AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು
ರಾಜ್​ ಕುಂದ್ರಾ
TV9 Web
| Edited By: |

Updated on:Aug 02, 2021 | 7:28 PM

Share

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿತ್ತು. ಈ ಬಂಧನವನ್ನು ಪ್ರಶ್ನಿಸಿ ರಾಜ್​ ಕುಂದ್ರಾ ಅವರು ಬಾಂಬೇ ಹೈಕೋರ್ಟ್​ ಮೊರೆ ಹೋಗಿದ್ದಾರೆ. ತಮಗೆ ಜಾಮೀನು ನೀಡುವಂತೆ ಕೋರಿದ್ದಾರೆ. ಆದರೆ, ಈ ಅರ್ಜಿಯನ್ನು ವಜಾ ಮಾಡುವಂತೆ ಮುಂಬೈ ಪೊಲೀಸರ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. ಅಲ್ಲದೆ, ಸಾಕ್ಷ್ಯ ನಾಶದ ಗಂಭೀರ ಆರೋಪವನ್ನು ಕೂಡ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದರಲ್ಲಿ ಇವರ ಪಾತ್ರ ದೊಡ್ಡದಿದೆ ಎನ್ನಲಾಗಿದೆ. ಈ ಕುರಿತು ಮುಂಬೈ ಪೊಲೀಸರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

‘ರಾಜ್​ ಕುಂದ್ರಾ ಹಾಗೂ ರಯಾನ್​ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದಾರೆ. ಎಷ್ಟು ಡೇಟಾ ಡಿಲೀಟ್​ ಮಾಡಲಾಗಿದೆ ಎಂಬುದು ಗೊತ್ತಿಲ್ಲ. ಡಿಲೀಟ್​ ಆದ ಡೇಟಾಗಳನ್ನು ನಾವು ಮರಳಿ ಪಡೆಯೋಕೆ ಪ್ರಯತ್ನಿಸುತ್ತಿದ್ದೇವೆ. ಆರೋಪಿಯು ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡುತ್ತಿದ್ದಾನೆ ಎಂದಾದರೆ ತನಿಖಾ ಸಂಸ್ಥೆಯು ಇದನ್ನು ಸುಮ್ಮನೆ ನೋಡುತ್ತಿರಬೇಕೇ? ಇದು ಸಾಧ್ಯವಿಲ್ಲ’ ಎಂದು ಸರ್ಕಾರದ ಪರ ವಕೀಲೆ ಅರುಣಾ ಪೈ ಕೋರ್ಟ್​ಗೆ ಹೇಳಿದ್ದಾರೆ.

ರಾಜ್​ ಕುಂದ್ರಾ ಪರ ವಕೀಲರು ಸಾಕ್ಷ್ಯ ನಾಶದ ಹೇಳಿಕೆಯನ್ನು ನಿರಾಕರಿಸಿದ್ದಾರೆ. ‘ರಾಜ್​ ಕುಂದ್ರಾಗೆ ಸಂಬಂಧಿಸಿದ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ಶೋಧದ ಸಮಯದಲ್ಲೇ ವಶಪಡಿಸಿಕೊಂಡಿದ್ದಾರೆ. ಹೀಗಿರುವಾಗ ಸಾಕ್ಷ್ಯ ನಾಶ ಮಾಡೋಕೆ ಹೇಗೆ ಸಾಧ್ಯ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಲ್ಯಾಪ್​ಟಾಪ್​ನಿಂದ ಅಶ್ಲೀಲ ಸಿನಿಮಾಗಳು, ಹಣಕಾಸಿನ ಯೋಜನೆ ಮೊದಲಾದ ಕೆಲ ಪ್ರಮುಖ ಮಾಹಿತಿಯನ್ನು ಮುಂಬೈ ಕ್ರೈಮ್​ ಬ್ರ್ಯಾಂಚ್​ ವಶಕ್ಕೆ ಪಡೆದಿದೆ. ಇದರ ಜತೆಗೆ ರಾಜ್​ ಕುಂದ್ರಾ ಹಾಗೂ ಅವರ ಭಾವ ಪ್ರದೀಪ್​ ಭಕ್ಷಿ ಜತೆ ನಡೆದ ಇಮೇಲ್​ ಸಂಭಾಷಣೆ ಕೂಡ ಪೊಲೀಸರಿಗೆ ಸಿಕ್ಕಿದೆ. ಕೆಲವು ಮಾಹಿತಿಗಳು ಡಿಲೀಟ್​ ಆಗಿವೆ’ ಎಂದು ಅರುಣಾ ಪೈ ಕೋರ್ಟ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ನನ್ನಿಂದ ಬಲವಂತವಾಗಿ ರಾಜ್​ ಕುಂದ್ರಾ ಹೆಸರು ಹೇಳಿಸಲು ಪ್ರಯತ್ನಿಸಿದ್ರು; ನಟಿ ಗೆಹನಾ ಸ್ಫೋಟಕ ಆರೋಪ

Published On - 7:22 pm, Mon, 2 August 21

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!