AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು
ರಾಜ್​ ಕುಂದ್ರಾ
TV9 Web
| Edited By: |

Updated on:Aug 02, 2021 | 7:28 PM

Share

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿತ್ತು. ಈ ಬಂಧನವನ್ನು ಪ್ರಶ್ನಿಸಿ ರಾಜ್​ ಕುಂದ್ರಾ ಅವರು ಬಾಂಬೇ ಹೈಕೋರ್ಟ್​ ಮೊರೆ ಹೋಗಿದ್ದಾರೆ. ತಮಗೆ ಜಾಮೀನು ನೀಡುವಂತೆ ಕೋರಿದ್ದಾರೆ. ಆದರೆ, ಈ ಅರ್ಜಿಯನ್ನು ವಜಾ ಮಾಡುವಂತೆ ಮುಂಬೈ ಪೊಲೀಸರ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. ಅಲ್ಲದೆ, ಸಾಕ್ಷ್ಯ ನಾಶದ ಗಂಭೀರ ಆರೋಪವನ್ನು ಕೂಡ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದರಲ್ಲಿ ಇವರ ಪಾತ್ರ ದೊಡ್ಡದಿದೆ ಎನ್ನಲಾಗಿದೆ. ಈ ಕುರಿತು ಮುಂಬೈ ಪೊಲೀಸರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

‘ರಾಜ್​ ಕುಂದ್ರಾ ಹಾಗೂ ರಯಾನ್​ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದಾರೆ. ಎಷ್ಟು ಡೇಟಾ ಡಿಲೀಟ್​ ಮಾಡಲಾಗಿದೆ ಎಂಬುದು ಗೊತ್ತಿಲ್ಲ. ಡಿಲೀಟ್​ ಆದ ಡೇಟಾಗಳನ್ನು ನಾವು ಮರಳಿ ಪಡೆಯೋಕೆ ಪ್ರಯತ್ನಿಸುತ್ತಿದ್ದೇವೆ. ಆರೋಪಿಯು ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡುತ್ತಿದ್ದಾನೆ ಎಂದಾದರೆ ತನಿಖಾ ಸಂಸ್ಥೆಯು ಇದನ್ನು ಸುಮ್ಮನೆ ನೋಡುತ್ತಿರಬೇಕೇ? ಇದು ಸಾಧ್ಯವಿಲ್ಲ’ ಎಂದು ಸರ್ಕಾರದ ಪರ ವಕೀಲೆ ಅರುಣಾ ಪೈ ಕೋರ್ಟ್​ಗೆ ಹೇಳಿದ್ದಾರೆ.

ರಾಜ್​ ಕುಂದ್ರಾ ಪರ ವಕೀಲರು ಸಾಕ್ಷ್ಯ ನಾಶದ ಹೇಳಿಕೆಯನ್ನು ನಿರಾಕರಿಸಿದ್ದಾರೆ. ‘ರಾಜ್​ ಕುಂದ್ರಾಗೆ ಸಂಬಂಧಿಸಿದ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ಶೋಧದ ಸಮಯದಲ್ಲೇ ವಶಪಡಿಸಿಕೊಂಡಿದ್ದಾರೆ. ಹೀಗಿರುವಾಗ ಸಾಕ್ಷ್ಯ ನಾಶ ಮಾಡೋಕೆ ಹೇಗೆ ಸಾಧ್ಯ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಲ್ಯಾಪ್​ಟಾಪ್​ನಿಂದ ಅಶ್ಲೀಲ ಸಿನಿಮಾಗಳು, ಹಣಕಾಸಿನ ಯೋಜನೆ ಮೊದಲಾದ ಕೆಲ ಪ್ರಮುಖ ಮಾಹಿತಿಯನ್ನು ಮುಂಬೈ ಕ್ರೈಮ್​ ಬ್ರ್ಯಾಂಚ್​ ವಶಕ್ಕೆ ಪಡೆದಿದೆ. ಇದರ ಜತೆಗೆ ರಾಜ್​ ಕುಂದ್ರಾ ಹಾಗೂ ಅವರ ಭಾವ ಪ್ರದೀಪ್​ ಭಕ್ಷಿ ಜತೆ ನಡೆದ ಇಮೇಲ್​ ಸಂಭಾಷಣೆ ಕೂಡ ಪೊಲೀಸರಿಗೆ ಸಿಕ್ಕಿದೆ. ಕೆಲವು ಮಾಹಿತಿಗಳು ಡಿಲೀಟ್​ ಆಗಿವೆ’ ಎಂದು ಅರುಣಾ ಪೈ ಕೋರ್ಟ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ನನ್ನಿಂದ ಬಲವಂತವಾಗಿ ರಾಜ್​ ಕುಂದ್ರಾ ಹೆಸರು ಹೇಳಿಸಲು ಪ್ರಯತ್ನಿಸಿದ್ರು; ನಟಿ ಗೆಹನಾ ಸ್ಫೋಟಕ ಆರೋಪ

Published On - 7:22 pm, Mon, 2 August 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು