Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆತ್ತಲೆಯಾದ ನಟ ಶಕ್ತಿಮಾನ್​ ಆಗೋದು ಬೇಡ’: ಖಡಕ್​ ಆಗಿ ಹೇಳಿದ ಮುಖೇಶ್​ ಖನ್ನಾ

ದೊಡ್ಡ ಬಜೆಟ್​ನಲ್ಲಿ ‘ಶಕ್ತಿಮಾನ್​’ ಸಿನಿಮಾ ಸಿದ್ಧವಾಗಲಿದೆ. ಆ ಸಿನಿಮಾದಲ್ಲಿ ಯಾರು ಶಕ್ತಿಮಾನ್​ ಪಾತ್ರ ಮಾಡುತ್ತಾರೆ ಎಂಬ ಬಗ್ಗೆ ಗಾಸಿಪ್ ಹಬ್ಬಿದೆ. ರಣವೀರ್​ ಸಿಂಗ್​ ಆಯ್ಕೆ ಆಗಿದ್ದಾರೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಆದರೆ ಆ ಸುದ್ದಿಯನ್ನು ಮುಖೇಶ್​ ಖನ್ನಾ ತಳ್ಳಿ ಹಾಕಿದ್ದಾರೆ. ತಾವು ಆ ನಟನನ್ನು ಆಯ್ಕೆ ಮಾಡಿಲ್ಲ ಎಂದು ಮುಖೇಶ್​ ಖನ್ನಾ ತಿಳಿಸಿದ್ದಾರೆ.

‘ಬೆತ್ತಲೆಯಾದ ನಟ ಶಕ್ತಿಮಾನ್​ ಆಗೋದು ಬೇಡ’: ಖಡಕ್​ ಆಗಿ ಹೇಳಿದ ಮುಖೇಶ್​ ಖನ್ನಾ
ರಣವೀರ್​ ಸಿಂಗ್​, ಮುಖೇಶ್​ ಖನ್ನಾ
Follow us
ಮದನ್​ ಕುಮಾರ್​
|

Updated on: Mar 18, 2024 | 3:38 PM

ಭಾರತೀಯ ಕಿರುತೆರೆಯಲ್ಲಿ ‘ಶಕ್ತಿಮಾನ್​’ (Shaktimaan) ಪಾತ್ರವನ್ನು ಮಾಡುವ ಮೂಲಕ ಜನಮನ ಗೆದ್ದ ಮುಖೇಶ್​ ಖನ್ನಾ (Mukesh Khanna) ಅವರು ಈಗ ಅದೇ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ. ಸಿನಿಮಾದಲ್ಲಿ ಯಾರು ಶಕ್ತಿಮಾನ್​ ಪಾತ್ರ ಮಾಡುತ್ತಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅಷ್ಟರಲ್ಲಾಗಲೇ ಕೆಲವು ಮಾಧ್ಯಮಗಳು ರಣವೀರ್​ ಸಿಂಗ್​ ಹೆಸರನ್ನು ಎಳೆದುತಂದಿವೆ. ಆದರೆ ಆ ಸುದ್ದಿ ಸುಳ್ಳು ಎಂದು ಮುಖೇಶ್​ ಖನ್ನಾ ಸ್ಪಷ್ಟಪಡಿಸಿದ್ದಾರೆ. ತಾವು ಶಕ್ತಿಮಾನ್​ ಪಾತ್ರಕ್ಕೆ ರಣವೀರ್​ ಸಿಂಗ್​ (Ranveer Singh) ಅವರನ್ನು ಆಯ್ಕೆ ಮಾಡಿಲ್ಲ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ.

‘ಶಕ್ತಿಮಾನ್​ ಪಾತ್ರವನ್ನು ರಣವೀರ್​ ಸಿಂಗ್​ ಮಾಡುತ್ತಾರೆ ಎಂಬ ಸುದ್ದಿ ಸೋಶಿಯಲ್​ ಮೀಡಿಯಾದಲ್ಲಿ ಇತ್ತು. ಎಲ್ಲರೂ ಅದರಿಂದ ಕೋಪಗೊಂಡಿದ್ದರು. ನಾನು ಮೌನವಾಗಿದ್ದೆ. ಆದರೆ ಈ ಸಿನಿಮಾಗೆ ರಣವೀರ್​ ಸಿಂಗ್​ ಸಹಿ ಮಾಡಿದ್ದಾರೆ ಎಂದು ಟಿವಿ ವಾಹಿನಿಗಳು ಕೂಡ ಸುದ್ದಿ ಪ್ರಸಾರ ಮಾಡಲು ಶುರುಮಾಡಿದವು. ಆಗ ನಾನು ಮಾತನಾಡಬೇಕಾಯಿತು. ರಣವೀರ್​ ಸಿಂಗ್​ ಎಷ್ಟೇ ದೊಡ್ಡ ಸ್ಟಾರ್​ ಆಗಿರಬಹುದು. ಆದರೆ ಇಂಥ ಇಮೇಜ್​ ಇರುವ ವ್ಯಕ್ತಿ ಶಕ್ತಿಮಾನ್​ ಆಗಲಾರ. ಮುಂದೇನಾಗುತ್ತೋ ನೋಡೋಣ’ ಎಂದಿದ್ದಾರೆ ಮುಖೇಶ್​ ಖನ್ನಾ.

ಇದನ್ನೂ ಓದಿ: ‘ಶಕ್ತಿಮಾನ್​’ ಸಿನಿಮಾ ಬಜೆಟ್​ 300 ಕೋಟಿ ರೂಪಾಯಿ; ಕೆಲಸ ತಡ ಆಗಿದ್ದಕ್ಕೆ ಕಾರಣ ತಿಳಿಸಿದ ಮುಕೇಶ್​ ಖನ್ನಾ

ರಣವೀರ್​ ಸಿಂಗ್​ ಬೇಡವೇ ಬೇಡ ಎಂದು ಮುಖೇಶ್​ ಖನ್ನಾ ಅವರು ಹಠ ಹಿಡಿಯಲು ಕಾರಣ ಕೂಡ ಇದೆ. ಈ ಹಿಂದೆ ರಣವೀರ್​ ಸಿಂಗ್​ ಅವರು ಬೆತ್ತಲೆ ಫೋಟೋಶೂಟ್​ ಮಾಡಿಸಿದ್ದರು. ಅದನ್ನು ಮುಖೇಶ್​ ಖನ್ನಾ ಖಂಡಿಸಿದ್ದಾರೆ. ಈ ರೀತಿ ಬೆತ್ತಲೆಯಾಗಿ ನಟಿಸುವುದು ಭಾರತದ ಸಂಸ್ಕೃತಿ ಅಲ್ಲ ಎಂದು ಅವರು ಛಾಟಿ ಬೀಸಿದ್ದಾರೆ. ‘ಬೆತ್ತಲೆಯಾಗಿ ಕಾಣಿಸಿಕೊಳ್ಳುವುದು ಅವರಿಗೆ ಸರಿ ಎನಿಸಿದರೆ ಅಂತಹ ದೇಶಕ್ಕೆ ಹೋಗಲಿ. ಅಲ್ಲಿ ಪ್ರತಿ ಮೂರನೇ ಒಂದು ದೃಶ್ಯದಲ್ಲಿ ಬೆತ್ತಲೆಯಾಗಿ ನಟಿಸಬಹುದು’ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ.

ಮುಖೇಶ್​ ಖನ್ನಾ ಇನ್​ಸ್ಟಾಗ್ರಾಮ್​ ಪೋಸ್ಟ್​:

‘ನಿಮ್ಮ ಪೈಪೋಟಿ ಇರುವುದು ಸೂಪರ್​ ಮ್ಯಾನ್​, ಸ್ಪೈಡರ್​ ಮ್ಯಾನ್​ ವಿರುದ್ಧ ಅಲ್ಲ ಎಂದು ನಾನು ನಿರ್ಮಾಪಕರಿಗೆ ಹೇಳಿದ್ದೇನೆ. ಶಕ್ತಿಮಾನ್​ ಎಂದರೆ ಕೇವಲ ಸೂಪರ್​ ಹೀರೋ ಮಾತ್ರ ಅಲ್ಲ. ಅವನು ಸೂಪರ್​ ಟೀಚರ್​ ಕೂಡ ಹೌದು. ಆ ಪಾತ್ರವನ್ನು ಮಾಡುವ ನಟನಿಗೆ ಅಂಥ ಗುಣ ಇರಬೇಕು. ಅವನು ಹೇಳಿದರೆ ಜನರು ಕೇಳುವಂತಿರಬೇಕು. ದೊಡ್ಡ ಸ್ಟಾರ್​ಗಳು ಸಾಕಷ್ಟು ಮಂದಿ ಇದ್ದಾರೆ. ಆದರೆ ಅವರ ಇಮೇಜ್​ ಅಡ್ಡ ಬರುತ್ತದೆ’ ಎಂಬುದು ಮುಖೇಶ್​ ಖನ್ನಾ ಅವರ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ