AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ-ಝಹೀರ್ ಮದುವೆಯನ್ನು ಲವ್ ಜಿಹಾದ್ ಎಂದವರಿಗೆ ಶಕ್ತಿಮಾನ್ ನಟನ ತಿರುಗೇಟು

ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್ ಇಖ್ಬಾಲ್​ ಅವರು ಅಂತರ್​ಧರ್ಮೀಯ ವಿವಾಹ ಮಾಡಿಕೊಂಡಿದ್ದಾರೆ. ಹಾಗಾಗಿ ಇದನ್ನು ಲವ್​ ಜಿಹಾದ್​ ಎಂದು ಕೆಲವರು ಟೀಕೆ ಮಾಡಿದ್ದಾರೆ. ಈ ಕುರಿತು ನಟ ಮುಖೇಶ್​ ಖನ್ನಾ ಅವರು ಪ್ರತಿಕ್ರಿಯಿಸಿದ್ದಾರೆ. ಈ ಮದುವೆಯನ್ನು ಲವ್​ ಜಿಹಾದ್ ಅಂತ ಕರೆಯುವುದು ಸರಿಯಲ್ಲ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನೂ ಅವರು ವಿವರಿಸಿದ್ದಾರೆ.

ಸೋನಾಕ್ಷಿ-ಝಹೀರ್ ಮದುವೆಯನ್ನು ಲವ್ ಜಿಹಾದ್ ಎಂದವರಿಗೆ ಶಕ್ತಿಮಾನ್ ನಟನ ತಿರುಗೇಟು
ಮುಖೇಶ್​ ಖನ್ನಾ, ಸೋನಾಕ್ಷಿ ಸಿನ್ಹಾ, ಝಹೀರ್​ ಇಖ್ಬಾಲ್​
ಮದನ್​ ಕುಮಾರ್​
|

Updated on: Jul 07, 2024 | 6:00 PM

Share

ನಟಿ ಸೋನಾಕ್ಷಿ ಸಿನ್ಹಾ ಅವರು ಕೆಲವೇ ದಿನಗಳ ಹಿಂದೆ ನಟ ಝಹೀರ್​ ಇಖ್ಬಾಲ್​ ಜೊತೆ ಮದುವೆ ಆದರು. ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದ ಅವರು ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಆಯ್ಕೆಯ ಬಗ್ಗೆ ಅವರಿಗಾಗಲೀ, ಅವರ ಕುಟುಂಬಕ್ಕಾಗಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಈ ಮದುವೆ ಬಗ್ಗೆ ತರಕಾರು ತೆಗೆದಿದ್ದಾರೆ. ಯಾಕೆಂದರೆ, ಸೋನಾಕ್ಷಿ ಸಿನ್ಹಾ ಮತ್ತು ಝಹೀರ್​ ಇಖ್ಬಾಲ್​ ಅವರದ್ದು ಬೇರೆ ಬೇರೆ ಧರ್ಮ. ಹಾಗಾಗಿ ಅನೇಕರು ಇದನ್ನು ಲವ್​ ಜಿಹಾದ್​ ಎಂದು ಕರೆದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ‘ಶಕ್ತಿಮಾನ್​’ ಸೀರಿಯಲ್​ ಖ್ಯಾತಿಯ ನಟ ಮುಖೇಶ್​ ಖನ್ನಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮುಖೇಶ್​ ಖನ್ನಾ ಅವರು ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್​ ಇಖ್ಬಾಲ್​ ಮದುವೆಯ ಕುರಿತು ಮಾತನಾಡಿದ್ದಾರೆ. ‘ಸೋನಾಕ್ಷಿ ಹಾಗೂ ಝಹೀರ್​ ಮದುವೆಯನ್ನು ಹಿಂದು-ಮುಸ್ಲಿಂ ದೃಷ್ಟಿಯಲ್ಲಿ ನೋಡಬೇಡಿ. ಸೋನಾಕ್ಷಿ ಸಡನ್​ ಆಗಿ ಈ ನಿರ್ಧಾರ ತೆಗೆದುಕೊಳ್ಳಲಿಲ್ಲ. ಅವರು ಮದುವೆ ಆಗುವುದಕ್ಕೂ ಮುನ್ನ 6-7 ವರ್ಷಗಳ ಕಾಲ ಜೊತೆಯಾಗಿ ವಾಸಿಸಿದ್ದಾರೆ. ಜನರು ಇದನ್ನು ಲವ್​ ಜಿಹಾದ್​ ಎನ್ನುತ್ತಿದ್ದಾರೆ. ಬಲವಂತವಾಗಿ ಹುಡುಗಿಯ ಮದುವೆ ಮಾಡಿಸಿದರೆ ಅದು ಲವ್​ ಜಿಹಾದ್​ ಆಗುತ್ತದೆ’ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ.

‘ಹಿಂದು ಮತ್ತು ಮುಸ್ಲಿಂ ಮದುವೆ ಆಗಬಾರದೇ? ನಮ್ಮ ಕಾಲದಲ್ಲಿ ಅನೇಕರು ಈ ರೀತಿ ಮದುವೆ ಆಗಿದ್ದಾರೆ ಹಾಗೂ ಅವರು ಖುಷಿಯಾಗಿ ಇದ್ದಾರೆ. ಈ ಮದುವೆ ಅವರ ಕುಟುಂಬಕ್ಕೆ ಸಂಬಂಧಪಟ್ಟ ವಿಚಾರ’ ಎಂದಿದ್ದಾರೆ ಮುಖೇಶ್​ ಖನ್ನಾ. ಈ ಮೊದಲು ಬೇರೆ ನಟ-ನಟಿಯರು ಅಂತರ್​ಧರ್ಮೀಯ ವಿವಾಹ ಆಗಾದಲೂ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಟೀಕೆ ಮಾಡಿದ್ದರು.

ಇದನ್ನೂ ಓದಿ: ಸೋನಾಕ್ಷಿ ರಿಸೆಪ್ಷನ್​ಗೆ ಅತಿಥಿಗಳಂತೆ ರೆಡಿ ಆಗಿ ಬಂದ ಫ್ಯಾನ್ಸ್; ಮುಂದಾಗಿದ್ದು ಮಾತ್ರ ದುರಂತ

ಬಾಲಿವುಡ್​ನಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್​ ಇಖ್ಬಾಲ್ ಅವರು ಬ್ಯುಸಿ ಆಗಿದ್ದಾರೆ. ಮದುವೆ ಆದ ಬಳಿಕ ಎರಡೇ ದಿನದಲ್ಲಿ ಸೋನಾಕ್ಷಿ ಸಿನ್ಹಾ ಅವರು ಆಸ್ಪತ್ರೆಗೆ ತೆರಳಿದ್ದರು. ಇದರಿಂದ ಅವರ ಬಗ್ಗೆ ಒಂದು ಗಾಸಿಪ್​ ಹಬ್ಬಿತ್ತು. ಅವರು ಪ್ರೆಗ್ನೆಂಟ್​ ಆಗಿರುವುದರಿಂದ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಗಾಳಿಸುದ್ದಿ ಹಬ್ಬಿಸಲಾಗಿತ್ತು. ಆದರೆ ಅಸಲಿ ವಿಷಯ ಬೇರೆಯೇ ಇದೆ. ಸೋನಾಕ್ಷಿ ಸಿನ್ಹಾ ತಂದೆ ಶತ್ರುಘ್ನ ಸಿನ್ಹಾಗೆ ಅನಾರೋಗ್ಯ ಉಂಟಾಗಿತ್ತು. ಅದಕ್ಕಾಗಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಂದೆಯನ್ನು ನೋಡಲು ಸೋನಾಕ್ಷಿ ಸಿನ್ಹಾ ಅವರು ಆಸ್ಪತ್ರೆಗೆ ಬಂದಿದ್ದರು ಎಂಬುದು ನಂತರ ಗೊತ್ತಾಯಿತು. ಅಲ್ಲದೇ ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸೋನಾಕ್ಷಿ ಅವರು, ತಾವು ಪ್ರೆಗ್ನೆಂಟ್​ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ