AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​Mukesh Khanna: ‘ಶಕ್ತಿಮಾನ್​’ ಸಿನಿಮಾ ಬಜೆಟ್​ 300 ಕೋಟಿ ರೂಪಾಯಿ; ಕೆಲಸ ತಡ ಆಗಿದ್ದಕ್ಕೆ ಕಾರಣ ತಿಳಿಸಿದ ಮುಕೇಶ್​ ಖನ್ನಾ

Shaktimaan Movie: ‘ಇದು ದೊಡ್ಡ ಸಿನಿಮಾ ಆದ್ದರಿಂದ ಸಮಯ ಹಿಡಿಯುತ್ತದೆ. ತುಂಬಾ ಬೆಳವಣಿಗೆಗಳು ನಡೆಯುತ್ತಿವೆ’ ಎಂದು ಮುಕೇಶ್​ ಖನ್ನಾ ಹೇಳಿದ್ದಾರೆ.

​Mukesh Khanna: ‘ಶಕ್ತಿಮಾನ್​’ ಸಿನಿಮಾ ಬಜೆಟ್​ 300 ಕೋಟಿ ರೂಪಾಯಿ; ಕೆಲಸ ತಡ ಆಗಿದ್ದಕ್ಕೆ ಕಾರಣ ತಿಳಿಸಿದ ಮುಕೇಶ್​ ಖನ್ನಾ
ಮುಕೇಶ್​ ಖನ್ನಾ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Jun 06, 2023 | 6:27 AM

ಕಿರುತೆರೆಯಲ್ಲಿ ಪ್ರಸಾರವಾದ ‘ಶಕ್ತಿಮಾನ್​’ ಧಾರಾವಾಹಿಯನ್ನು(​Shaktimaan Serial) ಮರೆಯಲು ಸಾಧ್ಯವಿಲ್ಲ. ಈ ಸೀರಿಯಲ್​ನಲ್ಲಿ ಮುಕೇಶ್​ ಖನ್ನಾ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದರು. ಇಂಡಿಯನ್​ ಸೂಪರ್​ ಹೀರೋ ಆಗಿ ಅವರು ಮಿಂಚಿದ್ದರು. ಮಕ್ಕಳಿಗಂತೂ ‘ಶಕ್ತಿಮಾನ್​’ ಎಂದರೆ ಅಚ್ಚುಮೆಚ್ಚು. ಆತನ ಸಾಹಸಗಳು ಒಂದೆರಡಲ್ಲ. ಇಷ್ಟೆಲ್ಲ ಛಾಪು ಮೂಡಿಸಿರುವ ಈ ದೇಸಿ ಸೂಪರ್​ ಹೀರೋ ಪಾತ್ರವನ್ನೇ ಮುಖ್ಯವಾಗಿ ಇಟ್ಟುಕೊಂಡು ಸಿನಿಮಾ (Shaktimaan Movie) ಸಿದ್ಧವಾಗುತ್ತಿದೆ. ಆ ಕುರಿತು ಬಹಳ ಹಿಂದೆಯೇ ಮಾಹಿತಿ ಹಂಚಿಕೊಳ್ಳಲಾಗಿತ್ತು. ಆದರೂ ಕೂಡ ‘ಶಕ್ತಿಮಾನ್​’ ಸಿನಿಮಾ ಸೆಟ್ಟೇರಲು ವಿಳಂಬ ಆಗುತ್ತಿವೆ. ಅದಕ್ಕೆ ಕಾರಣ ಏನು ಎಂಬುದನ್ನು ಮುಕೇಶ್​ ಖನ್ನಾ (​Mukesh Khanna) ತಿಳಿಸಿದ್ದಾರೆ. ಯೂಟ್ಯೂಬ್​ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಇದು ತುಂಬ ದೊಡ್ಡ ಸಿನಿಮಾ ಆಗಲಿದೆ. ಇದರ ಬಜೆಟ್​ 200-300 ಕೋಟಿ ರೂಪಾಯಿ. ‘ಸ್ಪೈಡರ್​ ಮ್ಯಾನ್​’ ಸಿನಿಮಾ ಮಾಡಿದ್ದ ಸೋನಿ ಪಿಕ್ಚರ್ಸ್​ ಸಂಸ್ಥೆಯವರು ‘ಶಕ್ತಿಮಾನ್​’ ಸಿನಿಮಾ ಮಾಡಲಿದ್ದಾರೆ. ಆದರೆ ಸೆಟ್ಟೇರುವುದು ತಡವಾಗುತ್ತಿದೆ. ಮೊದಲು ಕೊರೊನಾ ಬಂತು. ಅದರಿಂದ ವಿಳಂಬ ಆಯಿತು’ ಎಂದು ಮುಕೇಶ್​ ಖನ್ನಾ ಹೇಳಿದ್ದಾರೆ.

ಇದನ್ನೂ ಓದಿ: ‘ಲೈಂಗಿಕ ಸಂಪರ್ಕ ಹೊಂದಬೇಕು ಎಂದು ಬರುವ ಹುಡುಗಿಯರ ನಂಬಬೇಡಿ’; ಹುಡುಗರಿಗೆ ಶಕ್ತಿಮಾನ್ ಕೊಟ್ರು ಟಿಪ್ಸ್

‘ಇದು ದೊಡ್ಡ ಸಿನಿಮಾ ಆದ್ದರಿಂದ ಸಮಯ ಹಿಡಿಯುತ್ತದೆ. ತುಂಬಾ ವಿಚಾರಗಳು ನಡೆಯುತ್ತಿವೆ. ಆದರೆ ಆ ಬಗ್ಗೆ ನಾನು ಮಾತನಾಡುವಂತಿಲ್ಲ. ನಾನು ಶಕ್ತಿಮಾನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತೇನಾ ಎಂಬುದು ದೊಡ್ಡ ಪ್ರಶ್ನೆ. ಬೇರೆ ಯಾರಾದರೂ ಶಕ್ತಿಮಾನ್​ ಪಾತ್ರ ಮಾಡುತ್ತಾರಾ? ಆ ಬಗ್ಗೆ ನಾನು ಬಾಯಿ ಬಿಡುವಂತಿಲ್ಲ. ಇದೊಂದು ಕಮರ್ಷಿಯಲ್​ ಸಿನಿಮಾ. ದುಡ್ಡಿನ ಮಾತುಕತೆ ಸಾಕಷ್ಟು ಇರುತ್ತದೆ. ಈ ಸಿನಿಮಾದಲ್ಲಿ ನಾನು ಇರುತ್ತೇನೆ. ನನ್ನನ್ನು ಬಿಟ್ಟು ಈ ಸಿನಿಮಾ ಮಾಡೋಕೆ ಆಗಲ್ಲ ಎಂಬುದು ಎಲ್ಲರಿಗೂ ಗೊತ್ತು’ ಎಂದಿದ್ದಾರೆ ಮುಕೇಶ್​ ಖನ್ನಾ.

ಇದನ್ನೂ ಓದಿ: ಬೆಳ್ಳಿತೆರೆ ಮೇಲೆ ಬರಲಿದೆ ‘ಶಕ್ತಿಮಾನ್​’ ಧಾರಾವಾಹಿ; ಹೀರೋ ಬಗ್ಗೆ ಗುಟ್ಟು ಕಾಯ್ದುಕೊಂಡ ಸೋನಿ ಪಿಕ್ಚರ್ಸ್​

ಈ ಚಿತ್ರದಲ್ಲಿ ಮುಕೇಶ್​ ಖನ್ನಾ ಇರುತ್ತಾರೆ ಎಂಬುದು ಹೌದಾದರೂ ಅವರು ಶಕ್ತಿಮಾನ್​ ವೇಷದಲ್ಲಿ ಕಾಣಿಸಿಕೊಳ್ಳುವುದಿಲ್ಲವಂತೆ. ಯಾಕೆಂದರೆ ನಿರ್ಮಾಪಕರ ನಿರ್ಧಾರವೇ ಹಾಗಿದೆ. ಪಾತ್ರವರ್ಗ ಮತ್ತು ತಾಂತ್ರಿಕ ಬಳಗದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದು ಮುಕೇಶ್​ ಖನ್ನಾ ಹೇಳಿದ್ದಾರೆ. ರಣವೀರ್​ ಸಿಂಗ್​ ಅವರು ಶಕ್ತಿಮಾನ್​ ಆಗಿ ಕಾಣಿಸಿಕೊಳ್ಳಬಹುದು ಎಂಬ ಗಾಸಿಪ್​ ಹರಿದಾಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:49 pm, Mon, 5 June 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್