AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು
ರಾಜ್​ ಕುಂದ್ರಾ
TV9 Web
| Edited By: |

Updated on:Aug 02, 2021 | 7:28 PM

Share

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿತ್ತು. ಈ ಬಂಧನವನ್ನು ಪ್ರಶ್ನಿಸಿ ರಾಜ್​ ಕುಂದ್ರಾ ಅವರು ಬಾಂಬೇ ಹೈಕೋರ್ಟ್​ ಮೊರೆ ಹೋಗಿದ್ದಾರೆ. ತಮಗೆ ಜಾಮೀನು ನೀಡುವಂತೆ ಕೋರಿದ್ದಾರೆ. ಆದರೆ, ಈ ಅರ್ಜಿಯನ್ನು ವಜಾ ಮಾಡುವಂತೆ ಮುಂಬೈ ಪೊಲೀಸರ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. ಅಲ್ಲದೆ, ಸಾಕ್ಷ್ಯ ನಾಶದ ಗಂಭೀರ ಆರೋಪವನ್ನು ಕೂಡ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದರಲ್ಲಿ ಇವರ ಪಾತ್ರ ದೊಡ್ಡದಿದೆ ಎನ್ನಲಾಗಿದೆ. ಈ ಕುರಿತು ಮುಂಬೈ ಪೊಲೀಸರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

‘ರಾಜ್​ ಕುಂದ್ರಾ ಹಾಗೂ ರಯಾನ್​ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದಾರೆ. ಎಷ್ಟು ಡೇಟಾ ಡಿಲೀಟ್​ ಮಾಡಲಾಗಿದೆ ಎಂಬುದು ಗೊತ್ತಿಲ್ಲ. ಡಿಲೀಟ್​ ಆದ ಡೇಟಾಗಳನ್ನು ನಾವು ಮರಳಿ ಪಡೆಯೋಕೆ ಪ್ರಯತ್ನಿಸುತ್ತಿದ್ದೇವೆ. ಆರೋಪಿಯು ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡುತ್ತಿದ್ದಾನೆ ಎಂದಾದರೆ ತನಿಖಾ ಸಂಸ್ಥೆಯು ಇದನ್ನು ಸುಮ್ಮನೆ ನೋಡುತ್ತಿರಬೇಕೇ? ಇದು ಸಾಧ್ಯವಿಲ್ಲ’ ಎಂದು ಸರ್ಕಾರದ ಪರ ವಕೀಲೆ ಅರುಣಾ ಪೈ ಕೋರ್ಟ್​ಗೆ ಹೇಳಿದ್ದಾರೆ.

ರಾಜ್​ ಕುಂದ್ರಾ ಪರ ವಕೀಲರು ಸಾಕ್ಷ್ಯ ನಾಶದ ಹೇಳಿಕೆಯನ್ನು ನಿರಾಕರಿಸಿದ್ದಾರೆ. ‘ರಾಜ್​ ಕುಂದ್ರಾಗೆ ಸಂಬಂಧಿಸಿದ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ಶೋಧದ ಸಮಯದಲ್ಲೇ ವಶಪಡಿಸಿಕೊಂಡಿದ್ದಾರೆ. ಹೀಗಿರುವಾಗ ಸಾಕ್ಷ್ಯ ನಾಶ ಮಾಡೋಕೆ ಹೇಗೆ ಸಾಧ್ಯ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಲ್ಯಾಪ್​ಟಾಪ್​ನಿಂದ ಅಶ್ಲೀಲ ಸಿನಿಮಾಗಳು, ಹಣಕಾಸಿನ ಯೋಜನೆ ಮೊದಲಾದ ಕೆಲ ಪ್ರಮುಖ ಮಾಹಿತಿಯನ್ನು ಮುಂಬೈ ಕ್ರೈಮ್​ ಬ್ರ್ಯಾಂಚ್​ ವಶಕ್ಕೆ ಪಡೆದಿದೆ. ಇದರ ಜತೆಗೆ ರಾಜ್​ ಕುಂದ್ರಾ ಹಾಗೂ ಅವರ ಭಾವ ಪ್ರದೀಪ್​ ಭಕ್ಷಿ ಜತೆ ನಡೆದ ಇಮೇಲ್​ ಸಂಭಾಷಣೆ ಕೂಡ ಪೊಲೀಸರಿಗೆ ಸಿಕ್ಕಿದೆ. ಕೆಲವು ಮಾಹಿತಿಗಳು ಡಿಲೀಟ್​ ಆಗಿವೆ’ ಎಂದು ಅರುಣಾ ಪೈ ಕೋರ್ಟ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ನನ್ನಿಂದ ಬಲವಂತವಾಗಿ ರಾಜ್​ ಕುಂದ್ರಾ ಹೆಸರು ಹೇಳಿಸಲು ಪ್ರಯತ್ನಿಸಿದ್ರು; ನಟಿ ಗೆಹನಾ ಸ್ಫೋಟಕ ಆರೋಪ

Published On - 7:22 pm, Mon, 2 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್