AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಾಂಕಾ ಟ್ರಂಪ್​ಗೆ ಅಮಿತಾಭ್​ ಬಚ್ಚನ್​ನ ಪರಿಚಯಿಸಿದ ಮುಕೇಶ್ ಅಂಬಾನಿ

ಅಮಿತಾಭ್ ಬಚ್ಚನ್ ಅವರು ಉದ್ಯಮಿ ಮುಕೇಶ್ ಅಂಬಾನಿಯ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಇವಾಂಕಾಗೆ ಅಮಿತಾಭ್ ಬಚ್ಚನ್ ಅವರನ್ನು ಪರಿಚಯಿಸಿದ್ದಾರೆ ಮುಕೇಶ್. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇವಾಂಕಾ ಟ್ರಂಪ್​ಗೆ ಅಮಿತಾಭ್​ ಬಚ್ಚನ್​ನ ಪರಿಚಯಿಸಿದ ಮುಕೇಶ್ ಅಂಬಾನಿ
ಅಮಿತಾಭ್
Follow us
ರಾಜೇಶ್ ದುಗ್ಗುಮನೆ
|

Updated on: Mar 04, 2024 | 7:37 AM

ಅನಂತ್ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚಂಟ್ ವಿವಾಹ ಪೂರ್ವ ಕಾರ್ಯಕ್ರಮಗಳು ಜಾಮ್​ನಗರದಲ್ಲಿ ನಡೆದಿವೆ. ಈ ಕಾರ್ಯಕ್ರಮಕ್ಕೆ ದೇಶ ವಿದೇಶದಿಂದ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಸಂಪೂರ್ಣ ಬಾಲಿವುಡ್ ಕಾರ್ಯಕ್ರಮದಲ್ಲಿ ಭಾಗಿ ಆಗಿದೆ. ಭಾನುವಾರದ (ಮಾರ್ಚ್ 4) ಕಾರ್ಯಕ್ರಮಕ್ಕೆ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್, ಜಯಾ ಬಚ್ಚನ್, ಶ್ವೇತಾ ಬಚ್ಚನ್ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇವರು ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದೆ.

ಅಮಿತಾಭ್ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಉದ್ಯಮಿ ಮುಕೇಶ್ ಅಂಬಾನಿಯ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅಮಿತಾಭ್ ಬಚ್ಚನ್ ಅವರನ್ನು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಇವಾಂಕಾಗೆ ಪರಿಚಯಿಸಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಮೆರಿಕದ ಗಾಯಕ ಏಕಾನ್ ಅವರು ಜಾಮ್​ನಗರ್​ಗೆ ತೆರಳಿದ್ದಾರೆ. ಅವರು ಕೂಡ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಆಮಿರ್ ಖಾನ್, ಆಲಿಯಾ ಭಟ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ವರುಣ್ ಧವನ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

View this post on Instagram

A post shared by Voompla (@voompla)

View this post on Instagram

A post shared by Voompla (@voompla)

ವಿಚ್ಛೇದನ ವಿಚಾರ

ಅಭಿಷೇಕ್ ಹಾಗೂ ಐಶ್ವರ್ಯಾ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಲೇ ಇದೆ. ಈ ವಿಚಾರ ಸುಳ್ಳು ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಅನಂತ್ ಅಂಬಾನಿ ಮದುವೆ ಪೂರ್ವ ಕಾರ್ಯಕ್ರಮಕ್ಕೆ ಇವರು ಒಟ್ಟಾಗಿ ಆಗಮಿಸಿದ್ದಾರೆ. ಈ ಮೂಲಕ ಹುಟ್ಟಿಕೊಂಡಿದ್ದ ಎಲ್ಲಾ ವದಂತಿಗಳಿಗೆ ಸ್ಪಷ್ಟನೆ ಸಿಕ್ಕಂತೆ ಆಗಿದೆ. ಈ ಮೊದಲು ಪ್ರೋ ಕಬ್ಬಡಿ ಕಾರ್ಯಕ್ರಮದಲ್ಲೂ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ:  ಶೀಘ್ರವೇ ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ವಿಚ್ಛೇದನ? ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಹಲವು ಕಾಲ ಪ್ರೀತಿಸಿ ಮದುವೆ ಆದರು. ಆ ಬಳಿಕ ಅವರು ಹಾಯಾಗಿ ಸಂಸಾರ ನಡೆಸಿದ್ದಾರೆ. ಇವರಿಗೆ ಆರಾಧ್ಯಾ ಹೆಸರಿನ ಮಗಳು ಇದ್ದಾಳೆ. ಅವಳು ಸದ್ಯ ಶಿಕ್ಷಣದ ಬಗ್ಗೆ ಗಮನ ನೀಡುತ್ತಿದ್ದಾಳೆ. ಶೀಘ್ರವೇ ಅವಳು ಚಿತ್ರರಂಗಕ್ಕೆ ಬಂದರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು