AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಆರ್ಯನ್​ ಜಾಮೀನು ಅರ್ಜಿ ವಜಾ ಮಾಡಿದ ಮುಂಬೈ ಕೋರ್ಟ್​

Shah Rukh Khan: ನ್ಯಾಯಾಂಗ ಬಂಧನ ವಿಧಿಸಿದ್ದ ಕಾರಣ, ಎನ್​ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ಇತರ ಆರೋಪಿಗಳನ್ನು ಮೆಡಿಕಲ್ ಟೆಸ್ಟ್​ಗೆ ಒಳಪಡಿಸಿ ಆರ್ಥರ್ ಜೈಲಿಗೆ ಕರೆದೊಯ್ದಿದ್ದರು. ಇದೀಗ ನ್ಯಾಯಾಲಯದ ಆದೇಶದ ಅನ್ವಯ ಆರ್ಯನ್​ಗೆ ಜಾಮೀನು ಸಿಕ್ಕಿಲ್ಲ.  

Aryan Khan: ಆರ್ಯನ್​ ಜಾಮೀನು ಅರ್ಜಿ ವಜಾ ಮಾಡಿದ ಮುಂಬೈ ಕೋರ್ಟ್​
ಆರ್ಯನ್ ಖಾನ್
TV9 Web
| Edited By: |

Updated on:Oct 08, 2021 | 5:38 PM

Share

ಬಾಲಿವುಡ್​ನ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಇಂದು (ಅಕ್ಟೋಬರ್ 08) ಮುಂಬೈನ ನ್ಯಾಯಾಲಯದಲ್ಲಿ ನಡೆಯಿತು. 23 ವರ್ಷದ ಆರ್ಯನ್ ಪರ ಸತೀಶ್ ಮಾನೆಶಿಂಧೆ ವಾದ ಮಂಡಿಸಿದರು. ಈ ಕುರಿತು ತೀರ್ಪು ನೀಡಿರುವ ನ್ಯಾಯಾಲಯವು ಆರ್ಯನ್​ಗೇ ಜಾಮೀನು ನೀಡಿಲ್ಲ. 

ಗುರುವಾರ ನಡೆದಿದ್ದ ವಿಚಾರಣೆಯಲ್ಲಿ ನ್ಯಾಯಾಲಯವು ಆರ್ಯನ್ ಖಾನ್​ಗೆ ಎನ್​ಸಿಬಿ ಕಸ್ಟಡಿಯನ್ನು ವಿಸ್ತರಿಸಲು ನಿರಾಕರಿಸಿತ್ತು. ಈಗಾಗಲೇ ಅಗತ್ಯವಿದ್ದಷ್ಟು ಸಮಯವನ್ನು ಎನ್​ಸಿಬಿಗೆ ನೀಡಲಾಗಿದೆ ಎಂದು ಹೆಚ್ಚುವರಿ ಮೆಟ್ರೋಪಾಲಿಟನ್ ನ್ಯಾಯಾಧೀಶರಾದ ಆರ್​.ಎಂ.ನಿರ್ಲೇಕರ್ ತಿಳಿಸಿದ್ದರು. ನಂತರ ಅವರು ಆರ್ಯನ್ ಖಾನ್ ಸೇರಿದಂತೆ 8 ಜನರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರು. ಈಗ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿ ಊರ್ಜಿತವಲ್ಲವೆಂದು ಕೋರ್ಟ್​ ಅಭಿಪ್ರಾಯ ಪಟ್ಟಿದೆ. ಪ್ರಕರಣದ 8 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ. ಸೆಷನ್ ಕೋರ್ಟ್ ಮೊರೆ ಹೋಗಲು ಆರ್ಯನ್ ಖಾನ್ ಪರ ವಕೀಲರು ಈಗ ಚಿಂತನೆ ನಡೆಸಿದ್ದಾರೆ.  ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಕೈಲುಪುತ್ತಿದ್ದಂತೆ ಮೇಲ್ಮನವಿ ಸಲ್ಲಿಸಲು ಪ್ಲಾನ್ ರೂಪಿಸಲಾಗಿದೆ.

ನ್ಯಾಯಾಂಗ ಬಂಧನ ವಿಧಿಸಿದ್ದ ಕಾರಣ, ಎನ್​ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ಇತರ ಆರೋಪಿಗಳನ್ನು ಮೆಡಿಕಲ್ ಟೆಸ್ಟ್​ಗೆ ಒಳಪಡಿಸಿ ಆರ್ಥರ್ ಜೈಲಿಗೆ ಕರೆದೊಯ್ದಿದ್ದರು. ಇದೀಗ ನ್ಯಾಯಾಲಯದ ಆದೇಶದ ಅನ್ವಯ ಆರ್ಯನ್​ಗೆ ಜಾಮೀನು ಸಿಕ್ಕಿಲ್ಲ. ಹೀಗಾಗಿ, ಅವರು ಜೈಲಿನಲ್ಲೇ ಇರುವುದು ಅನಿವಾರ್ಯ ಆಗಿದೆ.

ಆರ್ಯನ್ ಖಾನ್​ ಸೇರಿ ಎಲ್ಲಾ ಆರೋಪಿಗಳು ಆರ್ಥರ್ ರೋಡ್​​​ ಜೈಲಿನಲ್ಲಿ 5 ದಿನಗಳ ಕಾಲ ಕ್ವಾರಂಟೈನ್ ಆಗಬೇಕಿದೆ. ಬ್ಯಾರಕ್​ ನಂಬರ್-1ರಲ್ಲಿ ಆರ್ಯನ್ ಹಾಗೂ ಮತ್ತಿತರರು ಇದ್ದಾರೆ.

ಇದನ್ನೂ ಓದಿ:

‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ

ಸಂತೋಷ್ ಚಿತ್ರಮಂದಿರದಲ್ಲಿ ತಾಂತ್ರಿಕ ಸಮಸ್ಯೆ, ಶೋ ಸ್ಥಗಿತ; ಬಿಡುಗಡೆಯ ಸಂಭ್ರಮದಲ್ಲಿದ್ದ ‘ನಿನ್ನ ಸನಿಹಕೆ’ ಚಿತ್ರತಂಡಕ್ಕೆ ನಿರಾಸೆ

Published On - 5:10 pm, Fri, 8 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ