದಿದ್ದಾರೆ.

ತೆಲುಗಿನ ‘ಜೆರ್ಸಿ’ ಸಿನಿಮಾ ಹಿಂದಿಗೆ ರಿಮೇಕ್​ ಆಗುತ್ತಿದೆ. ಶಾಹಿದ್​ ಕಪೂರ್​ ಸಿನಿಮಾದ ಹೀರೋ. ಈ ಚಿತ್ರಕ್ಕೆ ಮೃಣಾಲ್​ ನಾಯಕಿ. ಈ ಬಗ್ಗೆಯೂ ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ‘ಸ್ಟೇಡಿಯಮ್​ನಲ್ಲಿ ನಿಂತು ಕ್ರಿಕೆಟ್​ ನೋಡೋದು ಖುಷಿಯ ವಿಚಾರವಾಗಿತ್ತು. ಕ್ರಿಕೆಟ್​ ಎಂದರೆ ಎಲ್ಲಿಲ್ಲದ ಪ್ರೀತಿ ಆಗಿತ್ತು. ಈಗ ಕ್ರಿಕೆಟ್​ನ ಕಥೆ ಹೊಂದಿರುವ ಸಿನಿಮಾದ ಭಾಗವಾಗುತ್ತಿರುವುದಕ್ಕೆ ಖುಷಿ ಇದೆ’ ಎಂದಿದ್ದಾರೆ ಮೃಣಾಲ್.

ಗೌತಮ್​ ಅವರು ‘ಜೆರ್ಸಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ದೀಪಾವಳಿ ಪ್ರಯುಕ್ತ ನವೆಂಬರ್​ 5ರಂದು ಸಿನಿಮಾ ತೆರೆಗೆ ಬರುವ ನಿರಿಕ್ಷೆ ಇದೆ. ಇದಲ್ಲದೆ, ತಮಿಳು ಸಿನಿಮಾ ‘ತಾಡಮ್​’ ಹಿಂದಿ ರಿಮೇಕ್​ನಲ್ಲೂ ಅವರು ನಟಿಸುತ್ತಿದ್ದಾರೆ.

ಇದನ್ನೂ ಓದಿ:  IND vs ENG: ಓಲ್ಡ್ ಟ್ರಾಫರ್ಡ್ ಮೈದಾನವೆಂದರೆ ಕೊಹ್ಲಿ ಬಳಗ ಹೆದರುವುದ್ಯಾಕೆ? ಇಲ್ಲಿ ಗೆಲ್ಲುವುದು ಸುಲಭದ ಮಾತಲ್ಲ!

 ತೆರೆಮೇಲೆ ದಾದಾಗಿರಿ: ಯಾರಾಗಲಿದ್ದಾರೆ ಸೌರವ್ ಗಂಗೂಲಿ ಚಿತ್ರದ ನಾಯಕ?

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?