AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆತ್ತಲೆಯಾದ ನಟ ಶಕ್ತಿಮಾನ್​ ಆಗೋದು ಬೇಡ’: ಖಡಕ್​ ಆಗಿ ಹೇಳಿದ ಮುಖೇಶ್​ ಖನ್ನಾ

ದೊಡ್ಡ ಬಜೆಟ್​ನಲ್ಲಿ ‘ಶಕ್ತಿಮಾನ್​’ ಸಿನಿಮಾ ಸಿದ್ಧವಾಗಲಿದೆ. ಆ ಸಿನಿಮಾದಲ್ಲಿ ಯಾರು ಶಕ್ತಿಮಾನ್​ ಪಾತ್ರ ಮಾಡುತ್ತಾರೆ ಎಂಬ ಬಗ್ಗೆ ಗಾಸಿಪ್ ಹಬ್ಬಿದೆ. ರಣವೀರ್​ ಸಿಂಗ್​ ಆಯ್ಕೆ ಆಗಿದ್ದಾರೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಆದರೆ ಆ ಸುದ್ದಿಯನ್ನು ಮುಖೇಶ್​ ಖನ್ನಾ ತಳ್ಳಿ ಹಾಕಿದ್ದಾರೆ. ತಾವು ಆ ನಟನನ್ನು ಆಯ್ಕೆ ಮಾಡಿಲ್ಲ ಎಂದು ಮುಖೇಶ್​ ಖನ್ನಾ ತಿಳಿಸಿದ್ದಾರೆ.

‘ಬೆತ್ತಲೆಯಾದ ನಟ ಶಕ್ತಿಮಾನ್​ ಆಗೋದು ಬೇಡ’: ಖಡಕ್​ ಆಗಿ ಹೇಳಿದ ಮುಖೇಶ್​ ಖನ್ನಾ
ರಣವೀರ್​ ಸಿಂಗ್​, ಮುಖೇಶ್​ ಖನ್ನಾ
ಮದನ್​ ಕುಮಾರ್​
|

Updated on: Mar 18, 2024 | 3:38 PM

Share

ಭಾರತೀಯ ಕಿರುತೆರೆಯಲ್ಲಿ ‘ಶಕ್ತಿಮಾನ್​’ (Shaktimaan) ಪಾತ್ರವನ್ನು ಮಾಡುವ ಮೂಲಕ ಜನಮನ ಗೆದ್ದ ಮುಖೇಶ್​ ಖನ್ನಾ (Mukesh Khanna) ಅವರು ಈಗ ಅದೇ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ. ಸಿನಿಮಾದಲ್ಲಿ ಯಾರು ಶಕ್ತಿಮಾನ್​ ಪಾತ್ರ ಮಾಡುತ್ತಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅಷ್ಟರಲ್ಲಾಗಲೇ ಕೆಲವು ಮಾಧ್ಯಮಗಳು ರಣವೀರ್​ ಸಿಂಗ್​ ಹೆಸರನ್ನು ಎಳೆದುತಂದಿವೆ. ಆದರೆ ಆ ಸುದ್ದಿ ಸುಳ್ಳು ಎಂದು ಮುಖೇಶ್​ ಖನ್ನಾ ಸ್ಪಷ್ಟಪಡಿಸಿದ್ದಾರೆ. ತಾವು ಶಕ್ತಿಮಾನ್​ ಪಾತ್ರಕ್ಕೆ ರಣವೀರ್​ ಸಿಂಗ್​ (Ranveer Singh) ಅವರನ್ನು ಆಯ್ಕೆ ಮಾಡಿಲ್ಲ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ.

‘ಶಕ್ತಿಮಾನ್​ ಪಾತ್ರವನ್ನು ರಣವೀರ್​ ಸಿಂಗ್​ ಮಾಡುತ್ತಾರೆ ಎಂಬ ಸುದ್ದಿ ಸೋಶಿಯಲ್​ ಮೀಡಿಯಾದಲ್ಲಿ ಇತ್ತು. ಎಲ್ಲರೂ ಅದರಿಂದ ಕೋಪಗೊಂಡಿದ್ದರು. ನಾನು ಮೌನವಾಗಿದ್ದೆ. ಆದರೆ ಈ ಸಿನಿಮಾಗೆ ರಣವೀರ್​ ಸಿಂಗ್​ ಸಹಿ ಮಾಡಿದ್ದಾರೆ ಎಂದು ಟಿವಿ ವಾಹಿನಿಗಳು ಕೂಡ ಸುದ್ದಿ ಪ್ರಸಾರ ಮಾಡಲು ಶುರುಮಾಡಿದವು. ಆಗ ನಾನು ಮಾತನಾಡಬೇಕಾಯಿತು. ರಣವೀರ್​ ಸಿಂಗ್​ ಎಷ್ಟೇ ದೊಡ್ಡ ಸ್ಟಾರ್​ ಆಗಿರಬಹುದು. ಆದರೆ ಇಂಥ ಇಮೇಜ್​ ಇರುವ ವ್ಯಕ್ತಿ ಶಕ್ತಿಮಾನ್​ ಆಗಲಾರ. ಮುಂದೇನಾಗುತ್ತೋ ನೋಡೋಣ’ ಎಂದಿದ್ದಾರೆ ಮುಖೇಶ್​ ಖನ್ನಾ.

ಇದನ್ನೂ ಓದಿ: ‘ಶಕ್ತಿಮಾನ್​’ ಸಿನಿಮಾ ಬಜೆಟ್​ 300 ಕೋಟಿ ರೂಪಾಯಿ; ಕೆಲಸ ತಡ ಆಗಿದ್ದಕ್ಕೆ ಕಾರಣ ತಿಳಿಸಿದ ಮುಕೇಶ್​ ಖನ್ನಾ

ರಣವೀರ್​ ಸಿಂಗ್​ ಬೇಡವೇ ಬೇಡ ಎಂದು ಮುಖೇಶ್​ ಖನ್ನಾ ಅವರು ಹಠ ಹಿಡಿಯಲು ಕಾರಣ ಕೂಡ ಇದೆ. ಈ ಹಿಂದೆ ರಣವೀರ್​ ಸಿಂಗ್​ ಅವರು ಬೆತ್ತಲೆ ಫೋಟೋಶೂಟ್​ ಮಾಡಿಸಿದ್ದರು. ಅದನ್ನು ಮುಖೇಶ್​ ಖನ್ನಾ ಖಂಡಿಸಿದ್ದಾರೆ. ಈ ರೀತಿ ಬೆತ್ತಲೆಯಾಗಿ ನಟಿಸುವುದು ಭಾರತದ ಸಂಸ್ಕೃತಿ ಅಲ್ಲ ಎಂದು ಅವರು ಛಾಟಿ ಬೀಸಿದ್ದಾರೆ. ‘ಬೆತ್ತಲೆಯಾಗಿ ಕಾಣಿಸಿಕೊಳ್ಳುವುದು ಅವರಿಗೆ ಸರಿ ಎನಿಸಿದರೆ ಅಂತಹ ದೇಶಕ್ಕೆ ಹೋಗಲಿ. ಅಲ್ಲಿ ಪ್ರತಿ ಮೂರನೇ ಒಂದು ದೃಶ್ಯದಲ್ಲಿ ಬೆತ್ತಲೆಯಾಗಿ ನಟಿಸಬಹುದು’ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ.

ಮುಖೇಶ್​ ಖನ್ನಾ ಇನ್​ಸ್ಟಾಗ್ರಾಮ್​ ಪೋಸ್ಟ್​:

‘ನಿಮ್ಮ ಪೈಪೋಟಿ ಇರುವುದು ಸೂಪರ್​ ಮ್ಯಾನ್​, ಸ್ಪೈಡರ್​ ಮ್ಯಾನ್​ ವಿರುದ್ಧ ಅಲ್ಲ ಎಂದು ನಾನು ನಿರ್ಮಾಪಕರಿಗೆ ಹೇಳಿದ್ದೇನೆ. ಶಕ್ತಿಮಾನ್​ ಎಂದರೆ ಕೇವಲ ಸೂಪರ್​ ಹೀರೋ ಮಾತ್ರ ಅಲ್ಲ. ಅವನು ಸೂಪರ್​ ಟೀಚರ್​ ಕೂಡ ಹೌದು. ಆ ಪಾತ್ರವನ್ನು ಮಾಡುವ ನಟನಿಗೆ ಅಂಥ ಗುಣ ಇರಬೇಕು. ಅವನು ಹೇಳಿದರೆ ಜನರು ಕೇಳುವಂತಿರಬೇಕು. ದೊಡ್ಡ ಸ್ಟಾರ್​ಗಳು ಸಾಕಷ್ಟು ಮಂದಿ ಇದ್ದಾರೆ. ಆದರೆ ಅವರ ಇಮೇಜ್​ ಅಡ್ಡ ಬರುತ್ತದೆ’ ಎಂಬುದು ಮುಖೇಶ್​ ಖನ್ನಾ ಅವರ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ